Homeಕರ್ನಾಟಕಧಾರ್ಮಿಕ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪಕ್ಕೆ ಜನರ ವಿರೋಧ; ವೇದಿಕೆ ತೊರೆದ ಯತ್ನಾಳ್

ಧಾರ್ಮಿಕ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪಕ್ಕೆ ಜನರ ವಿರೋಧ; ವೇದಿಕೆ ತೊರೆದ ಯತ್ನಾಳ್

- Advertisement -
- Advertisement -

ಬಾಗಲಕೋಟೆಯ ತೇರದಾಳದ ದೇವಸ್ಥಾನ ಉದ್ಘಾಟನಾ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಸಭಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪಕ್ಕೆ ಜನರು ವಿರೋಧ ವ್ಯಕ್ತಪಡಿಸಿದ್ದು, ಯತ್ನಾಳ್ ಅನಿವಾರ್ಯವಾಗಿ ವೇದಿಕೆ ತೊರೆಯಬೇಕಾಯಿತು.

ಬಾಗಲಕೋಟೆಯ ತೇರದಾಳ ಪಟ್ಟಣದ ಅಲ್ಲಮಪ್ರಭು ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಯತ್ನಾಳ್, ಪ್ರಸ್ತುತ ನಡೆಯುತ್ತಿರುವ ವಕ್ಫ್ ಭೂ ವಿವಾದವನ್ನು ಪ್ರಸ್ತಾಪಿಸಿದರು. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ವಕ್ಫ್ ಜಮೀನು ವಿವಾದವನ್ನು ಎಳೆದಿದ್ದಕ್ಕೆ ಜನರ ವಿರೋಧ ವ್ಯಕ್ತವಾಯಿತು. ‘ವಕ್ಫ್ ವಿಷಯವನ್ನು ಎಳೆದುಕೊಂಡು ಕಾರ್ಯಕ್ರಮವನ್ನು ರಾಜಕೀಯಗೊಳಿಸಬಾರದು’ ಎಂದು ಭಕ್ತರು ಬಿಜೆಪಿ ಶಾಸಕರಿಗೆ ತಾಕೀತು ಮಾಡಿದರು.

“ಅಲ್ಲಮಪ್ರಭು ದೇವಾಲಯ ನಿರ್ಮಾಣಕ್ಕೆ ಮುಸ್ಲಿಮರು 6 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ” ಎಂದು ಜನರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಜನರ ಆಕ್ಷೇಪದ ಹಿನ್ನೆಲೆಯಲ್ಲಿ ಯತ್ನಾಳ್ ವೇದಿಕೆಯಿಂದ ಹೊರ ನಡೆದರು.

ಜನರ ವಿರೋಧಕ್ಕೆ ಮಣಿದು ವೇದಿಕೆಯಿಂದ ಕೆಳಗೆ ಇಳಿದ ಯತ್ನಾಳ್

ರಾಜ್ಯದಲ್ಲಿ ವಕ್ಫ್​ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಜಯಪುರದಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಎಂದು ಹೆಸರು ನಮೂದಾಗಿರುವುದು ಕಂಡುಬಂದಿದೆ. ಅಲ್ಲದೇ ಈ ವಿಚಾರವಾಗಿ ರೈತರಿಗೆ ನೋಟಿಸ್ ಸಹ ನೀಡಿದ್ದು, ವಿರೋಧದ ಬಳಿಕ ವಾಪಸ್ ಪಡೆಯಲಾಗಿದೆ.

ಈ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇದೇ ವಿಚಾರವನ್ನು ಯತ್ನಾಳ್, ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಪ್ರಸ್ತಾಪಿಸಿದ್ದಾರೆ. ಆದರೆ, ಬಿಜೆಪಿ ಶಾಸಕರ ನಡೆಗೆ ಸ್ಥಳೀಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ; ಅತ್ಯಾಚಾರ ಪ್ರಕರಣ: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...