Homeಕರ್ನಾಟಕಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

- Advertisement -
- Advertisement -

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಸರಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ನಾಳೆ (ಮೇ 20) ಸಂಯುಕ್ತ ಹೋರಾಟ ಕರ್ನಾಟಕವತಿಯಿಂದ  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ –ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರ, ವಿದ್ಯುತ್‌ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ. ಇದನ್ನು ವಿರೋಧಿಸಿ ಈ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ.  ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಯವರೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ. ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು ರಿಯಲ್ ಎಸ್ಟೇಟ್  ಹಿತಾಸಕ್ತಿರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್‌ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು, ಹತ್ತು ತಿಂಗಳ ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...