Homeಕರ್ನಾಟಕಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

- Advertisement -
- Advertisement -

ಶವಸಂಸ್ಕಾರ ಮಾಡಲು ಸ್ಮಶಾನವಿಲ್ಲ ಎಂದು ಆರೋಪಿಸಿ ಶವವನ್ನಿಟ್ಟು ಪ್ರತಿಭಟನೆ ಮಾಡಿರುವ ಘಟನೆ ಸರಗೂರು ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಆಲನಹಳ್ಳಿ ಹಾಡಿಯಲ್ಲಿ ನಡೆದಿದೆ.

ಕಾಡು ಕುರುಬ ಜನಾಂಗದ ವ್ಯಕ್ತಿಯೊಬ್ಬರು ಗುರುವಾರ ತೀರಿಕೊಂಡಿದ್ದರು. ಆದರೆ ಶವ ಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದೆ ಪರದಾಡಿದರು. ಈ ಕುರಿತು ಮಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ.

ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿಯ ಸದಸ್ಯ ಬೆಟ್ಟಸ್ವಾಮಿ ಮಾತನಾಡಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, “ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆಯನ್ನು ಹಾಡಿ ಜನರು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಸ್ತೆ ಇಲ್ಲ. ಹೆಣ ಹೂಳಲು ಜಾಗವಿಲ್ಲ. ಬರೀ ಆಶ್ವಾಸನೆಗಳನ್ನಷ್ಟೇ ಅಧಿಕಾರಿಗಳು ನೀಡುತ್ತಾರೆ. ಹಾಡಿಯ ಜನರು ಅರಣ್ಯ ಒತ್ತುವರಿ ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ. ಆದರೆ ಅರಣ್ಯ ಇಲಾಖೆಯವರು ತಂತಿ ಹಾಕಿದ್ದಾರೆ. ಹಾಡಿ ಜನರು ಅವುಗಳನ್ನು ದಾಟಿ ಹೋಗಬೇಕು. ಹೀಗಾಗಿ ಸರ್ಕಾರ ಈ ದೃಶ್ಯವನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ಈ ಕಾಡು ಕುರುಬ ಜನರಿಗೆ ಸ್ಮಶಾನ ಜಾಗವನ್ನು ನೀಡಿ, ಅಲ್ಲಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು” ಎಂದು ಬೆಟ್ಟಸ್ವಾಮಿ ಆಗ್ರಹಿಸಿದ್ದಾರೆ.

ಸ್ಮಶಾನ ಜಾಗವನ್ನು ನೀಡದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗುವುದು. ಈ ದೃಶ್ಯವನ್ನು ನೋಡಿದ ಕೂಡಲೇ ತಹಶೀಲ್ದಾರ್‌‌ ಅವರು ಈ ಜಾಗವನ್ನು ಹದ್ದುಬಸ್ತು ಮಾಡಿ ಸರಿಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಕೇಳಿದ್ದಾರೆ.

ಆಲನಹಳ್ಳಿ ಹಾಡಿಯಷ್ಟೇ ಅಲ್ಲದೇ ಸರಗೂರು ತಾಲ್ಲೂಕಿನ ಹಲವು ಹಾಡಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಮೂಲಗಳು ತಿಳಿಸಿದೆ.

ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಸರಗೂರು ತಹಸೀಲ್ದಾರ್‌ ಚೆಲುವರಾಜು ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ನಮ್ಮೊಂದಿಗೆ ಮಾತನಾಡಿದ ಅವರು, “ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೆನು. ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ” ಎಂದು ತಿಳಿಸಿದರು.

ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೆ ಸಮಸ್ಯೆ ಇದೆ ಎಂಬುದರ ಬಗ್ಗೆ ಕೇಳಿದಾಗ, “ಸರ್ಕಾರಿ ಜಮೀನು ಎಲ್ಲಿದಿಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನಕ್ಕೆ ಜಾಗವಿರದ ಕಡೆ ಭೂಮಿಯನ್ನು ಖರೀದಿಸುತ್ತಿದ್ದೇವೆ. ಸನ್ಮಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...