Homeಚಳವಳಿಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ..

- Advertisement -
- Advertisement -

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು ಜನರು ಗೌರವಿಸುವ ಕಾರಣ್ಕಕ್ಕಾಗಿಯೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ, ಫ್ಯಾಸಿಸ್ಟ್ ಶಕ್ತಿಗಳು ಅಂತಹ ಕಲಾವಿದರಿಗೆ ನಿರ್ಬಂಧಗಳನ್ನು ಹೇರುವ ಮಾರ್ಗಗಳನ್ನು ಹುಡುಕುತ್ತಿರುತ್ತವೆ. ಹಾಸ್ಯ ಕಲಾವಿದರಾದ ಮನಾವರ್ ಫಾರೂಖಿ, ಕುನಾಲ್ ಕಾಮ್ರಾ ಅವರ ಕಾರ್ಯಕ್ರಮಗಳನ್ನು ರದ್ದು ಮಾಡುವುದರ ಹಿಂದೆ ಕಲಾವಿದನ ಮೇಲೆ ಪ್ರಭುತ್ವಕ್ಕಿರುವ ಭಯವನ್ನು ಕಾಣಬಹುದು. ಇಂತಹ ಸಂದರ್ಭಗಳಲ್ಲಿ ಬಹುಸಂಖ್ಯೆಯ ಜನರು ಕಲಾವಿದನ ಬೆನ್ನಿಗೆ ನಿಂತರೆ, ಆತನ ಪ್ರತಿರೋಧದ ನೆಲೆಗಳು ಮತ್ತಷ್ಟು ದಿಟ್ಟವಾಗಿ ಮೂಡಿಬರುತ್ತವೆ. ನಾಡಿನ ಪ್ರಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಸತ್ಯವಾಗಿದೆ.

ಹಂಸಲೇಖ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಮಾಂಸಾಹಾರದ ಕುರಿತು, ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಕುರಿತು ಆಡಿದ ಮಾತುಗಳು ವಿವಾದಕ್ಕೆ ಕಾರಣವಾದವು. “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವು ಮೇಲ್ಜಾತಿಗಳ ದೊಡ್ಡಸ್ತಿಕೆ ಪ್ರದರ್ಶನ ಆಗಬಾರದು” ಎಂಬುದು ಹಂಸಲೇಖ ಅವರ ಮಾತಿನ ಆಶಯವಾಗಿತ್ತು. “ದಲಿತರ ಮನೆಗೆ ಬಲಿತರು ಬರುವುದಲ್ಲ. ಬಲಿತರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಬೇಕು. ಅದು ನಿಜವಾದ ಸಮಾನತೆ” ಎಂದಿದ್ದ ಹಂಸಲೇಖರು ಪೇಜಾವರ ಶ್ರೀಗಳು ದಲಿತ ಕೇರಿಗಳಿಗೆ ಭೇಟಿ ನೀಡುತ್ತಿದ್ದನ್ನು ಉಲ್ಲೇಖಿಸಿದ್ದರು. ಈ ಕುರಿತು ಮಾತನಾಡುತ್ತಾ ಪ್ರಾಸಂಗಿಕವಾಗಿ, “ದಲಿತರು ಕೊಡುವ ಆಹಾರವನ್ನು ತಿನ್ನುತ್ತಾರಾ, ಕುರಿ ಕೋಳಿ ರಕ್ತವನ್ನು ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ?” ಎಂದು ಹೇಳಿಕೆ ನೀಡಿದರು. ಇದು ವಿವಾದಕ್ಕೆ ಕಾರಣವಾಯಿತು. ಸ್ವಾಮೀಜಿಯವರಿಗೆ ಅವಮಾನಿಸಲಾಗಿದೆ ಎಂದು ಬಿಂಬಿಸಲಾಯಿತು. ವಿವಾದ ಭುಗಿಲೆದ್ದ ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದರು. ಈ ನಡುವೆ ಮಾಂಸಾಹಾರದ ಕುರಿತು ಮಹಿಳೆಯೊಬ್ಬರು ತೋರಿದ ಅಸಹನೆ, ‘ಮಾಂಸಾಹಾರ-ಸಸ್ಯಾಹಾರ’ದ ಚರ್ಚೆಗೆ ನಾಂದಿಯಾಯಿತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರನ್ನು ಪೀಡಿಸುವ ಕೆಲಸ ಮುಂದುವರಿಯಿತು. “ಬೃಂದಾವನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದು, ಬ್ರಾಹ್ಮಣ್ಯದ, ಒಂದು ವರ್ಗದ ಸವರ್ಣೀಯರ ಅಹಂಕಾರದ ಪ್ರತಿರೂಪದಂತೆ ನಾಡಿನ ಜನತೆಗೆ ಭಾಸವಾಯಿತು. ದೊಡ್ಡ ಮಟ್ಟದಲ್ಲಿ ಜನರು ಹಂಸಲೇಖರ ಪರ ನಿಂತರು. ಈ ನಡುವೆ ಪ್ರಕರಣವೂ ದಾಖಲಾಗಿ, ಹಂಸಲೇಖರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹೇಳಿಕೆಯನ್ನು ನೀಡಿಬಂದರು. ನವೆಂಬರ್ 26ರ ಸಂವಿಧಾನ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಸೇರಿದ ಜನರು ಹಂಸಲೇಖರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದರು. ಬಸವನಗುಡಿ ಪೊಲೀಸರ ವರ್ತನೆಯನ್ನು ಖಂಡಿಸಿದರು.

ಪ್ರಕರಣ ಇಷ್ಟು ಚರ್ಚೆಯಾದ ನಂತರದಲ್ಲಿ ಹಂಸಲೇಖ ಅವರು ನೀಡಿರುತ್ತಿರುವ ಪ್ರತಿಮಾತ್ಮಕ ಪ್ರತಿಕ್ರಿಯೆಗಳು ಕೋಮು ವಿಷಮತೆ ಬಿತ್ತುವ ರಾಜಕಾರಣವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ಸುಳ್ಳಲ್ಲ. “ಸುಧಾರಣೆಯ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ ಅವರು ‘ಹಿಟ್ ರನ್ ಕೇಸ್’ ಆಗಲಿಲ್ಲ. ಸಂವಿಧಾನ ಆಶಯಗಳನ್ನು ಸ್ಮರಿಸಿದರು. “ಪೂಜ್ಯ ಕನ್ನಡಿಗರೇ, ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಪತ್ರ ಬರೆದರು. ಪ್ರೀತಿ ಆವೇಶಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ತನ್ನ ಬೆನ್ನ ಹಿಂದೆ ನಿಂತ ಬಹುದೊಡ್ಡ ಜನಸಮೂಹವನ್ನು ನೆನೆದರು. ಮುಂದುವರಿದ ಹಂಸಲೇಖರು, ಸಂವಿಧಾನ ಗೀತೆಯನ್ನು ಹಂಚಿಕೊಂಡರು.

“ನಾನು, ನೀನು, ನಮಗಾಗಿರೋದೇ ಕಾನೂನು,
ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”
ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು
ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ
ಬಹುತ್‌ ಭಾರತದ ಬೃಹತ್ ಸಂವಿಧಾನ
ಓ ಬಡವರ ಗೀತೆ, ಓ ಬಹುಜನ ಮಾತೆ
ಓ ಬಡವರ ಗೀತೆ, ಓ ಬಹುಜನ ಮಾತೆ
ಅಕ್ಷರ ರೂಪದ ಶಾಂತಿಯ ದನಿಯ
ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌
“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”
– ಎಂದು ಹಂಸಲೇಖರು ಬರೆದರು. ವಿವಾದದ ಬಳಿಕ ಸರಿಗಮಪ ಕಾರ್ಯಕ್ರಮಕ್ಕೆ ತೆರಳಿದ ಅವರು, ಶಾಂತಿ, ಸಹಬಾಳ್ವೆ, ಸಹೋದರತೆ, ಪ್ರೀತಿಯ ಸಂದೇಶಗಳನ್ನು ಸಾರಿದ ಬೌದ್ಧತ್ವವನ್ನು ತಮ್ಮ ವಸ್ತ್ರಾಲಂಕಾರದಲ್ಲಿ ಢಾಳಾಗಿ ತೋರಿಸಿಕೊಂಡರು.

ಲೇಖಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, “ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿ ಉಳಿಸೋಣ” ಎಂದು ಪುನರುಚ್ಚರಿಸಿದರು. ಹಂಸಲೇಖರ ಜೊತೆ ನಾಡಿನ ಜನರು ನಿಂತು, ಒಬ್ಬ ಕಲಾವಿದನ ನೋವಿಗೆ ಸ್ಪಂದಿಸಿದ್ದೇ ಇದಕ್ಕೆಲ್ಲ ಕಾರಣ.

ಹಂಸಲೇಖರು ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿಯ ಬಗ್ಗೆ ಮಾತನಾಡುತ್ತಾರೆ. ಬುದ್ಧ, ಬಸವ, ಭೀಮ ಅನುಯಾಯಿಗಳ ಜೊತೆಯಲ್ಲಿ, ಬುದ್ಧ ಮತ್ತು ಅಂಬೇಡ್ಕರ್‌ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರ ರಚನಾತ್ಮಕ ಸಾಂಸ್ಕೃತಿಕ ಪ್ರತಿರೋಧವು ಆಪ್ತವಾಗುತ್ತದೆ. ಹಿಂಸೆಯನ್ನು ಎಂದಿಗೂ ಪ್ರಚೋದಿಸದ ಅವರು ‘ನೆಲದ ಪದ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾವು ನೇಯುವ ಕೆಲಸ ಮಾಡೋಣ. ಹರಿಯುವುದು ಬೇಡ. ಮನಸ್ಸುಗಳನ್ನು, ಹೃದಯಗಳನ್ನು ಬೆಸೆಯೋಣ” ಎಂದು ನುಡಿದಿದ್ದಾರೆ. ರಾಷ್ಟ್ರಪಿತ ಗಾಂಧೀಜಿಯವರನ್ನು ‘ಹರಾಮಿ’ ಎನ್ನುವ, ಅಂತಹ ಹೇಳಿಕೆಗಳಿಗೆ ಶಿಳ್ಳೆ, ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುವ ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ ಎಂಬುದು ಮುಖ್ಯ. ಸಂವಿಧಾನ ವಿರೋಧಿ ಕೃತ್ಯಗಳನ್ನು ಪ್ರಭುತ್ವವೇ ಸಮರ್ಥಿಸುವ ಕಾಲಘಟ್ಟದಲ್ಲಿ ಈ ಮಾತುಗಳನ್ನು ಹಂಸಲೇಖ ಅವರು ಆಡುತ್ತಿದ್ದಾರೆಂಬುದು ಮುಖ್ಯ.

ಹಿಂಸೆಯನ್ನು ಅಹಿಂಸೆಯಿಂದಷ್ಟೇ ಮಣಿಸಬಹುದು ಎಂಬ ಬಹುದೊಡ್ಡ ಸಂದೇಶವನ್ನು ಸಾರಿದ ಗಾಂಧಿ ಮಾರ್ಗವನ್ನು ತುಳಿದು ರೈತರು ಗೆದ್ದಂತೆ, ‘ನೇಯುವ’ ಕೆಲಸದಿಂದ ಜನಮಾನಸವನ್ನು ಹಂಸಲೇಖರು ಗೆಲ್ಲುತ್ತಿದ್ದಾರೆ. ಸಾಂಸ್ಕೃತಿಕ ಪ್ರತಿರೋಧವನ್ನು ಸೃಜನಾತ್ಮಕವಾಗಿ ದಾಖಸುತ್ತಿದ್ದಾರೆ. ಹಂಸಲೇಖ ಅವರು ಒಂದು ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಕನ್ನಡ ಚಿತ್ರರಂಗದ ಸಂವೇದನಾಶೀಲ ಮನಸ್ಸುಗಳೂ ಚಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...