Homeಕರ್ನಾಟಕಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

- Advertisement -
- Advertisement -

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಸರಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ನಾಳೆ (ಮೇ 20) ಸಂಯುಕ್ತ ಹೋರಾಟ ಕರ್ನಾಟಕವತಿಯಿಂದ  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ –ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರ, ವಿದ್ಯುತ್‌ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ. ಇದನ್ನು ವಿರೋಧಿಸಿ ಈ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ.  ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಯವರೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ. ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು ರಿಯಲ್ ಎಸ್ಟೇಟ್  ಹಿತಾಸಕ್ತಿರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್‌ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು, ಹತ್ತು ತಿಂಗಳ ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...