Homeಕರ್ನಾಟಕಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

- Advertisement -
- Advertisement -

ಶವಸಂಸ್ಕಾರ ಮಾಡಲು ಸ್ಮಶಾನವಿಲ್ಲ ಎಂದು ಆರೋಪಿಸಿ ಶವವನ್ನಿಟ್ಟು ಪ್ರತಿಭಟನೆ ಮಾಡಿರುವ ಘಟನೆ ಸರಗೂರು ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಆಲನಹಳ್ಳಿ ಹಾಡಿಯಲ್ಲಿ ನಡೆದಿದೆ.

ಕಾಡು ಕುರುಬ ಜನಾಂಗದ ವ್ಯಕ್ತಿಯೊಬ್ಬರು ಗುರುವಾರ ತೀರಿಕೊಂಡಿದ್ದರು. ಆದರೆ ಶವ ಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದೆ ಪರದಾಡಿದರು. ಈ ಕುರಿತು ಮಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ.

ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿಯ ಸದಸ್ಯ ಬೆಟ್ಟಸ್ವಾಮಿ ಮಾತನಾಡಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, “ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆಯನ್ನು ಹಾಡಿ ಜನರು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಸ್ತೆ ಇಲ್ಲ. ಹೆಣ ಹೂಳಲು ಜಾಗವಿಲ್ಲ. ಬರೀ ಆಶ್ವಾಸನೆಗಳನ್ನಷ್ಟೇ ಅಧಿಕಾರಿಗಳು ನೀಡುತ್ತಾರೆ. ಹಾಡಿಯ ಜನರು ಅರಣ್ಯ ಒತ್ತುವರಿ ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ. ಆದರೆ ಅರಣ್ಯ ಇಲಾಖೆಯವರು ತಂತಿ ಹಾಕಿದ್ದಾರೆ. ಹಾಡಿ ಜನರು ಅವುಗಳನ್ನು ದಾಟಿ ಹೋಗಬೇಕು. ಹೀಗಾಗಿ ಸರ್ಕಾರ ಈ ದೃಶ್ಯವನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ಈ ಕಾಡು ಕುರುಬ ಜನರಿಗೆ ಸ್ಮಶಾನ ಜಾಗವನ್ನು ನೀಡಿ, ಅಲ್ಲಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು” ಎಂದು ಬೆಟ್ಟಸ್ವಾಮಿ ಆಗ್ರಹಿಸಿದ್ದಾರೆ.

ಸ್ಮಶಾನ ಜಾಗವನ್ನು ನೀಡದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗುವುದು. ಈ ದೃಶ್ಯವನ್ನು ನೋಡಿದ ಕೂಡಲೇ ತಹಶೀಲ್ದಾರ್‌‌ ಅವರು ಈ ಜಾಗವನ್ನು ಹದ್ದುಬಸ್ತು ಮಾಡಿ ಸರಿಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಕೇಳಿದ್ದಾರೆ.

ಆಲನಹಳ್ಳಿ ಹಾಡಿಯಷ್ಟೇ ಅಲ್ಲದೇ ಸರಗೂರು ತಾಲ್ಲೂಕಿನ ಹಲವು ಹಾಡಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಮೂಲಗಳು ತಿಳಿಸಿದೆ.

ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಸರಗೂರು ತಹಸೀಲ್ದಾರ್‌ ಚೆಲುವರಾಜು ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ನಮ್ಮೊಂದಿಗೆ ಮಾತನಾಡಿದ ಅವರು, “ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೆನು. ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ” ಎಂದು ತಿಳಿಸಿದರು.

ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೆ ಸಮಸ್ಯೆ ಇದೆ ಎಂಬುದರ ಬಗ್ಗೆ ಕೇಳಿದಾಗ, “ಸರ್ಕಾರಿ ಜಮೀನು ಎಲ್ಲಿದಿಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನಕ್ಕೆ ಜಾಗವಿರದ ಕಡೆ ಭೂಮಿಯನ್ನು ಖರೀದಿಸುತ್ತಿದ್ದೇವೆ. ಸನ್ಮಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...