Homeಚಳವಳಿಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ

- Advertisement -
- Advertisement -

ಮಹಿಳಾ ಸಮಾನತೆಗಾಗಿ ಹಿಂದೂ ಕೋಡ್ ಬಿಲ್ ರಚಿಸಿ, ಜಾರಿಯಾಗದಿದ್ದಾಗ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ ಇತಿಹಾಸದ ಏಕೈಕ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ರವರು ಕಾರ್ಮಿಕ ಸಚಿವರಾಗಿ ಈ ದೇಶದ ಕಾರ್ಮಿಕರಿಗೆ ಹಕ್ಕುಗಳನ್ನು ನೀಡಿದರು. ಶ್ರೇಷ್ಟ ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ, ದಕ್ಷ ಆಡಳಿತಗಾರರಾಗಿ, ಸಂವಿಧಾನ ಶಿಲ್ಪಿಯಾಗಿ, ಮಾನವತಾವಾದಿಯಾಗಿ ಇಡೀ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಈ ದೇಶ ಮರೆಯಬಾರದು ಎಂದರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  “ಈ ಸಂದರ್ಭದಲ್ಲಿ ಅಂಬೇಡ್ಕರ್‌ರವರಿಗೆ ಸಲಾಮ್ ಹೊಡೆದರೆ ಸಾಲುವುದಿಲ್ಲ, ನಾವು ಅಂಬೇಡ್ಕರ್ ಬಗ್ಗೆ ಅಹಂ ಬೆಳೆಸಿಕೊಳ್ಳಬಾರದು ಬದಲಿಗೆ ಅಂಬೇಡ್ಕರ್ ಬಗ್ಗೆ ಅರಿವು ಬೆಳೆಸಿಕೊಳ್ಳೋಣ. ಅಂದರೆ ಸಂವಿಧಾನದ ಅರಿವು ನಮ್ಮದಾಗಲಿ” ಎಂದರು.

ಅಂಬೇಡ್ಕರ್ ಪರಿನಿಬ್ಬಾಣ ಹೊಂದಿದ ದಿನದಂದೇ ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಸಂವಿಧಾನ ಅಂಬೇಡ್ಕರ್‌ರವರು ಬರೆದಿಲ್ಲ ಎಂದು ಸುಳ್ಳು ಹಬ್ಬಿಸಲಾಗಿದೆ. ಸಂವಿಧಾನ ರಚನೆಯಾದ ಬಳಿಕ ಈ ದೇಶವನ್ನು ಕಟ್ಟಲಾಗಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ನಾವೆಲ್ಲರೂ ನೇರವಾಗಿ, ಪರೋಕ್ಷವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ಅಂಬೇಡ್ಕರ್ ಅವರು ಬರೆದ ಸಂವಿಧಾನ ಕಾರಣ, ಸಂವಿಧಾನದಿಂದಾಗಿ ದಲಿತ ರಾಷ್ಟ್ರಪತಿ, ಉಪಪ್ರಧಾನಿಯಾದರು. ಹತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಂವಿಧಾನ ಕಾರಣ ಎಂದರು.

“ಇಂದು ಬೆಲೆ ಏರಿಕೆಯಾಗುತ್ತಿದೆ. ಸರ್ಕಾರಕ್ಕೆ ಪ್ರಜ್ಞೆ ಇಲ್ಲ. ಪ್ರಶ್ನೆ ಮಾಡಿದರೆ ಯುಎಪಿಎ ಹಾಕುತ್ತಿದ್ದಾರೆ. ಎನ್ಕೌಂಟರ್ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಅಪ್ರಸ್ತುತ ಮಾಡಲಾಗುತ್ತಿದೆ. ಖಾಸಗೀಕರಣ ಹೆಚ್ಚಾಗುತ್ತಿದ್ದೆ. ಮೀಸಲಾತಿ ಅಪ್ರಸ್ತುತ ಮಾಡುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತು ಶಿಪಾರಸ್ಸು ಮಾಡಲು ಒಪ್ಪಿಕೊಂಡಿದ್ದೆ. ಆದರೆ ದೇಶದಲ್ಲಿ-ರಾಜ್ಯದಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗಿಲ್ಲ. ಹಾಗಾಗಿ ಎಷ್ಟು ಮೀಸಲಾತಿ ಹೆಚ್ಚಿಸಿದರೂ ಏನು ಪ್ರಯೋಜನ? ಖಾಲಿ ಹುದ್ದೆಗಳನ್ನು ತುಂಬಬೇಕು. ಮೀಸಲಾತಿ ಹೆಚ್ಚಿಸಿದರೂ ಖಾಸಗೀಕರಣ ಹೆಚ್ಚುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ” ಎಂದರು.

ಜನರ ಸಮಸ್ಯೆಗಳಿಗೆ ಜನಪರ ಹೋರಾಟಗಳೇ ಮದ್ದು. ಒಬ್ಬೊಬ್ಬರಾಗಿಯೇ ಮಾತನಾಡಿದರೆ ಸರ್ಕಾರಕ್ಕೆ ಕೇಳಿಸಲ್ಲ. ನಾವೆಲ್ಲ ದಲಿತ ಸಂಘಟನೆಗಳು ಸೈದ್ಧಾಂತಿಕ ನೆಲಗಟ್ಟಿನಲ್ಲಿ ಒಂದಾಗಬೇಕು. ಅಂಬೇಡ್ಕರ್ ದಾರಿಯೇ ನಮ್ಮ ತಾತ್ವಿಕ ನೆಲಗಟ್ಟು. ಸಂವಿಧಾನವನ್ನು ಉಳಿಸಿಕೊಳ್ಳಬೇಕು. ನಾವು ಗಳಿಸಿದ್ದನ್ನು ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಹೋರಾಡಿದರೆ ಮಾತ್ರ ಗಳಿಸಿದ್ದನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಕೋಮುವಾದ ರಾರಾಜಿಸಿದ್ದಲ್ಲಿ ನಾವು ಬಾಯಿಗೆ ಬೀಗ ಹಾಕಿಕೊಂಡು ಇರಬೇಕಾಗುತ್ತದೆ. ಇಂದು ಮುಸ್ಲಿಮರು ಮಾರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ನಾಳೆ ದಲಿತರು ದೇವಾಲಯದ ಬಳಿ ತೆಂಗಿನಕಾಯಿ ಮಾರುವಂತಿಲ್ಲ, ಹೂ ಮಾರುವಂತಿಲ್ಲ ಎನ್ನುತ್ತಾರೆ. ಎಚ್ಚರ ವಹಿಸಬೇಕು ಎಂದರು.

ಇದನ್ನೂ ಓದಿ; ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...