Homeಮುಖಪುಟಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ವಾಟ್ಸಾಪ್ ಮೆಸೆಜಿಂಗ್ ಅಪ್ಲಿಕೇಶನ್‌ನ ಹೊಸ ಅಪ್ಡೇಟ್‌ ನಲ್ಲಿ ಗೌಪ್ಯತೆಯ ಖಾತರಿಯಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಆದೇಶಸಿದೆ.

ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತದ ವಾಟ್ಸಾಪ್‌ನ ಗೌಪ್ಯತೆಯ ಗುಣಮಟ್ಟ ತೀರಾ ಕಡಿಮೆಯಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಈ ನೋಟಿಸ್ ನೀಡಿದೆ.

“ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುತ್ತೇವೆ ಎಂಬ ಆತಂಕ ಜನರಲ್ಲಿದೆ. ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಎಸ್‌ ಎ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರು ತಮ್ಮ ಗೌಪ್ಯತೆಯನ್ನು ಹೆಚ್ಚೆಂದು ಪರಿಗಣಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು.

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಆದರೆ ಇದಕ್ಕೂ ಮೊದಲು, ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...