Homeಕರ್ನಾಟಕಕನ್ನಡದಲ್ಲಿ ತೀರ್ಪು ಬರೆದರೆ ಜನರ ವಿಶ್ವಾಸ ಹೆಚ್ಚುತ್ತದೆ: ಜಸ್ಟಿಸ್ ಅರಳಿ ನಾಗರಾಜ

ಕನ್ನಡದಲ್ಲಿ ತೀರ್ಪು ಬರೆದರೆ ಜನರ ವಿಶ್ವಾಸ ಹೆಚ್ಚುತ್ತದೆ: ಜಸ್ಟಿಸ್ ಅರಳಿ ನಾಗರಾಜ

- Advertisement -
- Advertisement -

ನ್ಯಾಯಾಲಯ ನೀಡುವ ತೀರ್ಪುಗಳು ಜನ ಸಾಮಾನ್ಯರಿಗೆ ಅರ್ಥವಾಗುವಂತಿದ್ದರೆ ಕಾನೂನಿನ ಮೇಲೆ ಜನರಿಗೆ ನಂಬಿಕೆ ಉಳಿಯಲು ಸಾಧ್ಯ. ಈ ದಿಸೆಯಲ್ಲಿ ಕನ್ನಡ ಭಾಷೆಯಲ್ಲಿ ನ್ಯಾಯದಾನ ಮಾಡಿದರೆ, ನಮ್ಮಲ್ಲಿನ ಜನರಿಗೆ ನ್ಯಾಯಾಲಯದ ಮೇಲೆ ಹೆಚ್ಚು ನಂಬಿಕೆ, ವಿಶ್ವಾಸ ಬೆಳೆಯುತ್ತದೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜರವರು ಅಭಿಪ್ರಾಯಪಟ್ಟರು.

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನಕ-ಶರೀಫ- ಸರ್ವಜ್ಷ ಪ್ರಧಾನ ವೇದಿಕೆಯಲ್ಲಿ ಎರಡನೆ ಇದನ ನಡೆದ “ಕನ್ನಡದಲ್ಲಿ ಕಾನೂನು ಸಾಹಿತ್ಯ” ಕುರಿತ ಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ್ಯಾಯಾಲಯ ನೀಡುವಂತಹ ತೀರ್ಪುಗಳು ಇಂದಿನ ದಿನಗಳಲ್ಲಿ ಕಕ್ಷಿದಾರರಿಗೆ, ಶ್ರೀಸಾಮಾನ್ಯರಿಗೆ ಅರ್ಥವಾಗದ ಕಾರಣ, ಪ್ರಕರಣಗಳು ದೀರ್ಘಕಾಲ ಎಳೆಯುತ್ತಿವೆ. ನ್ಯಾಯಾಲಯದಲ್ಲಿ ಪ್ರಕರಣಗಳ ತೀರ್ಪುಗಳು ವಿಳಂಬವಾಗುತ್ತವೆ. ಆದ್ದರಿಂದ ಶ್ರೀಸಾಮಾನ್ಯರಿಗೆ ಕಥೆಗಳ ಮೂಲಕ, ನಾಟಕಗಳ ಮೂಲಕ, ಸಾಹಿತ್ಯಗಳ ಮೂಲಕ ಅವರ ಮಾತೃಭಾಷೆಯಲ್ಲಿ ತಿಳಿವಳಿಕೆ ಮೂಡುಸುವುದರ ಮೂಲಕ ಸಾಮಾನ್ಯ ಕಾನೂನುಗಳ ಬಗ್ಗೆ ಅರಿವು ಮೂಡಸಬೇಕಿದೆ ಎಂದು ಹೇಳಿದರು.

ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ. ಬಸವರಾಜ ಮಾತನಾಡಿ, “ಕಾನೂನಾತ್ಮಕ ಪುಸ್ತಕಗಳು ಹೆಚ್ಚಿನ ಪ್ರಮಾಣದಲ್ಲಿ ಕನ್ನಡದಲ್ಲಿ ಹೊರಬರುವಂತೆ ಮಾಡಲು ಸರ್ಕಾರ ಕನ್ನಡ ಕಾನೂನು ಪ್ರಾಧಿಕಾರ ರಚನೆ ಮಾಡಬೇಕು. ಕನ್ನಡ ಕಾನೂನು ಪ್ರಾಧಿಕಾರ ರಚಿಸುವುದರ ಮೂಲಕ ಹೆಚ್ಚು ಸಂಶೋಧನಾತ್ಮಕ ಕನ್ನಡ ಕಾನೂನು ಪುಸ್ತಕಗಳು ರಚಿಸುವುದ ಮೂಲಕ ಯುವ ಸಾಹಿತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಕರ್ನಾಟಕದಲ್ಲಿ ಇಂದು ಸುಮಾರು 109 ಕಾನೂನು ಕಾಲೇಜುಗಳಿದ್ದು, ಕಾನೂನಾತ್ಮಕ ಕನ್ನಡ ಪುಸ್ತಕಗಳು ದೊರಕದೇ ಇರುವುದು ದುರ್ದೈವದ ಸಂಗತಿಯಾಗಿದೆ. ಕಾನೂನು ವ್ಯಾಸಂಗಕ್ಕೆ ಹೆಚ್ಚು ಸಂಶೋಧನಾತ್ಮಕ ಪುಸ್ತಕಗಳು ದೊರಕಿಸಿಕೊಡುವುದರ ಮೂಲಕ ಕನ್ನಡ ಭಾಷಾಭಿಮಾನ ಹೆಚ್ಚಿಸುವುದಲ್ಲದೇ, ಕನ್ನಡ ಕಾನೂನಾತ್ಮಕ ಸಾಹಿತ್ಯ ಬೆಳಿಸುವುದರಲ್ಲಿ ಸಹಕಾರಿಯಾಗುತ್ತದೆ. ಇದಲ್ಲದೇ ಕಾನೂನಾತ್ಮಕ ಸಾಹಿತ್ಯ ಬರೆಯುವ ಯುವ ಸಾಹಿತಿಗಳಿಗೆ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು ಎಂದರು.

‘ಶ್ರೀಸಾಮಾನ್ಯರಿಗೆ ಕನ್ನಡದಲ್ಲಿ ಕಾನೂನು ಅರಿವು’ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿದ್ದಪ್ಪ ಕೆಂಪಗೌಡರ ಮಾತನಾಡಿ, “ನ್ಯಾಯಾಲಯಗಳು ಇರುವುದು ನ್ಯಾಯಾಧೀಶರಿಗಲ್ಲ, ನ್ಯಾಯಾಲಯ ಇರುವುದು ಶ್ರೀಸಾಮಾನ್ಯರಿಗೆ. ಆದ್ದರಿಂದ ಪ್ರತಿಯೊಬ್ಬ ಶ್ರೀಸಾಮಾನ್ಯರಿಗೂ ಸಾಮಾನ್ಯ ಕಾನೂನು ತಿಳುವಳಿಕೆ ಅಗತ್ಯವಾಗಿದೆ. ಸಾಮಾನ್ಯ ಜನರು ‘ನನಗೆ ಕಾನೂನು ಗೊತ್ತಿಲ್ಲ ಎನ್ನಬಾರದು, ಕಾನೂನು ತಪ್ಪು ಮಾಡಿದರೆ ಕ್ಷಮಿಸುವುದಿಲ್ಲ. ನ್ಯಾಯಾಧೀಶರು ಕೇವಲ ಪ್ರಶಸ್ತಿಗಾಗಿ ಕನ್ನಡ ಭಾಷೆಯಲ್ಲಿ ತೀರ್ಪು ನೀಡುವುದಲ್ಲ, ನ್ಯಾಯಾಧೀಶರಿಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ. ತಾವು ನೀಡುವ ತೀರ್ಪುಗಳು ಕನ್ನಡದಲ್ಲಿದ್ದರೆ ಶ್ರೀಸಾಮಾನ್ಯರಿಗೂ, ಕಕ್ಷಿದಾದರಿಗೂ ನ್ಯಾಯ ಒದಗಿಸಿದಂತೆ ಮತ್ತು ಕನ್ನಡ ಭಾಷಾಭಿಮಾನ ಬೆಳಿಸಿದಂತೆ ಎಂದರು.

ಇದನ್ನೂ ಓದಿ:  ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...