Homeಕರ್ನಾಟಕಪ್ರವಾಹ ಪರಿಹಾರ ಕೊಡದ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು? : ಸಂತ್ರಸ್ತರಿಂದ ಬೆಳಗಾವಿಯಲ್ಲಿ ಮುಖ್ಯಮಂತ್ರಿಗೆ ಮುತ್ತಿಗೆ

ಪ್ರವಾಹ ಪರಿಹಾರ ಕೊಡದ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು? : ಸಂತ್ರಸ್ತರಿಂದ ಬೆಳಗಾವಿಯಲ್ಲಿ ಮುಖ್ಯಮಂತ್ರಿಗೆ ಮುತ್ತಿಗೆ

- Advertisement -
- Advertisement -

ಪ್ರವಾಹ ಪರಿಹಾರದ ವಿಚಾರ ಚರ್ಚಿಸಲು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಲು ಪ್ರಯತ್ನಿಸಿದ ರೈತರು ಮತ್ತು ಮಹಿಳೆಯರನ್ನು ಪೊಲೀಸರು ತಡೆದಿದ್ದಾರೆ. ಕೋಪಗೊಂಡ ಸಂತ್ರಸ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಬಂಧಿಸಿದ್ದಾರೆ.

೮-೧೦ರವರೆಗೆ ಮುಖ್ಯಮಂತ್ರಿಯವರಿಗೆ ಅಹವಾಲು ಸಲ್ಲಿಸಬಹುದು ಎಂದು ಮೊದಲೇ ಘೋಷಿಸಿತ್ತು. ನಾವು ೯:೩೦ ಗಂಟೆಗೆ ಅಹವಾಲು ಸಲ್ಲಿಸಲು ಮುಂದಾದರೆ ಅಷ್ಟಕ್ಕೆ ಯಡಿಯೂರಪ್ಪನವರು ಅಲ್ಲಿಂದ ಹೊರಟಿದ್ದಾರೆ. ಇದರಿಂದ ಆಕ್ರೋಶಗೊಂಡ ಜನರು ಘೋಷಣೆ ಕೂಗಿ ಪ್ರತಿಭಟನೆಗೆ ನಡೆಸಿದ್ದಾರೆ. ಸಿಎಂ ಕಾರು ರಸ್ತೆ ಬದಲಿಸಿ ಬೇರೆ ರಸ್ತೆಯಲ್ಲಿ ಹೋಗಿದೆ. ಇದರಿಂದ ಇನ್ನಷ್ಟು ಕ್ರೋಧಗೊಂಡ ಜನರು ಸರ್ಕ್ಯೂಟ್ ಹೌಸ್‌ ಬಳಿ ಧಾವಿಸಿ ಮುಖ್ಯಮಂತ್ರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದಾರೆ.

ಪ್ರಹಾರ ಪರಿಹಾರ ಘೋಷಿಸಿಲ್ಲ, ಸಿಎಂ ಭೇಟಿಗೂ ಅವಕಾಶ ಕೊಡುತ್ತಿಲ್ಲ. ಜನ ಬದುಕಲಾರದೇ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಹಾಗಾದರೆ ಈ ಸರ್ಕಾರ ಏಕಿರಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂದ ಪುಟ್ಟ, ಹೋದ ಪುಟ್ಟ..

ರೈತ ಹೋರಾಟಗಾರರದ ಜಯಶ್ರೀಯವರು ಮಾತನಾಡಿ “ನಿನ್ನೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ನಮಗೆ ಅವಮಾನ ಮಾಡಿದ್ದಾರೆ. ನನ್ನದೇ ನೂರು ಎಕರೆ ನಷ್ಟವಾಗಿದೆ ನಿಮಗೆಲ್ಲಿಂದ ತರಲಿ ಪರಿಹಾರ ಎಂದು ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಿಎಂ ಯಡಿಯೂರಪ್ಪನವರು ತನ್ನದು ಹಗ್ಗದ ಮೇಲಿನ ನಡಿಗೆ ಎಂದು ಹೇಳುತ್ತಾರೆ. ಹಾಗಾದರೆ ಅವರು ರಾಜೀನಾಮೆ ಕೊಟ್ಟು ನಮ್ಮೊಂದಿಗೆ ಹೋರಾಟಕ್ಕೆ ಬರಬೇಕು. ನಾವಿಲ್ಲಿ ಸಾಯುತ್ತಿದ್ದರೆ, ಮೋದಿಯವರು ಇನು ವಿದೇಶ ಸುತ್ತುತ್ತಿದ್ದಾರೆ. ಬೇರೆ ದೇಶಗಳಿಗೆ ಸಾಲ ಕೊಡುತ್ತೇವೆ ಎನ್ನುವ ಮೋದಿ ಜನರ ಪರವೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಪ್ರವಾಹದಿಂದ ನಲುಗಿತ್ತಿದ್ದರೆ ಕೇಂದ್ರ ಕಣ್ಣೆತ್ತಿ ನೋಡುತ್ತಿಲ್ಲ. ಕೆಲ ಕೇಂದ್ರ ಸಚಿವರು ಬಂದ ಪುಟ್ಟ, ಹೋದ ಪುಟ್ಟ.. ಎಂಬಂತೆ ಕಾಟಚಾರಕ್ಕೆ ಬಂದು ಹೋಗಿದ್ದಾರೆ. ನಾವು ರಾಜ್ಯದಿಂದ ಜಿ.ಎಸ್‌.ಟಿ ಸೇರಿದಂತೆ ಬಹಳಷ್ಟು ತೆರಿಗೆ ಕಟ್ಟುತ್ತಿದ್ದೇವೆ, ಆದರೆ ಕೇಂದ್ರ ಸರ್ಕಾರ ಮಲತಾಯಿಧೋರಣೆ ಮಾಡುತ್ತಿದೆ. ನಮಗೆ ನಿಮ್ಮ ಭಿಕ್ಷೆ ಬೇಕಿಲ್ಲ, ನಮ್ಮ ಹಣ ನಮಗೆ ಕೊಡಿ ಎಂದು ಜಯಶ್ರೀಯವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...