Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...