Homeಕರ್ನಾಟಕಪ್ರವೀಣ್ ಮೃತದೇಹ ನೋಡಲು ತಡವಾಗಿ ಬಂದ ಜನಪ್ರತಿನಿಧಿಗಳು; ಬಿಜೆಪಿಗೆ ಧಿಕ್ಕಾರ ಕೂಗಿದ ಉದ್ರಿಕ್ತರು

ಪ್ರವೀಣ್ ಮೃತದೇಹ ನೋಡಲು ತಡವಾಗಿ ಬಂದ ಜನಪ್ರತಿನಿಧಿಗಳು; ಬಿಜೆಪಿಗೆ ಧಿಕ್ಕಾರ ಕೂಗಿದ ಉದ್ರಿಕ್ತರು

ಶವ ಮೆರವಣಿಗೆ ವೇಳೆ ಯಾರಿಗೂ ತೊಂದರೆ ಕೊಡಬೇಡಿ, ಜೈಕಾರ ಮತ್ತು ಘೋಷಣೆ ಕೂಗಬೇಡಿ ಎಂದು ಪ್ರವೀಣ್ ಅವರ ಕುಟುಂಬಿಕರು ವಿನಂತಿಸಿದ್ದರು

- Advertisement -
- Advertisement -

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಮೃತದೇಹದ ಮೆರವಣಿಗೆಯನ್ನು ಸಂಘ ಪರಿವಾರದ ಸಂಘಟನೆಗಳು ನಡೆಸುತ್ತಿವೆ. ಈ ನಡುವೆ ತಡವಾಗಿ ಮೃತದೇಹ ನೋಡಲು ಬಂದ ಬಿಜೆಪಿ ಶಾಸಕರು ಮತ್ತು ಸ್ಥಳೀಯ ನಾಯಕರ ವಾಹನವನ್ನು ಉದ್ರಿಕ್ತ ಜನರು ತಡೆದು ನಿಲ್ಲಿಸಿ, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ.

ಪ್ರವೀಣ್ ಅವರ ಕುಟುಂಬಿಕರು ಮೃತದೇಹವಿದ್ದ ಆಸ್ಪತ್ರೆಯಲ್ಲಿ ಮಾತನಾಡಿ,‘‘ಮೆರವಣಿಗೆ ವೇಳೆ ಯಾರಿಗೂ ತೊಂದರೆ ಕೊಡಬೇಡಿ. ಯಾರೂ ಜೈಕಾರ, ಘೋಷಣೆ ಕೂಗಬೇಡಿ” ಎಂದು ವಿನಂತಿಸಿದ್ದರು. ಅದಾಗಿಯೂ ಸೇರಿದ್ದ ಜನರು ಜಯಕಾರ ಕೂಗಿ, ಘೋಷಣೆಗಳನ್ನು ಹಾಕುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಸ್ಪತ್ರೆಯಲ್ಲಿ ಮಾತನಾಡಿದ ಪ್ರವೀಣ್ ಕುಟುಂಬದ ಸದಸ್ಯರೊಬ್ಬರು, “ಬಿಜೆಪಿ ಸಚಿವರು ಶವವನ್ನು ಮುಂದಿಟ್ಟು ಅವರು ಶೋ ಮಾಡುವುದು ಬೇಡ. ಏರ್‌ಪೋರ್ಟ್‌‌ ಅಲ್ಲಿದ್ದಾರೆ ಎಂದು ಹೇಳುತ್ತಾ ನಮ್ಮ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಿದೆ, ಆದರೆ ಸಚಿವರು ಇನ್ನೂ ಸ್ಥಳಕ್ಕೆ ತಲುಪಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೃತದೇಹವನ್ನು ನಮ್ಮಷ್ಟಕ್ಕೆ ನಾವು ಕೊಂಡೊಯ್ಯುತ್ತೇವೆ. ಯಾರೂ ಕೂಡಾ ಜಯಕಾರ, ಘೋಷಣೆಗಳನ್ನು ಕೂಗಬಾರದು. ಮೆರವಣಿಯಲ್ಲಿ ಯಾರಿಗೂ ತೊಂದರೆ ನೀಡಬೇಡಿ. ನಾವು ನಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡಿದ್ದೇವೆ. ಅವನ ಆತ್ಮಕ್ಕೆ ಶಾಂತಿ ಸಿಗಬೇಕು, ಅದಕ್ಕಾಗಿ ನೀವೆಲ್ಲರೂ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಕುಟುಂಬಸ್ಥರ ಮನವಿಯ ಹೊರತಾಗಿಯೂ ಸೇರಿದ್ದ ಜನರು ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡನ ಕೊಲೆ 

ಅದರಂತೆ ಪುತ್ತೂರು ನಗರದಿಂದ ಶವ ಮೆರವಣಿಗೆ ಹೊರಟು, ದರ್ಬೆ, ಸವಣೂರು, ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಮೃತದೇಹವನ್ನು ಕೊಂಡೊಯ್ಯಲಾಗಿದೆ. ಈ ನಡುವೆ ತಡವಾಗಿ ಬಂದಿರುವ ಬಿಜೆಪಿ ನಾಯಕರ ವಾಹನವನ್ನು ಮೆರವಣಿಯಲ್ಲಿದ್ದ ಉದ್ರಿಕ್ತ ಜನರು ತಡೆದಿದ್ದು, ಅವರಿಗೆ ಧಿಕ್ಕಾರ ಕೂಗಿದ್ದಾರೆ.

ಶವ ಮೆರವಣಿಗೆ ಹಿನ್ನೆಲೆಯಲ್ಲಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಬುಧವಾರ(ಜು.27) ಬೆಳಗ್ಗೆ 6ರಿಂದ ಅನ್ವಯವಾಗುವಂತೆ ಜುಲೈ 28ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಎಂ. ಆದೇಶ ಹೊರಡಿಸಿದ್ದಾರೆ.

ಕೊಲೆಯ ಹಿನ್ನಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಸುಳ್ಯ ತಾಲೂಕಿನ ಮುಖ್ಯ ಪೇಟೆಗಳಲ್ಲಿರುವ ಅಂಗಡಿಗಳು ಮಾತ್ರವಲ್ಲದೆ ಸಣ್ಣ ಪುಟ್ಟ ಊರುಗಳ ಅಂಗಡಿಗಳನ್ನು ಬಿಜೆಪಿಪರ ಸಂಘಟನೆಯ ಕಾರ್ಯಕರ್ತರು ಮುಚ್ಚಿಸಿದ್ದಾರೆ. ಸುಬ್ರಹ್ಮಣ್ಯ ಮತ್ತು ಪುತ್ತೂರು ನಗರವನ್ನೂ ಬಂದ್‌ ಮಾಡಲಾಗಿದೆ.

ಇದನ್ನೂ ಓದಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ವಾರದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಬೆಳ್ಳಾರೆಯಲ್ಲಿ ಮಸೂದ್‌ ಎಂಬ ಯುವಕನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಬಜರಂಗದಳದ ಐವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...