Homeಕರ್ನಾಟಕಪ್ರವೀಣ್ ಮೃತದೇಹ ನೋಡಲು ತಡವಾಗಿ ಬಂದ ಜನಪ್ರತಿನಿಧಿಗಳು; ಬಿಜೆಪಿಗೆ ಧಿಕ್ಕಾರ ಕೂಗಿದ ಉದ್ರಿಕ್ತರು

ಪ್ರವೀಣ್ ಮೃತದೇಹ ನೋಡಲು ತಡವಾಗಿ ಬಂದ ಜನಪ್ರತಿನಿಧಿಗಳು; ಬಿಜೆಪಿಗೆ ಧಿಕ್ಕಾರ ಕೂಗಿದ ಉದ್ರಿಕ್ತರು

ಶವ ಮೆರವಣಿಗೆ ವೇಳೆ ಯಾರಿಗೂ ತೊಂದರೆ ಕೊಡಬೇಡಿ, ಜೈಕಾರ ಮತ್ತು ಘೋಷಣೆ ಕೂಗಬೇಡಿ ಎಂದು ಪ್ರವೀಣ್ ಅವರ ಕುಟುಂಬಿಕರು ವಿನಂತಿಸಿದ್ದರು

- Advertisement -
- Advertisement -

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಮೃತದೇಹದ ಮೆರವಣಿಗೆಯನ್ನು ಸಂಘ ಪರಿವಾರದ ಸಂಘಟನೆಗಳು ನಡೆಸುತ್ತಿವೆ. ಈ ನಡುವೆ ತಡವಾಗಿ ಮೃತದೇಹ ನೋಡಲು ಬಂದ ಬಿಜೆಪಿ ಶಾಸಕರು ಮತ್ತು ಸ್ಥಳೀಯ ನಾಯಕರ ವಾಹನವನ್ನು ಉದ್ರಿಕ್ತ ಜನರು ತಡೆದು ನಿಲ್ಲಿಸಿ, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ.

ಪ್ರವೀಣ್ ಅವರ ಕುಟುಂಬಿಕರು ಮೃತದೇಹವಿದ್ದ ಆಸ್ಪತ್ರೆಯಲ್ಲಿ ಮಾತನಾಡಿ,‘‘ಮೆರವಣಿಗೆ ವೇಳೆ ಯಾರಿಗೂ ತೊಂದರೆ ಕೊಡಬೇಡಿ. ಯಾರೂ ಜೈಕಾರ, ಘೋಷಣೆ ಕೂಗಬೇಡಿ” ಎಂದು ವಿನಂತಿಸಿದ್ದರು. ಅದಾಗಿಯೂ ಸೇರಿದ್ದ ಜನರು ಜಯಕಾರ ಕೂಗಿ, ಘೋಷಣೆಗಳನ್ನು ಹಾಕುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಸ್ಪತ್ರೆಯಲ್ಲಿ ಮಾತನಾಡಿದ ಪ್ರವೀಣ್ ಕುಟುಂಬದ ಸದಸ್ಯರೊಬ್ಬರು, “ಬಿಜೆಪಿ ಸಚಿವರು ಶವವನ್ನು ಮುಂದಿಟ್ಟು ಅವರು ಶೋ ಮಾಡುವುದು ಬೇಡ. ಏರ್‌ಪೋರ್ಟ್‌‌ ಅಲ್ಲಿದ್ದಾರೆ ಎಂದು ಹೇಳುತ್ತಾ ನಮ್ಮ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಿದೆ, ಆದರೆ ಸಚಿವರು ಇನ್ನೂ ಸ್ಥಳಕ್ಕೆ ತಲುಪಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೃತದೇಹವನ್ನು ನಮ್ಮಷ್ಟಕ್ಕೆ ನಾವು ಕೊಂಡೊಯ್ಯುತ್ತೇವೆ. ಯಾರೂ ಕೂಡಾ ಜಯಕಾರ, ಘೋಷಣೆಗಳನ್ನು ಕೂಗಬಾರದು. ಮೆರವಣಿಯಲ್ಲಿ ಯಾರಿಗೂ ತೊಂದರೆ ನೀಡಬೇಡಿ. ನಾವು ನಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡಿದ್ದೇವೆ. ಅವನ ಆತ್ಮಕ್ಕೆ ಶಾಂತಿ ಸಿಗಬೇಕು, ಅದಕ್ಕಾಗಿ ನೀವೆಲ್ಲರೂ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಕುಟುಂಬಸ್ಥರ ಮನವಿಯ ಹೊರತಾಗಿಯೂ ಸೇರಿದ್ದ ಜನರು ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡನ ಕೊಲೆ 

ಅದರಂತೆ ಪುತ್ತೂರು ನಗರದಿಂದ ಶವ ಮೆರವಣಿಗೆ ಹೊರಟು, ದರ್ಬೆ, ಸವಣೂರು, ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಮೃತದೇಹವನ್ನು ಕೊಂಡೊಯ್ಯಲಾಗಿದೆ. ಈ ನಡುವೆ ತಡವಾಗಿ ಬಂದಿರುವ ಬಿಜೆಪಿ ನಾಯಕರ ವಾಹನವನ್ನು ಮೆರವಣಿಯಲ್ಲಿದ್ದ ಉದ್ರಿಕ್ತ ಜನರು ತಡೆದಿದ್ದು, ಅವರಿಗೆ ಧಿಕ್ಕಾರ ಕೂಗಿದ್ದಾರೆ.

ಶವ ಮೆರವಣಿಗೆ ಹಿನ್ನೆಲೆಯಲ್ಲಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಬುಧವಾರ(ಜು.27) ಬೆಳಗ್ಗೆ 6ರಿಂದ ಅನ್ವಯವಾಗುವಂತೆ ಜುಲೈ 28ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಎಂ. ಆದೇಶ ಹೊರಡಿಸಿದ್ದಾರೆ.

ಕೊಲೆಯ ಹಿನ್ನಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಸುಳ್ಯ ತಾಲೂಕಿನ ಮುಖ್ಯ ಪೇಟೆಗಳಲ್ಲಿರುವ ಅಂಗಡಿಗಳು ಮಾತ್ರವಲ್ಲದೆ ಸಣ್ಣ ಪುಟ್ಟ ಊರುಗಳ ಅಂಗಡಿಗಳನ್ನು ಬಿಜೆಪಿಪರ ಸಂಘಟನೆಯ ಕಾರ್ಯಕರ್ತರು ಮುಚ್ಚಿಸಿದ್ದಾರೆ. ಸುಬ್ರಹ್ಮಣ್ಯ ಮತ್ತು ಪುತ್ತೂರು ನಗರವನ್ನೂ ಬಂದ್‌ ಮಾಡಲಾಗಿದೆ.

ಇದನ್ನೂ ಓದಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ವಾರದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಬೆಳ್ಳಾರೆಯಲ್ಲಿ ಮಸೂದ್‌ ಎಂಬ ಯುವಕನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಬಜರಂಗದಳದ ಐವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...