Homeಕರ್ನಾಟಕಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

- Advertisement -
- Advertisement -

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಸರಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ನಾಳೆ (ಮೇ 20) ಸಂಯುಕ್ತ ಹೋರಾಟ ಕರ್ನಾಟಕವತಿಯಿಂದ  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ –ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರ, ವಿದ್ಯುತ್‌ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ. ಇದನ್ನು ವಿರೋಧಿಸಿ ಈ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ.  ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಯವರೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ. ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು ರಿಯಲ್ ಎಸ್ಟೇಟ್  ಹಿತಾಸಕ್ತಿರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್‌ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು, ಹತ್ತು ತಿಂಗಳ ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...