Homeಮುಖಪುಟಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ವಾಟ್ಸಾಪ್ ಮೆಸೆಜಿಂಗ್ ಅಪ್ಲಿಕೇಶನ್‌ನ ಹೊಸ ಅಪ್ಡೇಟ್‌ ನಲ್ಲಿ ಗೌಪ್ಯತೆಯ ಖಾತರಿಯಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ವಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಜೊತೆಗೆ 4 ವಾರಗಳಲ್ಲಿ ಉತ್ತರಿಸುವಂತೆ ಆದೇಶಸಿದೆ.

ಯುರೋಪಿಯನ್ ಬಳಕೆದಾರರಿಗೆ ಹೋಲಿಸಿದರೆ ಭಾರತದ ವಾಟ್ಸಾಪ್‌ನ ಗೌಪ್ಯತೆಯ ಗುಣಮಟ್ಟ ತೀರಾ ಕಡಿಮೆಯಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಈ ನೋಟಿಸ್ ನೀಡಿದೆ.

“ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುತ್ತೇವೆ ಎಂಬ ಆತಂಕ ಜನರಲ್ಲಿದೆ. ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಎಸ್‌ ಎ ಬೋಬಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ‘ದಿಶಾಳ ತಂದೆ-ತಾಯಿ ನರೇಂದ್ರ ಮೋದಿಯವರ ಬೆಂಬಲಿಗರು…’ – ಪತ್ರಕರ್ತ ಮೊಹಮ್ಮದ್ ಜುಬೈರ್

ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರು ತಮ್ಮ ಗೌಪ್ಯತೆಯನ್ನು ಹೆಚ್ಚೆಂದು ಪರಿಗಣಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು.

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಆದರೆ ಇದಕ್ಕೂ ಮೊದಲು, ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...