Homeಚಳವಳಿಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ

- Advertisement -
- Advertisement -

ಮಹಿಳಾ ಸಮಾನತೆಗಾಗಿ ಹಿಂದೂ ಕೋಡ್ ಬಿಲ್ ರಚಿಸಿ, ಜಾರಿಯಾಗದಿದ್ದಾಗ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ ಇತಿಹಾಸದ ಏಕೈಕ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿ ಈ ದೇಶದ ಕಾರ್ಮಿಕರಿಗೆ ಹಕ್ಕುಗಳನ್ನು ನೀಡಿದರು. ಶ್ರೇಷ್ಟ ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ, ದಕ್ಷ ಆಡಳಿತಗಾರರಾಗಿ, ಸಂವಿಧಾನ ಶಿಲ್ಪಿಯಾಗಿ, ಮಾನವತಾವಾದಿಯಾಗಿ ಇಡೀ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಈ ದೇಶ ಮರೆಯಬಾರದು ಎಂದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  “ಈ ಸಂದರ್ಭದಲ್ಲಿ ಅಂಬೇಡ್ಕರ್‌ರವರಿಗೆ ಸಲಾಮ್ ಹೊಡೆದರೆ ಸಾಲುವುದಿಲ್ಲ, ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ” ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಹೊಂದಿದ ದಿನದಂದೇ ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಸಂವಿಧಾನ ಅಂಬೇಡ್ಕರ್‌ರವರು ಬರೆದಿಲ್ಲ ಎಂದು ಸುಳ್ಳು ಹಬ್ಬಿಸಲಾಗಿದೆ. ಸಂವಿಧಾನ ರಚನೆಯಾದ ಬಳಿಕ ಈ ದೇಶವನ್ನು ಕಟ್ಟಲಾಗಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ನಾವೆಲ್ಲರೂ ನೇರವಾಗಿ, ಪರೋಕ್ಷವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣ, ಸಂವಿಧಾನದಿಂದಾಗಿ ದಲಿತ ರಾಷ್ಟ್ರಪತಿ, ಉಪಪ್ರಧಾನಿಯಾದರು. ಹತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಂವಿಧಾನ ಕಾರಣ ಎಂದರು.

“ಇಂದು ಬೆಲೆ ಏರಿಕೆಯಾಗುತ್ತಿದೆ. ಸರ್ಕಾರಕ್ಕೆ ಪ್ರಜ್ಞೆ ಇಲ್ಲ. ಪ್ರಶ್ನೆ ಮಾಡಿದರೆ ಯುಎಪಿಎ ಹಾಕುತ್ತಿದ್ದಾರೆ. ಎನ್ಕೌಂಟರ್ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಅಪ್ರಸ್ತುತ ಮಾಡಲಾಗುತ್ತಿದೆ. ಖಾಸಗೀಕರಣ ಹೆಚ್ಚಾಗುತ್ತಿದ್ದೆ. ಮೀಸಲಾತಿ ಅಪ್ರಸ್ತುತ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತು ಶಿಪಾರಸ್ಸು ಮಾಡಲು ಒಪ್ಪಿಕೊಂಡಿದ್ದೆ. ಆದರೆ ದೇಶದಲ್ಲಿ-ರಾಜ್ಯದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ. ಹಾಗಾಗಿ ಎಷ್ಟು ಮೀಸಲಾತಿ ಹೆಚ್ಚಿಸಿದರೂ ಏನು ಪ್ರಯೋಜನ? ಖಾಲಿ ಹುದ್ದೆಗಳನ್ನು ತುಂಬಬೇಕು. ಮೀಸಲಾತಿ ಹೆಚ್ಚಿಸಿದರೂ ಖಾಸಗೀಕರಣ ಹೆಚ್ಚುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ” ಎಂದರು.

ಜನರ ಸಮಸ್ಯೆಗಳಿಗೆ ಜನಪರ ಹೋರಾಟಗಳೇ ಮದ್ದು. ಒಬ್ಬೊಬ್ಬರಾಗಿಯೇ ಮಾತನಾಡಿದರೆ ಸರ್ಕಾರಕ್ಕೆ ಕೇಳಿಸಲ್ಲ. ನಾವೆಲ್ಲ ದಲಿತ ಸಂಘಟನೆಗಳು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಒಂದಾಗಬೇಕು. ಅಂಬೇಡ್ಕರ್ ದಾರಿಯೇ ನಮ್ಮ ತಾತ್ವಿಕ ನೆಲಗಟ್ಟು. ಸಂವಿಧಾನವನ್ನು ಉಳಿಸಿಕೊಳ್ಳಬೇಕು. ನಾವು ಗಳಿಸಿದ್ದನ್ನು ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಹೋರಾಡಿದರೆ ಮಾತ್ರ ಗಳಿಸಿದ್ದನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಕೋಮುವಾದ ರಾರಾಜಿಸಿದ್ದಲ್ಲಿ ನಾವು ಬಾಯಿಗೆ ಬೀಗ ಹಾಕಿಕೊಂಡು ಇರಬೇಕಾಗುತ್ತದೆ. ಇಂದು ಮುಸ್ಲಿಮರು ಮಾರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ನಾಳೆ ದಲಿತರು ದೇವಾಲಯದ ಬಳಿ ತೆಂಗಿನಕಾಯಿ ಮಾರುವಂತಿಲ್ಲ, ಹೂ ಮಾರುವಂತಿಲ್ಲ ಎನ್ನುತ್ತಾರೆ. ಎಚ್ಚರ ವಹಿಸಬೇಕು ಎಂದರು.

ಇದನ್ನೂ ಓದಿ; ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...