Homeಕರ್ನಾಟಕಕನ್ನಡದಲ್ಲಿ ತೀರ್ಪು ಬರೆದರೆ ಜನರ ವಿಶ್ವಾಸ ಹೆಚ್ಚುತ್ತದೆ: ಜಸ್ಟಿಸ್ ಅರಳಿ ನಾಗರಾಜ

ಕನ್ನಡದಲ್ಲಿ ತೀರ್ಪು ಬರೆದರೆ ಜನರ ವಿಶ್ವಾಸ ಹೆಚ್ಚುತ್ತದೆ: ಜಸ್ಟಿಸ್ ಅರಳಿ ನಾಗರಾಜ

- Advertisement -
- Advertisement -

ನ್ಯಾಯಾಲಯ ನೀಡುವ ತೀರ್ಪುಗಳು ಜನ ಸಾಮಾನ್ಯರಿಗೆ ಅರ್ಥವಾಗುವಂತಿದ್ದರೆ ಕಾನೂನಿನ ಮೇಲೆ ಜನರಿಗೆ ನಂಬಿಕೆ ಉಳಿಯಲು ಸಾಧ್ಯ. ಈ ದಿಸೆಯಲ್ಲಿ ಕನ್ನಡ ಭಾಷೆಯಲ್ಲಿ ನ್ಯಾಯದಾನ ಮಾಡಿದರೆ, ನಮ್ಮಲ್ಲಿನ ಜನರಿಗೆ ನ್ಯಾಯಾಲಯದ ಮೇಲೆ ಹೆಚ್ಚು ನಂಬಿಕೆ, ವಿಶ್ವಾಸ ಬೆಳೆಯುತ್ತದೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜರವರು ಅಭಿಪ್ರಾಯಪಟ್ಟರು.

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನಕ-ಶರೀಫ- ಸರ್ವಜ್ಷ ಪ್ರಧಾನ ವೇದಿಕೆಯಲ್ಲಿ ಎರಡನೆ ಇದನ ನಡೆದ “ಕನ್ನಡದಲ್ಲಿ ಕಾನೂನು ಸಾಹಿತ್ಯ” ಕುರಿತ ಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ್ಯಾಯಾಲಯ ನೀಡುವಂತಹ ತೀರ್ಪುಗಳು ಇಂದಿನ ದಿನಗಳಲ್ಲಿ ಕಕ್ಷಿದಾರರಿಗೆ, ಶ್ರೀಸಾಮಾನ್ಯರಿಗೆ ಅರ್ಥವಾಗದ ಕಾರಣ, ಪ್ರಕರಣಗಳು ದೀರ್ಘಕಾಲ ಎಳೆಯುತ್ತಿವೆ. ನ್ಯಾಯಾಲಯದಲ್ಲಿ ಪ್ರಕರಣಗಳ ತೀರ್ಪುಗಳು ವಿಳಂಬವಾಗುತ್ತವೆ. ಆದ್ದರಿಂದ ಶ್ರೀಸಾಮಾನ್ಯರಿಗೆ ಕಥೆಗಳ ಮೂಲಕ, ನಾಟಕಗಳ ಮೂಲಕ, ಸಾಹಿತ್ಯಗಳ ಮೂಲಕ ಅವರ ಮಾತೃಭಾಷೆಯಲ್ಲಿ ತಿಳಿವಳಿಕೆ ಮೂಡುಸುವುದರ ಮೂಲಕ ಸಾಮಾನ್ಯ ಕಾನೂನುಗಳ ಬಗ್ಗೆ ಅರಿವು ಮೂಡಸಬೇಕಿದೆ ಎಂದು ಹೇಳಿದರು.

ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ. ಬಸವರಾಜ ಮಾತನಾಡಿ, “ಕಾನೂನಾತ್ಮಕ ಪುಸ್ತಕಗಳು ಹೆಚ್ಚಿನ ಪ್ರಮಾಣದಲ್ಲಿ ಕನ್ನಡದಲ್ಲಿ ಹೊರಬರುವಂತೆ ಮಾಡಲು ಸರ್ಕಾರ ಕನ್ನಡ ಕಾನೂನು ಪ್ರಾಧಿಕಾರ ರಚನೆ ಮಾಡಬೇಕು. ಕನ್ನಡ ಕಾನೂನು ಪ್ರಾಧಿಕಾರ ರಚಿಸುವುದರ ಮೂಲಕ ಹೆಚ್ಚು ಸಂಶೋಧನಾತ್ಮಕ ಕನ್ನಡ ಕಾನೂನು ಪುಸ್ತಕಗಳು ರಚಿಸುವುದ ಮೂಲಕ ಯುವ ಸಾಹಿತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಕರ್ನಾಟಕದಲ್ಲಿ ಇಂದು ಸುಮಾರು 109 ಕಾನೂನು ಕಾಲೇಜುಗಳಿದ್ದು, ಕಾನೂನಾತ್ಮಕ ಕನ್ನಡ ಪುಸ್ತಕಗಳು ದೊರಕದೇ ಇರುವುದು ದುರ್ದೈವದ ಸಂಗತಿಯಾಗಿದೆ. ಕಾನೂನು ವ್ಯಾಸಂಗಕ್ಕೆ ಹೆಚ್ಚು ಸಂಶೋಧನಾತ್ಮಕ ಪುಸ್ತಕಗಳು ದೊರಕಿಸಿಕೊಡುವುದರ ಮೂಲಕ ಕನ್ನಡ ಭಾಷಾಭಿಮಾನ ಹೆಚ್ಚಿಸುವುದಲ್ಲದೇ, ಕನ್ನಡ ಕಾನೂನಾತ್ಮಕ ಸಾಹಿತ್ಯ ಬೆಳಿಸುವುದರಲ್ಲಿ ಸಹಕಾರಿಯಾಗುತ್ತದೆ. ಇದಲ್ಲದೇ ಕಾನೂನಾತ್ಮಕ ಸಾಹಿತ್ಯ ಬರೆಯುವ ಯುವ ಸಾಹಿತಿಗಳಿಗೆ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು ಎಂದರು.

‘ಶ್ರೀಸಾಮಾನ್ಯರಿಗೆ ಕನ್ನಡದಲ್ಲಿ ಕಾನೂನು ಅರಿವು’ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿದ್ದಪ್ಪ ಕೆಂಪಗೌಡರ ಮಾತನಾಡಿ, “ನ್ಯಾಯಾಲಯಗಳು ಇರುವುದು ನ್ಯಾಯಾಧೀಶರಿಗಲ್ಲ, ನ್ಯಾಯಾಲಯ ಇರುವುದು ಶ್ರೀಸಾಮಾನ್ಯರಿಗೆ. ಆದ್ದರಿಂದ ಪ್ರತಿಯೊಬ್ಬ ಶ್ರೀಸಾಮಾನ್ಯರಿಗೂ ಸಾಮಾನ್ಯ ಕಾನೂನು ತಿಳುವಳಿಕೆ ಅಗತ್ಯವಾಗಿದೆ. ಸಾಮಾನ್ಯ ಜನರು ‘ನನಗೆ ಕಾನೂನು ಗೊತ್ತಿಲ್ಲ ಎನ್ನಬಾರದು, ಕಾನೂನು ತಪ್ಪು ಮಾಡಿದರೆ ಕ್ಷಮಿಸುವುದಿಲ್ಲ. ನ್ಯಾಯಾಧೀಶರು ಕೇವಲ ಪ್ರಶಸ್ತಿಗಾಗಿ ಕನ್ನಡ ಭಾಷೆಯಲ್ಲಿ ತೀರ್ಪು ನೀಡುವುದಲ್ಲ, ನ್ಯಾಯಾಧೀಶರಿಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ. ತಾವು ನೀಡುವ ತೀರ್ಪುಗಳು ಕನ್ನಡದಲ್ಲಿದ್ದರೆ ಶ್ರೀಸಾಮಾನ್ಯರಿಗೂ, ಕಕ್ಷಿದಾದರಿಗೂ ನ್ಯಾಯ ಒದಗಿಸಿದಂತೆ ಮತ್ತು ಕನ್ನಡ ಭಾಷಾಭಿಮಾನ ಬೆಳಿಸಿದಂತೆ ಎಂದರು.

ಇದನ್ನೂ ಓದಿ:  ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...