Homeಕರ್ನಾಟಕಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

- Advertisement -
- Advertisement -

ಶವಸಂಸ್ಕಾರ ಮಾಡಲು ಸ್ಮಶಾನವಿಲ್ಲ ಎಂದು ಆರೋಪಿಸಿ ಶವವನ್ನಿಟ್ಟು ಪ್ರತಿಭಟನೆ ಮಾಡಿರುವ ಘಟನೆ ಸರಗೂರು ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಆಲನಹಳ್ಳಿ ಹಾಡಿಯಲ್ಲಿ ನಡೆದಿದೆ.

ಕಾಡು ಕುರುಬ ಜನಾಂಗದ ವ್ಯಕ್ತಿಯೊಬ್ಬರು ಗುರುವಾರ ತೀರಿಕೊಂಡಿದ್ದರು. ಆದರೆ ಶವ ಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದೆ ಪರದಾಡಿದರು. ಈ ಕುರಿತು ಮಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ.

ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿಯ ಸದಸ್ಯ ಬೆಟ್ಟಸ್ವಾಮಿ ಮಾತನಾಡಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, “ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆಯನ್ನು ಹಾಡಿ ಜನರು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಸ್ತೆ ಇಲ್ಲ. ಹೆಣ ಹೂಳಲು ಜಾಗವಿಲ್ಲ. ಬರೀ ಆಶ್ವಾಸನೆಗಳನ್ನಷ್ಟೇ ಅಧಿಕಾರಿಗಳು ನೀಡುತ್ತಾರೆ. ಹಾಡಿಯ ಜನರು ಅರಣ್ಯ ಒತ್ತುವರಿ ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ. ಆದರೆ ಅರಣ್ಯ ಇಲಾಖೆಯವರು ತಂತಿ ಹಾಕಿದ್ದಾರೆ. ಹಾಡಿ ಜನರು ಅವುಗಳನ್ನು ದಾಟಿ ಹೋಗಬೇಕು. ಹೀಗಾಗಿ ಸರ್ಕಾರ ಈ ದೃಶ್ಯವನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ಈ ಕಾಡು ಕುರುಬ ಜನರಿಗೆ ಸ್ಮಶಾನ ಜಾಗವನ್ನು ನೀಡಿ, ಅಲ್ಲಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು” ಎಂದು ಬೆಟ್ಟಸ್ವಾಮಿ ಆಗ್ರಹಿಸಿದ್ದಾರೆ.

ಸ್ಮಶಾನ ಜಾಗವನ್ನು ನೀಡದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗುವುದು. ಈ ದೃಶ್ಯವನ್ನು ನೋಡಿದ ಕೂಡಲೇ ತಹಶೀಲ್ದಾರ್‌‌ ಅವರು ಈ ಜಾಗವನ್ನು ಹದ್ದುಬಸ್ತು ಮಾಡಿ ಸರಿಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಕೇಳಿದ್ದಾರೆ.

ಆಲನಹಳ್ಳಿ ಹಾಡಿಯಷ್ಟೇ ಅಲ್ಲದೇ ಸರಗೂರು ತಾಲ್ಲೂಕಿನ ಹಲವು ಹಾಡಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಮೂಲಗಳು ತಿಳಿಸಿದೆ.

ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಸರಗೂರು ತಹಸೀಲ್ದಾರ್‌ ಚೆಲುವರಾಜು ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ನಮ್ಮೊಂದಿಗೆ ಮಾತನಾಡಿದ ಅವರು, “ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೆನು. ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ” ಎಂದು ತಿಳಿಸಿದರು.

ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೆ ಸಮಸ್ಯೆ ಇದೆ ಎಂಬುದರ ಬಗ್ಗೆ ಕೇಳಿದಾಗ, “ಸರ್ಕಾರಿ ಜಮೀನು ಎಲ್ಲಿದಿಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನಕ್ಕೆ ಜಾಗವಿರದ ಕಡೆ ಭೂಮಿಯನ್ನು ಖರೀದಿಸುತ್ತಿದ್ದೇವೆ. ಸನ್ಮಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...