Homeಕರ್ನಾಟಕಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

- Advertisement -
- Advertisement -

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಸರಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ನಾಳೆ (ಮೇ 20) ಸಂಯುಕ್ತ ಹೋರಾಟ ಕರ್ನಾಟಕವತಿಯಿಂದ  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ –ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರ, ವಿದ್ಯುತ್‌ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ. ಇದನ್ನು ವಿರೋಧಿಸಿ ಈ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ.  ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಯವರೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ. ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು ರಿಯಲ್ ಎಸ್ಟೇಟ್  ಹಿತಾಸಕ್ತಿರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್‌ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು, ಹತ್ತು ತಿಂಗಳ ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...