Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...