Homeಚಳವಳಿಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ

- Advertisement -
- Advertisement -

ಮಹಿಳಾ ಸಮಾನತೆಗಾಗಿ ಹಿಂದೂ ಕೋಡ್ ಬಿಲ್ ರಚಿಸಿ, ಜಾರಿಯಾಗದಿದ್ದಾಗ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ ಇತಿಹಾಸದ ಏಕೈಕ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿ ಈ ದೇಶದ ಕಾರ್ಮಿಕರಿಗೆ ಹಕ್ಕುಗಳನ್ನು ನೀಡಿದರು. ಶ್ರೇಷ್ಟ ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ, ದಕ್ಷ ಆಡಳಿತಗಾರರಾಗಿ, ಸಂವಿಧಾನ ಶಿಲ್ಪಿಯಾಗಿ, ಮಾನವತಾವಾದಿಯಾಗಿ ಇಡೀ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಈ ದೇಶ ಮರೆಯಬಾರದು ಎಂದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  “ಈ ಸಂದರ್ಭದಲ್ಲಿ ಅಂಬೇಡ್ಕರ್‌ರವರಿಗೆ ಸಲಾಮ್ ಹೊಡೆದರೆ ಸಾಲುವುದಿಲ್ಲ, ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ” ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಹೊಂದಿದ ದಿನದಂದೇ ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಸಂವಿಧಾನ ಅಂಬೇಡ್ಕರ್‌ರವರು ಬರೆದಿಲ್ಲ ಎಂದು ಸುಳ್ಳು ಹಬ್ಬಿಸಲಾಗಿದೆ. ಸಂವಿಧಾನ ರಚನೆಯಾದ ಬಳಿಕ ಈ ದೇಶವನ್ನು ಕಟ್ಟಲಾಗಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ನಾವೆಲ್ಲರೂ ನೇರವಾಗಿ, ಪರೋಕ್ಷವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣ, ಸಂವಿಧಾನದಿಂದಾಗಿ ದಲಿತ ರಾಷ್ಟ್ರಪತಿ, ಉಪಪ್ರಧಾನಿಯಾದರು. ಹತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಂವಿಧಾನ ಕಾರಣ ಎಂದರು.

“ಇಂದು ಬೆಲೆ ಏರಿಕೆಯಾಗುತ್ತಿದೆ. ಸರ್ಕಾರಕ್ಕೆ ಪ್ರಜ್ಞೆ ಇಲ್ಲ. ಪ್ರಶ್ನೆ ಮಾಡಿದರೆ ಯುಎಪಿಎ ಹಾಕುತ್ತಿದ್ದಾರೆ. ಎನ್ಕೌಂಟರ್ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಅಪ್ರಸ್ತುತ ಮಾಡಲಾಗುತ್ತಿದೆ. ಖಾಸಗೀಕರಣ ಹೆಚ್ಚಾಗುತ್ತಿದ್ದೆ. ಮೀಸಲಾತಿ ಅಪ್ರಸ್ತುತ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತು ಶಿಪಾರಸ್ಸು ಮಾಡಲು ಒಪ್ಪಿಕೊಂಡಿದ್ದೆ. ಆದರೆ ದೇಶದಲ್ಲಿ-ರಾಜ್ಯದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ. ಹಾಗಾಗಿ ಎಷ್ಟು ಮೀಸಲಾತಿ ಹೆಚ್ಚಿಸಿದರೂ ಏನು ಪ್ರಯೋಜನ? ಖಾಲಿ ಹುದ್ದೆಗಳನ್ನು ತುಂಬಬೇಕು. ಮೀಸಲಾತಿ ಹೆಚ್ಚಿಸಿದರೂ ಖಾಸಗೀಕರಣ ಹೆಚ್ಚುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ” ಎಂದರು.

ಜನರ ಸಮಸ್ಯೆಗಳಿಗೆ ಜನಪರ ಹೋರಾಟಗಳೇ ಮದ್ದು. ಒಬ್ಬೊಬ್ಬರಾಗಿಯೇ ಮಾತನಾಡಿದರೆ ಸರ್ಕಾರಕ್ಕೆ ಕೇಳಿಸಲ್ಲ. ನಾವೆಲ್ಲ ದಲಿತ ಸಂಘಟನೆಗಳು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಒಂದಾಗಬೇಕು. ಅಂಬೇಡ್ಕರ್ ದಾರಿಯೇ ನಮ್ಮ ತಾತ್ವಿಕ ನೆಲಗಟ್ಟು. ಸಂವಿಧಾನವನ್ನು ಉಳಿಸಿಕೊಳ್ಳಬೇಕು. ನಾವು ಗಳಿಸಿದ್ದನ್ನು ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಹೋರಾಡಿದರೆ ಮಾತ್ರ ಗಳಿಸಿದ್ದನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಕೋಮುವಾದ ರಾರಾಜಿಸಿದ್ದಲ್ಲಿ ನಾವು ಬಾಯಿಗೆ ಬೀಗ ಹಾಕಿಕೊಂಡು ಇರಬೇಕಾಗುತ್ತದೆ. ಇಂದು ಮುಸ್ಲಿಮರು ಮಾರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ನಾಳೆ ದಲಿತರು ದೇವಾಲಯದ ಬಳಿ ತೆಂಗಿನಕಾಯಿ ಮಾರುವಂತಿಲ್ಲ, ಹೂ ಮಾರುವಂತಿಲ್ಲ ಎನ್ನುತ್ತಾರೆ. ಎಚ್ಚರ ವಹಿಸಬೇಕು ಎಂದರು.

ಇದನ್ನೂ ಓದಿ; ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...