Homeಮುಖಪುಟಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ವಾಟ್ಸಾಪ್ ಮೆಸೆಜಿಂಗ್ ಅಪ್ಲಿಕೇಶನ್‌ನ ಹೊಸ ಅಪ್ಡೇಟ್‌ ನಲ್ಲಿ ಗೌಪ್ಯತೆಯ ಖಾತರಿಯಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಆದೇಶಸಿದೆ.

ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತದ ವಾಟ್ಸಾಪ್‌ನ ಗೌಪ್ಯತೆಯ ಗುಣಮಟ್ಟ ತೀರಾ ಕಡಿಮೆಯಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಈ ನೋಟಿಸ್ ನೀಡಿದೆ.

“ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುತ್ತೇವೆ ಎಂಬ ಆತಂಕ ಜನರಲ್ಲಿದೆ. ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಎಸ್‌ ಎ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರು ತಮ್ಮ ಗೌಪ್ಯತೆಯನ್ನು ಹೆಚ್ಚೆಂದು ಪರಿಗಣಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು.

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಆದರೆ ಇದಕ್ಕೂ ಮೊದಲು, ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...