Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...