Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...