Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...