Homeಮುಖಪುಟನಾನು ದೇಶದ್ರೋಹಿಯೋ, ದೇಶಪ್ರೇಮಿಯೋ ಎಂಬುದನ್ನು ಜನರೆ ನಿರ್ಧರಿಸುತ್ತಾರೆ: ಪ್ರತಾಪ್ ಸಿಂಹ

ನಾನು ದೇಶದ್ರೋಹಿಯೋ, ದೇಶಪ್ರೇಮಿಯೋ ಎಂಬುದನ್ನು ಜನರೆ ನಿರ್ಧರಿಸುತ್ತಾರೆ: ಪ್ರತಾಪ್ ಸಿಂಹ

- Advertisement -
- Advertisement -

ಸಂಸತ್ತಿನ ಭದ್ರತೆ ಉಲ್ಲಂಘಿಸಿ ಲೋಕಸಭೆಗೆ ನುಗ್ಗಿದ್ದವರಿಗೆ ಪ್ರವೇಶ ಪಾಸ್ ನೀಡಿದ್ದ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ದೇಶದ್ರೋಹಿಯೋ ಅಥವಾ ದೇಶಪ್ರೇಮಿಯೋ ಎಂಬುದನ್ನು, ಬೆಟ್ಟದ ಮೇಲಿರುವ ತಾಯಿ ಚಾಮುಂಡಿ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಜನರು ಅಂತಿಮವಾಗಿ ನಿರ್ಧರಿಸುತ್ತಾರೆ’ ಎಂದು ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ‘ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ನನ್ನ ವಿರುದ್ಧ ಮಾಡಲಾದ ‘ದೇಶದ್ರೋಹಿ’ ಆರೋಪಗಳ ಬಗ್ಗೆ ನಿರ್ಧರಿಸಲು ದೇವರು ಮತ್ತು ನನ್ನ ಬರಹಗಳನ್ನು 20 ವರ್ಷಗಳಿಂದ ಓದಿಕೊಂಡು ಬಂದಿರುವವರಿಗೆ ಬಿಡುತ್ತೇನೆ’ ಎಂದು ಹೇಳಿದರು.

‘ಪ್ರತಾಪಸಿಂಹ ದೇಶದ್ರೋಹಿಯೋ ಅಥವಾ ದೇಶಪ್ರೇಮಿಯೋ ಎನ್ನುವುದನ್ನು ಮೈಸೂರಿನ ಬೆಟ್ಟದ ಮೇಲೆ ಕುಳಿತಿರುವ ಮಾತೆ ಚಾಮುಂಡೇಶ್ವರಿ, ಬ್ರಹ್ಮಗಿರಿಯ ಮೇಲೆ ಕುಳಿತಿರುವ ಕಾವೇರಿ ಮಾತೆ, ಕಳೆದ ಇಪ್ಪತ್ತು ವರ್ಷಗಳಿಂದ ನನ್ನ ಬರಹಗಳನ್ನು ಓದುತ್ತಿರುವ ಕರ್ನಾಟಕದಾದ್ಯಂತ ಇರುವ ನನ್ನ ಓದುಗರು ಮತ್ತು ಕಳೆದ ಒಂಬತ್ತೂವರೆ ವರ್ಷಗಳಿಂದ ನನ್ನ ಕೆಲಸ, ದೇಶ, ಧರ್ಮ ಮತ್ತು ರಾಷ್ಟ್ರೀಯತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನನ್ನ ನಡವಳಿಕೆಯನ್ನು ನೋಡಿದ ಮೈಸೂರು-ಕೊಡಗಿನ ಜನರು ಲೋಕಸಭೆ ಚುನಾವಣೆಯಲ್ಲಿ ಮತಗಳ ಮೂಲಕ ತಮ್ಮ ತೀರ್ಪು ನೀಡಲಿದ್ದಾರೆ’ ಎಂದು ಹೇಳಿದರು.

ಮೈಸೂರಿನಲ್ಲಿ ‘ದೇಶದ್ರೋಹಿ’ ಎಂದು ಹಾಕಲಾದ ಪೋಸ್ಟರ್‌ಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅಂತಿಮವಾಗಿ ಜನರು ತೀರ್ಪು ನೀಡಬೇಕಾಗಿದೆ, ಅವರು ನಾನು ಏನೆಂಬುದನ್ನು ನಿರ್ಧರಿಸುತ್ತಾರೆ; ನಾನು ಅದನ್ನು ಜನರ ನಿರ್ಧಾರಕ್ಕೆ ಬಿಡುತ್ತೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ’ ಎಂದರು.

ಘಟನೆಯ ಕುರಿತು ಪೊಲೀಸರು ನಿಮ್ಮ ಹೇಳಿಕೆ ದಾಖಲಿಸಿದ್ದಾರೆಯೇ ಎಂದು ಕೇಳಿದಾಗ, ‘ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ, ಈ ಬಗ್ಗೆ ಬೇರೆ ಏನನ್ನೂ ಹೇಳುವುದಿಲ್ಲ’ ಎಂದರು.

ಇದನ್ನೂ ಓದಿ; ಹಿಂದಿ ಭಾಷಿಕರು ತಮಿಳುನಾಡಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಾರೆ; ವಿವಾದ ಸೃಷ್ಟಿಸಿದ ದಯಾನಿಧಿ ಮಾರನ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...