Homeಕರ್ನಾಟಕಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿ ಜನರ ಒಗ್ಗಟ್ಟು ಒಡೆಯುವುದೇ ಭೂಸ್ವಾಧೀನ ಪರ ತಂಡದ ದುರುದ್ದೇಶ; ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ನಮ್ಮ ಜೊತೆಗಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

1195 ದಿನಗಳಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಅಂತಿಮ ಹಂತ ತಲುಪಿದ್ದು, ಜು.15 ರಂದು ತನ್ನ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮಧ್ಯೆ, ದೇವನಹಳ್ಳಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ನಾವು ಭೂಸ್ವಾಧೀನ ಪರವಾಗಿದ್ದೇವೆ ಎಂದು ಪತ್ರಿಕಾಗೋಷ್ಠಿ ನಡೆಸಿರುವುದು ನೈಜ ಹೋರಾಟಗಾರರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರಳ್ಳಿ ಶ್ರೀನಿವಾಸ್, “1195 ದಿನಗಳ ಹೋರಾಟವನ್ನು ನೈಜ ರೈತರೇ ನಡೆಸಿದ್ದಾರೆ, ತಮ್ಮ ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ಇಂದು ಇಲ್ಲಿದ್ದಾರೆ. ಆದರೆ, ಭೂಮಿ ಮಾರುವವರು ಮತ್ತು ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ” ಎಂದರು.

“ಇತ್ತೀಚೆಗೆ ಭೂಮಿ ಕೊಡುವುದಾಗಿ ಹೇಳಿ ಕೆಲವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಹೋರಾಟ ನಿರ್ಣಾಯಕ ಹಂತ ತಲುಪಿರುವಾಗ ಈ ರೀತಿಯ ಪ್ರಚೋದನೆಗೆ ಸರ್ಕಾರವೇ ನೇರ ಕಾರಣ. ಜೂನ್ 25 ರ ‘ದೇವನಹಳ್ಳಿ ಹೋರಾಟ’ದ ಬಳಿಕ ನಮ್ಮ ಹೋರಾಟ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. 4 ನೇ ತಾರೀಕು ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ತೆಗೆದುಕೊಳ್ಳಲು 10 ದಿನ ಸಮಯ ಕೇಳಿದ್ದರು, ಡಿನೋಟಿಫೈ ಮಾಡಲು ಕಾನೂನು ತೊಡಕಿದೆ ಎಂದು ಹೇಳಿದ್ದರು. ಹೀಗೆ ಹೇಳಿದ ಬಳಿಕ ಸರ್ಕಾರ ನಡೆದುಕೊಳ್ಳುತ್ತಿರುವುದು ಸರಿಯಲ್ಲ; ಸಚಿವ ಎಂ.ಬಿ. ಪಾಟೀಲ್ ಅವರ ನಡೆಯೂ ಒಪ್ಪುವುದಕ್ಕೆ ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಮುಖ್ಯಮಂತ್ರಿ ಯಾರು?

“ನಮಗೆ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಅನುಮಾನ ಕಾಡುತ್ತಿದೆ ಎಂ.ಬಿ. ಪಾಟೀಲ್ ಅಥವಾ ಸಿದ್ದರಾಮಯ್ಯನವರೋ? ಭೂಸ್ವಾಧೀನ ವಿಚಾರದಲ್ಲಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ” ಎಂದರು.

“ಎಸ್‌ಸಿ-ಎಸ್‌ಟಿ ಸಮುದಾಯವನ್ನು ಮುಂದೆ ಇಟ್ಟುಕೊಂಡು ಭೂಮಿ ಕೊಡುತ್ತಾರೆ ಎಂದು ಮಾರಾಟ ಮಾಡಿಸುವ ಮಧ್ಯವರ್ತಿಗಳು ಸುಳ್ಳು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡುವವರು ಮತ್ತು ಅದರ ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ. ಎಲ್ಲ ದಲಿತರೂ ಭೂಮಿ ಕೊಡುತ್ತಾರೆ ಎಂಬ ಮಧ್ಯವರ್ತಿಗಳ ಆರೋಪ ನಿಜವಲ್ಲ. ಹೊಲೆಯ ಮತ್ತು ಮಾದಿಗ ಸಮುದಾಯದ ಜಮೀನು ಮಾಲೀಕರು ಇಲ್ಲೇ ಇದ್ದಾರೆ. ಅವರು ಯಾವುದೇ ಕಾರಣಕ್ಕೂ ಭೂಮಿ ಕೊಡುವುದಕ್ಕೆ ಒಪ್ಪುವುದಿಲ್ಲ” ಎಂದು ಹೇಳಿದರು.

“ಹೊಲದಲ್ಲಿ ದುಡಿಯುವ ಎಲ್ಲ ಹಿಂದುಳಿದ ಜಾತಿ ಜನರೂ ಇಲ್ಲಿದ್ದಾರೆ, ಅವರೆಲ್ಲರೂ ಭೂಮಿ ಕೊಡುವುದಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಒಗ್ಗಟ್ಟು ಮುರಿಯಲು ಜಗಳ ತಂದಿಡಲು ಯತ್ನಿಸುತ್ತಿದ್ದಾರೆ. ‘ಹಸಿರು ವಲಯ’ ಎಂದು ಹೇಳಿ ಭಯ ಹುಟ್ಟಿಸುತ್ತಿದ್ದಾರೆ. ಪತ್ರಿಕೆಯೊಂದರ ಊಹಾತ್ಮಕ ಸುದ್ದಿಯನ್ನೇ ಸರ್ಕಾರದ ಆದೇಶ ಎಂದು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿಯೇ ರೈತರು ಇಷ್ಟು ದಿನದಿಂದ ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ, ಹೊಲವನ್ನು ಉತ್ತಿಬಿತ್ತಿ, ಅನ್ನ ಬೆಳೆಯುವ ರೈತರಿಗೆ ‘ಹಸಿರು ವಲಯ’ವೇ ಬೇಕು. ಮಧ್ಯವರ್ತಿಗಳು ಮಾತ್ರ ‘ಹಳದಿ ವಲಯ’ ಕೇಳುತ್ತಿದ್ದಾರೆ” ಎಂದರು.

“ಕೆಐಎಡಿಬಿ ನೋಟಿಸ್ ಕೊಡುವುದಕ್ಕೂ ಮೊದಲೇ ಭೂಮಿ ಮಾರಾಟಕ್ಕೆ ಅಗ್ರಿಮೆಂಟ್ (ಮಾರಾಟ ಒಪ್ಪಂದ) ಮಾಡಿಸಿಕೊಂಡಿದ್ದವರು ಆತಂಕದಿಂದ ಜನರನ್ನು ಕರೆದುಕೊಂಡು ಹೋಗಿದ್ದಾರೆ. ದಲಿತರಿಗೆ ಬೆದರಿಕೆ ಹಾಕುತ್ತಿರುವ ಇಂಥ ಪುಡಾರಿಗಳನ್ನು ಸರ್ಕಾರ ಒದ್ದು ಜೈಲಿಗೆ ಹಾಕಬೇಕು” ಎಂದು ಆಗ್ರಹಿಸಿದರು.

ಸರ್ಕಾರ ಪತನವಾದರೂ ಆಗಬಹುದು

“ಈಗ ಭೂಸ್ವಾಧೀನ ಪರವಾಗಿ ಮಾತನಾಡುತ್ತಿರುವವರಿಗೆ ನಮ್ಮನ್ನು ನೇರವಾಗಿ ಎದುರಿಸಲು ತಾಕತ್ತಿಲ್ಲ; ಮೂರೂವರೆ ವರ್ಷದ ಹೋರಾಟ ನೋಡಿದ ಅವರಿಗೆ ನಮ್ಮ ಶಕ್ತಿ ಏನೆಂಬುದು ಗೊತ್ತಿದೆ. ನಮ್ಮ ತಂಟೆಗೆ ಒಂದರೆ ಏನೂ ಮಾಡಲು ಸಾಧ್ಯವಿಲ್ಲ ಎಂಬುದು ಅರಿವು ಅವರಿಗಿದೆ. ಜು.25ರಂದು ರೈತರ ಪರವಾಗಿ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಇದೇ ಕಾರಣಕ್ಕೆ ಅವರ ಸರ್ಕಾರ ಪತನವಾದರೂ ಆಗಬಹುದು. ಒಂದು ವೇಳೆ ಈ ಸರ್ಕಾರ ನಮ್ಮ ವಿರುದ್ಧವೇನಾದರೂ ನಿರ್ಧಾರ ಮಾಡಿದರೆ, ನಮ್ಮ ಚಳವಳಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುತ್ತೇವೆ. ಇದು ರೈತರ ನೈಜ ಹೋರಾಟ, ನಮ್ಮ ಹೋರಾಟ ಬೆಂಬಲಿಸುವಂತೆ ಅನ್ನ ತಿನ್ನುವ ಎಲ್ಲ ಕೈಗಳಿಗೆ ಮನವಿ ಮಾಡುತ್ತೇವೆ” ಎಂದರು.

ಮಟ್ಟಬಾರ್ಲು ಗ್ರಾಮದ ರೈತ ಮಹಿಳೆ ಮುನಿವೆಂಕಟಮ್ಮ ಮಾತನಾಡಿ, “ಭೂಮಿ ಕೊಡಲು ಎಷ್ಟು ಜನ ಸಿದ್ಧರಿದ್ದಾರೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸಬೇಕು. ಜು.25ರಂದು ನಮ್ಮ ಪರವಾಗಿ ನಿರ್ಧಾರ ಮಾಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗುತ್ತದೆ. ಏಕೆಂದರೆ, ರಾಜ್ಯದ ಎಲ್ಲ ಜನಪರ ಹೋರಾಟಗಾರರ ಬೆಂಬಲ ನಮಗಿದೆ” ಎಂದರು.

“ಸಚಿವ ಎಂ.ಬಿ. ಪಾಟೀಲ್‌ಗೆ ದುಡ್ಡು ಬೇಕಿದೆ; ಅದಕ್ಕಾಗಿ ನಕಲಿ ಜನರನ್ನು ಸೃಷ್ಟಿ ಮಾಡಿದ್ದಾರೆ. ಆ ಮೂಲಕ ನಮ್ಮ ಒಗ್ಗಟ್ಟು ಒಡೆಯುವ ಕುತಂತ್ರ ಮಾಡುತ್ತಿದ್ದಾರೆ. ಇದೆಲ್ಲಾ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮುನಿಯಪ್ಪ ಅವರಿಗೆ ಕಾಣುತ್ತಿಲ್ಲವೇ? ಸುಳ್ಳು ಸಾಕ್ಷಿ ಹೇಳುವವರ ಮಾತು ಕೇಳುವ ಮೂಲಕ ನಮ್ಮ ಹೋರಾಟದ ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದರು.

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚೀಮಾಚನಹಳ್ಳಿ ಲಕ್ಷ್ಮಿ ಮಾತನಾಡಿ, “ಕೆಲವರಿಗೆ ದುಡ್ಡಿನ ಆಸೆ ತೋರಿಸಿ ಹಾಗೂ ಹಸಿರು ವಲಯ ಆಗತ್ತದೆ ಎಂದು ಭಯ ಹುಟ್ಟಿಸಿ ಜನರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ನಮ್ಮಲ್ಲಿ ಶೇ.90 ರಷ್ಟು ಜನ ಭೂಮಿ ಕೊಡುವುದಿಲ್ಲ ಎಂದು ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿಗೆ ಹೋಗಿರುವ ಬಹುತೇಕರನ್ನು ಬೆದರಿಸಲಾಗಿದೆ. ಕೆಲವೇಕೆಲವು ಜನಕ್ಕೆ ಮಾತ್ರ ದುಡ್ಡು ಬೇಕು. ಆದರೆ, ಬಹುತೇಕರ ಆಯ್ಕೆ ಕೃಷಿ ಆಗಿದೆ” ಎಂದರು.

ನಲ್ಲಪ್ಪನಹಳ್ಳಿಯ ಇಂಜಿನಿಯರಿಂಗ್ ಪದವೀಧರೆ ಬಿಂದು ಮಾತನಾಡಿ, “ಭೂಮಿ ಕೊಡುತ್ತೇವೆ ಎಂದು ಬೆಂಗಳೂರಿಗೆ ಹೋಗಿರುವವರು ದುಡ್ಡಿಗಾಗಿ ತೆರಳಿದ್ದಾರೆ. ಆದರೆ, ನಾವು ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಸುತ್ತಮುತ್ತಲಿನ ಕಾರ್ಖಾನೆಗಳಿಂದ ನಮ್ಮಲ್ಲಿ ಹೆಚ್ಚಿನ ಮಾಲಿನ್ಯ ಆಗುತ್ತಿದೆ. ಇದು ನಮ್ಮ ಅಸ್ತಿತ್ವದ ಪ್ರಶ್ನೆ; ಒಂದೇ ಕಡೆ ಕಾರ್ಖಾನೆಗಳನ್ನು ಕಟ್ಟುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಕಷ್ಟವಾಗುತ್ತದೆ” ಎಂದರು.

“ಇಂಜಿನಿಯರಿಂಗ್ ಪದವಿ ಮಾಡಿದ್ದರೂ ಕೃಷಿಯಲ್ಲಿ ನಾವು ನೆಮ್ಮದಿಯಾಗಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ‘ಹಸಿರು ಉಳಿಸಿ’ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರು ಈಗ ನಮ್ಮ ಭೂಮಿಯನ್ನೇ ಕಿತ್ತುಕೊಳ್ಳುತ್ತಿದ್ದಾರೆ. ರೈತರನ್ನು ಬೆಂಬಲಿಸದ ಸರ್ಕಾರ ನಮಗೆ ಯಾಕೆ ಬೇಕು? ಸ್ವಾತಂತ್ರ್ಯ ಪೂರ್ವದಿಂದಲೂ ನಾವು ಹೋರಾಟ ಮಾಡಿಕೊಂಡೆ ಎಲ್ಲವನ್ನೂ ಪಡೆದುಕೊಳ್ಳಬೇಕು; ಈಗ ನಮ್ಮ ಭೂಮಿ ಉಳಿಸಿಕೊಳ್ಳಲೂ ಹೋರಾಡಬೇಕಿದೆ. ಮುಖ್ಯಮಂತ್ರಿಗಳು ರೈತರ ಪರವಾಗಿ ನಿಲ್ಲಲೇಬೇಕು” ಎಂದು ಬಿಂದು ಆಗ್ರಹಿಸಿದರು.

ನಲ್ಲಪ್ಪನಹಳ್ಳಿ ಗ್ರಾಮದ ಕೃಷಿ ಪದವೀಧರ, ಆಧುನಿಕ ಕೃಷಿಕ ವಿನಯ್ ಮಾತನಾಡಿ, “13 ಹಳ್ಳಿಗಳ ರೈತರಲ್ಲಿ ಒಗ್ಗಟ್ಟು ಇರಲಿಲ್ಲ ಎಂದಿದ್ದರೆ ನಮ್ಮ ಹೋರಾಟ 1200 ದಿನ ಪೂರೈಸುತ್ತಿರಲಿಲ್ಲ. ನಾವೆಲ್ಲರೂ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭೂಮಿ ಮಾರಿಸುವ ಕೆಲ ಏಜೆಂಟ್‌ಗಳು ನಮ್ಮ ಒಗ್ಗಟ್ಟು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಮಗೆ ಕೃಷಿ ವಲಯ (ಹಸಿರು ವಲಯ) ಬೇಕು; ದಲ್ಲಾಳಿಗಳಿಗೆ ಹಳದಿ ವಲಯ ಬೇಕು. ಅದನ್ನೇ ಮುಂದಿಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ. ಆದರೆ, ಭೂಮಿ ನಂಬಿ ಬದುಕುತ್ತಿರುವ ನಮಗೆ ಹಸಿರು ವಲವೇ ಬೇಕು” ಎಂದು ಹೇಳಿದರು.

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...