Homeಚಳವಳಿಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ..

- Advertisement -
- Advertisement -

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು ಜನರು ಗೌರವಿಸುವ ಕಾರಣ್ಕಕ್ಕಾಗಿಯೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ, ಫ್ಯಾಸಿಸ್ಟ್ ಶಕ್ತಿಗಳು ಅಂತಹ ಕಲಾವಿದರಿಗೆ ನಿರ್ಬಂಧಗಳನ್ನು ಹೇರುವ ಮಾರ್ಗಗಳನ್ನು ಹುಡುಕುತ್ತಿರುತ್ತವೆ. ಹಾಸ್ಯ ಕಲಾವಿದರಾದ ಮನಾವರ್ ಫಾರೂಖಿ, ಕುನಾಲ್ ಕಾಮ್ರಾ ಅವರ ಕಾರ್ಯಕ್ರಮಗಳನ್ನು ರದ್ದು ಮಾಡುವುದರ ಹಿಂದೆ ಕಲಾವಿದನ ಮೇಲೆ ಪ್ರಭುತ್ವಕ್ಕಿರುವ ಭಯವನ್ನು ಕಾಣಬಹುದು. ಇಂತಹ ಸಂದರ್ಭಗಳಲ್ಲಿ ಬಹುಸಂಖ್ಯೆಯ ಜನರು ಕಲಾವಿದನ ಬೆನ್ನಿಗೆ ನಿಂತರೆ, ಆತನ ಪ್ರತಿರೋಧದ ನೆಲೆಗಳು ಮತ್ತಷ್ಟು ದಿಟ್ಟವಾಗಿ ಮೂಡಿಬರುತ್ತವೆ. ನಾಡಿನ ಪ್ರಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಸತ್ಯವಾಗಿದೆ.

ಹಂಸಲೇಖ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಮಾಂಸಾಹಾರದ ಕುರಿತು, ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಕುರಿತು ಆಡಿದ ಮಾತುಗಳು ವಿವಾದಕ್ಕೆ ಕಾರಣವಾದವು. “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವು ಮೇಲ್ಜಾತಿಗಳ ದೊಡ್ಡಸ್ತಿಕೆ ಪ್ರದರ್ಶನ ಆಗಬಾರದು” ಎಂಬುದು ಹಂಸಲೇಖ ಅವರ ಮಾತಿನ ಆಶಯವಾಗಿತ್ತು. “ದಲಿತರ ಮನೆಗೆ ಬಲಿತರು ಬರುವುದಲ್ಲ. ಬಲಿತರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಬೇಕು. ಅದು ನಿಜವಾದ ಸಮಾನತೆ” ಎಂದಿದ್ದ ಹಂಸಲೇಖರು ಪೇಜಾವರ ಶ್ರೀಗಳು ದಲಿತ ಕೇರಿಗಳಿಗೆ ಭೇಟಿ ನೀಡುತ್ತಿದ್ದನ್ನು ಉಲ್ಲೇಖಿಸಿದ್ದರು. ಈ ಕುರಿತು ಮಾತನಾಡುತ್ತಾ ಪ್ರಾಸಂಗಿಕವಾಗಿ, “ದಲಿತರು ಕೊಡುವ ಆಹಾರವನ್ನು ತಿನ್ನುತ್ತಾರಾ, ಕುರಿ ಕೋಳಿ ರಕ್ತವನ್ನು ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ?” ಎಂದು ಹೇಳಿಕೆ ನೀಡಿದರು. ಇದು ವಿವಾದಕ್ಕೆ ಕಾರಣವಾಯಿತು. ಸ್ವಾಮೀಜಿಯವರಿಗೆ ಅವಮಾನಿಸಲಾಗಿದೆ ಎಂದು ಬಿಂಬಿಸಲಾಯಿತು. ವಿವಾದ ಭುಗಿಲೆದ್ದ ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದರು. ಈ ನಡುವೆ ಮಾಂಸಾಹಾರದ ಕುರಿತು ಮಹಿಳೆಯೊಬ್ಬರು ತೋರಿದ ಅಸಹನೆ, ‘ಮಾಂಸಾಹಾರ-ಸಸ್ಯಾಹಾರ’ದ ಚರ್ಚೆಗೆ ನಾಂದಿಯಾಯಿತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರನ್ನು ಪೀಡಿಸುವ ಕೆಲಸ ಮುಂದುವರಿಯಿತು. “ಬೃಂದಾವನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದು, ಬ್ರಾಹ್ಮಣ್ಯದ, ಒಂದು ವರ್ಗದ ಸವರ್ಣೀಯರ ಅಹಂಕಾರದ ಪ್ರತಿರೂಪದಂತೆ ನಾಡಿನ ಜನತೆಗೆ ಭಾಸವಾಯಿತು. ದೊಡ್ಡ ಮಟ್ಟದಲ್ಲಿ ಜನರು ಹಂಸಲೇಖರ ಪರ ನಿಂತರು. ಈ ನಡುವೆ ಪ್ರಕರಣವೂ ದಾಖಲಾಗಿ, ಹಂಸಲೇಖರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹೇಳಿಕೆಯನ್ನು ನೀಡಿಬಂದರು. ನವೆಂಬರ್ 26ರ ಸಂವಿಧಾನ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಸೇರಿದ ಜನರು ಹಂಸಲೇಖರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದರು. ಬಸವನಗುಡಿ ಪೊಲೀಸರ ವರ್ತನೆಯನ್ನು ಖಂಡಿಸಿದರು.

ಪ್ರಕರಣ ಇಷ್ಟು ಚರ್ಚೆಯಾದ ನಂತರದಲ್ಲಿ ಹಂಸಲೇಖ ಅವರು ನೀಡಿರುತ್ತಿರುವ ಪ್ರತಿಮಾತ್ಮಕ ಪ್ರತಿಕ್ರಿಯೆಗಳು ಕೋಮು ವಿಷಮತೆ ಬಿತ್ತುವ ರಾಜಕಾರಣವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ಸುಳ್ಳಲ್ಲ. “ಸುಧಾರಣೆಯ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ ಅವರು ‘ಹಿಟ್ ರನ್ ಕೇಸ್’ ಆಗಲಿಲ್ಲ. ಸಂವಿಧಾನ ಆಶಯಗಳನ್ನು ಸ್ಮರಿಸಿದರು. “ಪೂಜ್ಯ ಕನ್ನಡಿಗರೇ, ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಪತ್ರ ಬರೆದರು. ಪ್ರೀತಿ ಆವೇಶಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ತನ್ನ ಬೆನ್ನ ಹಿಂದೆ ನಿಂತ ಬಹುದೊಡ್ಡ ಜನಸಮೂಹವನ್ನು ನೆನೆದರು. ಮುಂದುವರಿದ ಹಂಸಲೇಖರು, ಸಂವಿಧಾನ ಗೀತೆಯನ್ನು ಹಂಚಿಕೊಂಡರು.

“ನಾನು, ನೀನು, ನಮಗಾಗಿರೋದೇ ಕಾನೂನು,
ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”
ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು
ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ
ಬಹುತ್‌ ಭಾರತದ ಬೃಹತ್ ಸಂವಿಧಾನ
ಓ ಬಡವರ ಗೀತೆ, ಓ ಬಹುಜನ ಮಾತೆ
ಓ ಬಡವರ ಗೀತೆ, ಓ ಬಹುಜನ ಮಾತೆ
ಅಕ್ಷರ ರೂಪದ ಶಾಂತಿಯ ದನಿಯ
ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌
“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”
– ಎಂದು ಹಂಸಲೇಖರು ಬರೆದರು. ವಿವಾದದ ಬಳಿಕ ಸರಿಗಮಪ ಕಾರ್ಯಕ್ರಮಕ್ಕೆ ತೆರಳಿದ ಅವರು, ಶಾಂತಿ, ಸಹಬಾಳ್ವೆ, ಸಹೋದರತೆ, ಪ್ರೀತಿಯ ಸಂದೇಶಗಳನ್ನು ಸಾರಿದ ಬೌದ್ಧತ್ವವನ್ನು ತಮ್ಮ ವಸ್ತ್ರಾಲಂಕಾರದಲ್ಲಿ ಢಾಳಾಗಿ ತೋರಿಸಿಕೊಂಡರು.

ಲೇಖಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, “ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿ ಉಳಿಸೋಣ” ಎಂದು ಪುನರುಚ್ಚರಿಸಿದರು. ಹಂಸಲೇಖರ ಜೊತೆ ನಾಡಿನ ಜನರು ನಿಂತು, ಒಬ್ಬ ಕಲಾವಿದನ ನೋವಿಗೆ ಸ್ಪಂದಿಸಿದ್ದೇ ಇದಕ್ಕೆಲ್ಲ ಕಾರಣ.

ಹಂಸಲೇಖರು ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿಯ ಬಗ್ಗೆ ಮಾತನಾಡುತ್ತಾರೆ. ಬುದ್ಧ, ಬಸವ, ಭೀಮ ಅನುಯಾಯಿಗಳ ಜೊತೆಯಲ್ಲಿ, ಬುದ್ಧ ಮತ್ತು ಅಂಬೇಡ್ಕರ್‌ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರ ರಚನಾತ್ಮಕ ಸಾಂಸ್ಕೃತಿಕ ಪ್ರತಿರೋಧವು ಆಪ್ತವಾಗುತ್ತದೆ. ಹಿಂಸೆಯನ್ನು ಎಂದಿಗೂ ಪ್ರಚೋದಿಸದ ಅವರು ‘ನೆಲದ ಪದ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾವು ನೇಯುವ ಕೆಲಸ ಮಾಡೋಣ. ಹರಿಯುವುದು ಬೇಡ. ಮನಸ್ಸುಗಳನ್ನು, ಹೃದಯಗಳನ್ನು ಬೆಸೆಯೋಣ” ಎಂದು ನುಡಿದಿದ್ದಾರೆ. ರಾಷ್ಟ್ರಪಿತ ಗಾಂಧೀಜಿಯವರನ್ನು ‘ಹರಾಮಿ’ ಎನ್ನುವ, ಅಂತಹ ಹೇಳಿಕೆಗಳಿಗೆ ಶಿಳ್ಳೆ, ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುವ ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ ಎಂಬುದು ಮುಖ್ಯ. ಸಂವಿಧಾನ ವಿರೋಧಿ ಕೃತ್ಯಗಳನ್ನು ಪ್ರಭುತ್ವವೇ ಸಮರ್ಥಿಸುವ ಕಾಲಘಟ್ಟದಲ್ಲಿ ಈ ಮಾತುಗಳನ್ನು ಹಂಸಲೇಖ ಅವರು ಆಡುತ್ತಿದ್ದಾರೆಂಬುದು ಮುಖ್ಯ.

ಹಿಂಸೆಯನ್ನು ಅಹಿಂಸೆಯಿಂದಷ್ಟೇ ಮಣಿಸಬಹುದು ಎಂಬ ಬಹುದೊಡ್ಡ ಸಂದೇಶವನ್ನು ಸಾರಿದ ಗಾಂಧಿ ಮಾರ್ಗವನ್ನು ತುಳಿದು ರೈತರು ಗೆದ್ದಂತೆ, ‘ನೇಯುವ’ ಕೆಲಸದಿಂದ ಜನಮಾನಸವನ್ನು ಹಂಸಲೇಖರು ಗೆಲ್ಲುತ್ತಿದ್ದಾರೆ. ಸಾಂಸ್ಕೃತಿಕ ಪ್ರತಿರೋಧವನ್ನು ಸೃಜನಾತ್ಮಕವಾಗಿ ದಾಖಸುತ್ತಿದ್ದಾರೆ. ಹಂಸಲೇಖ ಅವರು ಒಂದು ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಕನ್ನಡ ಚಿತ್ರರಂಗದ ಸಂವೇದನಾಶೀಲ ಮನಸ್ಸುಗಳೂ ಚಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...