Homeಚಳವಳಿಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ

- Advertisement -
- Advertisement -

ಮಹಿಳಾ ಸಮಾನತೆಗಾಗಿ ಹಿಂದೂ ಕೋಡ್ ಬಿಲ್ ರಚಿಸಿ, ಜಾರಿಯಾಗದಿದ್ದಾಗ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ ಇತಿಹಾಸದ ಏಕೈಕ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿ ಈ ದೇಶದ ಕಾರ್ಮಿಕರಿಗೆ ಹಕ್ಕುಗಳನ್ನು ನೀಡಿದರು. ಶ್ರೇಷ್ಟ ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ, ದಕ್ಷ ಆಡಳಿತಗಾರರಾಗಿ, ಸಂವಿಧಾನ ಶಿಲ್ಪಿಯಾಗಿ, ಮಾನವತಾವಾದಿಯಾಗಿ ಇಡೀ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಈ ದೇಶ ಮರೆಯಬಾರದು ಎಂದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  “ಈ ಸಂದರ್ಭದಲ್ಲಿ ಅಂಬೇಡ್ಕರ್‌ರವರಿಗೆ ಸಲಾಮ್ ಹೊಡೆದರೆ ಸಾಲುವುದಿಲ್ಲ, ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ” ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಹೊಂದಿದ ದಿನದಂದೇ ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಸಂವಿಧಾನ ಅಂಬೇಡ್ಕರ್‌ರವರು ಬರೆದಿಲ್ಲ ಎಂದು ಸುಳ್ಳು ಹಬ್ಬಿಸಲಾಗಿದೆ. ಸಂವಿಧಾನ ರಚನೆಯಾದ ಬಳಿಕ ಈ ದೇಶವನ್ನು ಕಟ್ಟಲಾಗಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ನಾವೆಲ್ಲರೂ ನೇರವಾಗಿ, ಪರೋಕ್ಷವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣ, ಸಂವಿಧಾನದಿಂದಾಗಿ ದಲಿತ ರಾಷ್ಟ್ರಪತಿ, ಉಪಪ್ರಧಾನಿಯಾದರು. ಹತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಂವಿಧಾನ ಕಾರಣ ಎಂದರು.

“ಇಂದು ಬೆಲೆ ಏರಿಕೆಯಾಗುತ್ತಿದೆ. ಸರ್ಕಾರಕ್ಕೆ ಪ್ರಜ್ಞೆ ಇಲ್ಲ. ಪ್ರಶ್ನೆ ಮಾಡಿದರೆ ಯುಎಪಿಎ ಹಾಕುತ್ತಿದ್ದಾರೆ. ಎನ್ಕೌಂಟರ್ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಅಪ್ರಸ್ತುತ ಮಾಡಲಾಗುತ್ತಿದೆ. ಖಾಸಗೀಕರಣ ಹೆಚ್ಚಾಗುತ್ತಿದ್ದೆ. ಮೀಸಲಾತಿ ಅಪ್ರಸ್ತುತ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತು ಶಿಪಾರಸ್ಸು ಮಾಡಲು ಒಪ್ಪಿಕೊಂಡಿದ್ದೆ. ಆದರೆ ದೇಶದಲ್ಲಿ-ರಾಜ್ಯದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ. ಹಾಗಾಗಿ ಎಷ್ಟು ಮೀಸಲಾತಿ ಹೆಚ್ಚಿಸಿದರೂ ಏನು ಪ್ರಯೋಜನ? ಖಾಲಿ ಹುದ್ದೆಗಳನ್ನು ತುಂಬಬೇಕು. ಮೀಸಲಾತಿ ಹೆಚ್ಚಿಸಿದರೂ ಖಾಸಗೀಕರಣ ಹೆಚ್ಚುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ” ಎಂದರು.

ಜನರ ಸಮಸ್ಯೆಗಳಿಗೆ ಜನಪರ ಹೋರಾಟಗಳೇ ಮದ್ದು. ಒಬ್ಬೊಬ್ಬರಾಗಿಯೇ ಮಾತನಾಡಿದರೆ ಸರ್ಕಾರಕ್ಕೆ ಕೇಳಿಸಲ್ಲ. ನಾವೆಲ್ಲ ದಲಿತ ಸಂಘಟನೆಗಳು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಒಂದಾಗಬೇಕು. ಅಂಬೇಡ್ಕರ್ ದಾರಿಯೇ ನಮ್ಮ ತಾತ್ವಿಕ ನೆಲಗಟ್ಟು. ಸಂವಿಧಾನವನ್ನು ಉಳಿಸಿಕೊಳ್ಳಬೇಕು. ನಾವು ಗಳಿಸಿದ್ದನ್ನು ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಹೋರಾಡಿದರೆ ಮಾತ್ರ ಗಳಿಸಿದ್ದನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಕೋಮುವಾದ ರಾರಾಜಿಸಿದ್ದಲ್ಲಿ ನಾವು ಬಾಯಿಗೆ ಬೀಗ ಹಾಕಿಕೊಂಡು ಇರಬೇಕಾಗುತ್ತದೆ. ಇಂದು ಮುಸ್ಲಿಮರು ಮಾರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ನಾಳೆ ದಲಿತರು ದೇವಾಲಯದ ಬಳಿ ತೆಂಗಿನಕಾಯಿ ಮಾರುವಂತಿಲ್ಲ, ಹೂ ಮಾರುವಂತಿಲ್ಲ ಎನ್ನುತ್ತಾರೆ. ಎಚ್ಚರ ವಹಿಸಬೇಕು ಎಂದರು.

ಇದನ್ನೂ ಓದಿ; ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...