Homeಮುಖಪುಟ'ದೇಶವನ್ನು ಹಾಳುಗೆಡವುತ್ತಿರುವ ದಬ್ಬಾಳಿಕೆ ಶಕ್ತಿಗಳನ್ನು ಜನ ಸೋಲಿಸುತ್ತಾರೆ..'; ಕಲ್ಪನಾ ಸೊರೇನ್

‘ದೇಶವನ್ನು ಹಾಳುಗೆಡವುತ್ತಿರುವ ದಬ್ಬಾಳಿಕೆ ಶಕ್ತಿಗಳನ್ನು ಜನ ಸೋಲಿಸುತ್ತಾರೆ..’; ಕಲ್ಪನಾ ಸೊರೇನ್

- Advertisement -
- Advertisement -

‘ತಮ್ಮ ಪತಿ ಹೇಮಂತ್ ಸೊರೆನ್ ಮತ್ತು ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧದ ಆರೋಪಗಳನ್ನು ಯಾರಿಂದಲೂ ಸಾಬೀತುಪಡಿಸಲು ಸಾಧ್ಯವಿಲ್ಲ; ದೇಶವನ್ನು ಹಾಳು ಮಾಡುತ್ತಿರುವ ದಬ್ಬಾಳಿಕೆಯ ಶಕ್ತಿಗಳನ್ನು ಜನತೆ ಸೋಲಿಸುತ್ತಾರೆ’ ಎಂದು ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೆನ್ ಹೇಳಿದ್ದು,”ಪ್ರಜಾಪ್ರಭುತ್ವವನ್ನು ಉಳಿಸಲು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳಿಗೆ ಮತ ಚಲಾಯಿಸಬೇಕು” ಎಂದು ಜನರನ್ನು ಒತ್ತಾಯಿಸಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಲೋಕತಂತ್ರ ಬಚಾವೋ’ (ಪ್ರಜಾಪ್ರಭುತ್ವ ಉಳಿಸಿ) ಮಹಾ ರ್ಯಾಲಿಯಲ್ಲಿ ಮಾತನಾಡಿದ ಕಲ್ಪನಾ, “ಯಾರು ಎಷ್ಟೇ ದೊಡ್ಡವರಾದರೂ ಶ್ರೇಷ್ಠರಾಗಲು ಸಾಧ್ಯವಿಲ್ಲ. ದೊಡ್ಡ ವಿಷಯವೆಂದರೆ ಸಾರ್ವಜನಿಕರು. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ನಿಮ್ಮ ಮತವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಲ್ಲದೆ, ಇಂಡಿಯಾ ಮೈತ್ರಿಕೂಟ ಗೆಲ್ಲಲೇಬೇಕು. ಕೇಜ್ರಿವಾಲ್ 10 ದಿನದಿಂದ ಜೈಲಿನಲ್ಲಿದ್ದಾರೆ. ಎರಡು ತಿಂಗಳ ಹಿಂದೆ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿತ್ತು. ಇದುವರೆಗೂ ಅವರ ಮೇಲಿನ ಆರೋಪ ಸಾಬೀತುಪಡಿಸಲು ಯಾರಿಂದಲೂ ಸಾಧ್ಯವಾಗಿಲ್ಲ; ನಿಮ್ಮ ಮತವೇ ದೊಡ್ಡ ನ್ಯಾಯಾಲಯ” ಎಂದು ಜನರಲ್ಲಿ ಮನವಿ ಮಾಡಿದರು.

ದೆಹಲಿ ಸಿಎಂ ಪತ್ನಿ ಸುನಿತಾ ಕೇಜ್ರಿವಾಲ್ ನಂತರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಲ್ಪನಾ ಸೊರೆನ್, “ದೇಶವನ್ನು ನಾಶಮಾಡಲು ನಿರ್ಧರಿಸಿದ ನಿರಂಕುಶ ಶಕ್ತಿಗಳಿಗೆ ವಿರೋಧವಿದೆ ಎಂಬುದನ್ನು ಈ ಜನಸಾಗರ ಇಂದು ಸಾಬೀತುಪಡಿಸುತ್ತದೆ” ಎಂದು ಹೇಳಿದರು.

“ದೇಶದ ಜನರು ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರಿಗಿಂತ ದೊಡ್ಡವರು. ಪ್ರಜಾಪ್ರಭುತ್ವವನ್ನು ಉಳಿಸಲು ನಮಗೆ ಮತ ನೀಡುವ ಮೂಲಕ ಇಂಡಿಯಾ ಮೈತ್ರಿಯನ್ನು ಬಲಪಡಿಸಿ. ದೇಶವನ್ನು ಹಾಳು ಮಾಡುತ್ತಿರುವ ದಬ್ಬಾಳಿಕೆಯ ಶಕ್ತಿಗಳನ್ನು ಜನತೆ ಸೋಲಿಸುತ್ತಾರೆ. ಇದು ಇಂದಿನ ಜನಸಮೂಹದಿಂದ ಸಾಬೀತಾಗಿದೆ” ಎಂದು ಅವರು ಹೇಳಿದರು.

“ಈ ದೇಶದ 140 ಕೋಟಿ ಜನರೇ ನಮ್ಮ ಶಕ್ತಿ, ಆದರೆ ಬಿಆರ್ ಅಂಬೇಡ್ಕರ್ ಅವರು ನೀಡಿದ ಭರವಸೆಗಳನ್ನು ಕಸಿದುಕೊಳ್ಳುವ ಮತ್ತು ಸಮುದಾಯಗಳ ನಡುವೆ ಒಡಕು ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಎದುರಾಳಿಯನ್ನು ಸೋಲಿಸಿದ ನಂತರವೂ ಗೌರವ ನೀಡಿದ ಭಗವಾನ್ ರಾಮನಿಂದ ನಾವು ಪಾಠ ಕಲಿಯಬೇಕಾಗಿದೆ” ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಭಾರತೀಯ ಜನತಾ ಪಕ್ಷದ (ಬಿಜೆಪಿ) “ಮೋದಿ ಕಿ ಗ್ಯಾರಂಟಿ” ಚುನಾವಣಾ ಘೋಷಣೆಯನ್ನು ಲೇವಡಿ ಮಾಡಿದ ಅವರು, “ಎನ್‌ಡಿಎ ಗ್ಯಾರಂಟಿಯನ್ನು ಯಾರು ತೆಗೆದುಕೊಳ್ಳುತ್ತಾರೆ” ಎಂದು ಪ್ರಶ್ನಿಸಿದರು.

“ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಬೀದಿಗೆ ಬರಬೇಕು, ಜಾರ್ಖಂಡ್ ತಲೆಬಾಗುವುದಿಲ್ಲ. ಈ ಐತಿಹಾಸಿಕ ‘ಸಂಕಲ್ಪ ಸಭೆ’ಯನ್ನು ಇಂದು (ದೇಶದಲ್ಲಿ) ಸರ್ವಾಧಿಕಾರದ ವಿರುದ್ಧ ಆಯೋಜಿಸಲಾಗುತ್ತಿದೆ. ಇಂದು ಇಲ್ಲಿಗೆ ಬಂದಿರುವ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ, ಇದು ಇಂಡಿಯಾ ಮೈತ್ರಿಯನ್ನು ಬಲಪಡಿಸುತ್ತದೆ” ಎಂದು ಅವರು ಹೇಳಿದರು.

ಮೈತ್ರಿಕೂಟದ ಪ್ರಜಾಪ್ರಭುತ್ವ ಉಳಿಸಿ ರ್ಯಾಲಿಯಲ್ಲಿ ದೇಶಾದ್ಯಂತದ ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಯಿಂದ ಮೆಹಬೂಬಾ ಮುಫ್ತಿ, ಸಮಾಜವಾದಿ ಪಕ್ಷದಿಂದ (ಎಸ್‌ಪಿ) ಅಖಿಲೇಶ್ ಯಾದವ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಶರದ್ ಪವಾರ್ (ಶರದ್ಚಂದ್ರ ಪವಾರ್), ನ್ಯಾಷನಲ್ ಕಾನ್ಫರೆನ್ಸ್‌ನಿಂದ ಫಾರೂಕ್ ಅಬ್ದುಲ್ಲಾ ಸೇರಿದಂತೆ ನಾಯಕರು ( ಎನ್‌ಸಿ), ಮತ್ತು ರಾಷ್ಟ್ರೀಯ ಜನತಾ ದಳದಿಂದ (ಆರ್‌ಜೆಡಿ) ತೇಜಸ್ವಿ ಯಾದವ್, ಇತರರು ಒಂದೇ ವೇದಿಕೆಯಲ್ಲಿ ಒಗ್ಗಟ್ಟಿನ ಸಂದೇಶವನ್ನು ರವಾನಿಸಿದರು.

ಇದನ್ನೂ ಓದಿ; ಮ್ಯಾಚ್ ಫಿಕ್ಸಿಂಗ್ ಇಲ್ಲದೆ 400 ಸ್ಥಾನ ಗೆಲ್ಲುವ ಘೋಷಣೆ ಸಾಧ್ಯವಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...