Homeಚಳವಳಿಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ..

- Advertisement -
- Advertisement -

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು ಜನರು ಗೌರವಿಸುವ ಕಾರಣ್ಕಕ್ಕಾಗಿಯೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ, ಫ್ಯಾಸಿಸ್ಟ್ ಶಕ್ತಿಗಳು ಅಂತಹ ಕಲಾವಿದರಿಗೆ ನಿರ್ಬಂಧಗಳನ್ನು ಹೇರುವ ಮಾರ್ಗಗಳನ್ನು ಹುಡುಕುತ್ತಿರುತ್ತವೆ. ಹಾಸ್ಯ ಕಲಾವಿದರಾದ ಮನಾವರ್ ಫಾರೂಖಿ, ಕುನಾಲ್ ಕಾಮ್ರಾ ಅವರ ಕಾರ್ಯಕ್ರಮಗಳನ್ನು ರದ್ದು ಮಾಡುವುದರ ಹಿಂದೆ ಕಲಾವಿದನ ಮೇಲೆ ಪ್ರಭುತ್ವಕ್ಕಿರುವ ಭಯವನ್ನು ಕಾಣಬಹುದು. ಇಂತಹ ಸಂದರ್ಭಗಳಲ್ಲಿ ಬಹುಸಂಖ್ಯೆಯ ಜನರು ಕಲಾವಿದನ ಬೆನ್ನಿಗೆ ನಿಂತರೆ, ಆತನ ಪ್ರತಿರೋಧದ ನೆಲೆಗಳು ಮತ್ತಷ್ಟು ದಿಟ್ಟವಾಗಿ ಮೂಡಿಬರುತ್ತವೆ. ನಾಡಿನ ಪ್ರಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಸತ್ಯವಾಗಿದೆ.

ಹಂಸಲೇಖ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಮಾಂಸಾಹಾರದ ಕುರಿತು, ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಕುರಿತು ಆಡಿದ ಮಾತುಗಳು ವಿವಾದಕ್ಕೆ ಕಾರಣವಾದವು. “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವು ಮೇಲ್ಜಾತಿಗಳ ದೊಡ್ಡಸ್ತಿಕೆ ಪ್ರದರ್ಶನ ಆಗಬಾರದು” ಎಂಬುದು ಹಂಸಲೇಖ ಅವರ ಮಾತಿನ ಆಶಯವಾಗಿತ್ತು. “ದಲಿತರ ಮನೆಗೆ ಬಲಿತರು ಬರುವುದಲ್ಲ. ಬಲಿತರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಬೇಕು. ಅದು ನಿಜವಾದ ಸಮಾನತೆ” ಎಂದಿದ್ದ ಹಂಸಲೇಖರು ಪೇಜಾವರ ಶ್ರೀಗಳು ದಲಿತ ಕೇರಿಗಳಿಗೆ ಭೇಟಿ ನೀಡುತ್ತಿದ್ದನ್ನು ಉಲ್ಲೇಖಿಸಿದ್ದರು. ಈ ಕುರಿತು ಮಾತನಾಡುತ್ತಾ ಪ್ರಾಸಂಗಿಕವಾಗಿ, “ದಲಿತರು ಕೊಡುವ ಆಹಾರವನ್ನು ತಿನ್ನುತ್ತಾರಾ, ಕುರಿ ಕೋಳಿ ರಕ್ತವನ್ನು ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ?” ಎಂದು ಹೇಳಿಕೆ ನೀಡಿದರು. ಇದು ವಿವಾದಕ್ಕೆ ಕಾರಣವಾಯಿತು. ಸ್ವಾಮೀಜಿಯವರಿಗೆ ಅವಮಾನಿಸಲಾಗಿದೆ ಎಂದು ಬಿಂಬಿಸಲಾಯಿತು. ವಿವಾದ ಭುಗಿಲೆದ್ದ ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದರು. ಈ ನಡುವೆ ಮಾಂಸಾಹಾರದ ಕುರಿತು ಮಹಿಳೆಯೊಬ್ಬರು ತೋರಿದ ಅಸಹನೆ, ‘ಮಾಂಸಾಹಾರ-ಸಸ್ಯಾಹಾರ’ದ ಚರ್ಚೆಗೆ ನಾಂದಿಯಾಯಿತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರನ್ನು ಪೀಡಿಸುವ ಕೆಲಸ ಮುಂದುವರಿಯಿತು. “ಬೃಂದಾವನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದು, ಬ್ರಾಹ್ಮಣ್ಯದ, ಒಂದು ವರ್ಗದ ಸವರ್ಣೀಯರ ಅಹಂಕಾರದ ಪ್ರತಿರೂಪದಂತೆ ನಾಡಿನ ಜನತೆಗೆ ಭಾಸವಾಯಿತು. ದೊಡ್ಡ ಮಟ್ಟದಲ್ಲಿ ಜನರು ಹಂಸಲೇಖರ ಪರ ನಿಂತರು. ಈ ನಡುವೆ ಪ್ರಕರಣವೂ ದಾಖಲಾಗಿ, ಹಂಸಲೇಖರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹೇಳಿಕೆಯನ್ನು ನೀಡಿಬಂದರು. ನವೆಂಬರ್ 26ರ ಸಂವಿಧಾನ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಸೇರಿದ ಜನರು ಹಂಸಲೇಖರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದರು. ಬಸವನಗುಡಿ ಪೊಲೀಸರ ವರ್ತನೆಯನ್ನು ಖಂಡಿಸಿದರು.

ಪ್ರಕರಣ ಇಷ್ಟು ಚರ್ಚೆಯಾದ ನಂತರದಲ್ಲಿ ಹಂಸಲೇಖ ಅವರು ನೀಡಿರುತ್ತಿರುವ ಪ್ರತಿಮಾತ್ಮಕ ಪ್ರತಿಕ್ರಿಯೆಗಳು ಕೋಮು ವಿಷಮತೆ ಬಿತ್ತುವ ರಾಜಕಾರಣವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ಸುಳ್ಳಲ್ಲ. “ಸುಧಾರಣೆಯ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ ಅವರು ‘ಹಿಟ್ ರನ್ ಕೇಸ್’ ಆಗಲಿಲ್ಲ. ಸಂವಿಧಾನ ಆಶಯಗಳನ್ನು ಸ್ಮರಿಸಿದರು. “ಪೂಜ್ಯ ಕನ್ನಡಿಗರೇ, ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಪತ್ರ ಬರೆದರು. ಪ್ರೀತಿ ಆವೇಶಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ತನ್ನ ಬೆನ್ನ ಹಿಂದೆ ನಿಂತ ಬಹುದೊಡ್ಡ ಜನಸಮೂಹವನ್ನು ನೆನೆದರು. ಮುಂದುವರಿದ ಹಂಸಲೇಖರು, ಸಂವಿಧಾನ ಗೀತೆಯನ್ನು ಹಂಚಿಕೊಂಡರು.

“ನಾನು, ನೀನು, ನಮಗಾಗಿರೋದೇ ಕಾನೂನು,
ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”
ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು
ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ
ಬಹುತ್‌ ಭಾರತದ ಬೃಹತ್ ಸಂವಿಧಾನ
ಓ ಬಡವರ ಗೀತೆ, ಓ ಬಹುಜನ ಮಾತೆ
ಓ ಬಡವರ ಗೀತೆ, ಓ ಬಹುಜನ ಮಾತೆ
ಅಕ್ಷರ ರೂಪದ ಶಾಂತಿಯ ದನಿಯ
ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌
“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”
– ಎಂದು ಹಂಸಲೇಖರು ಬರೆದರು. ವಿವಾದದ ಬಳಿಕ ಸರಿಗಮಪ ಕಾರ್ಯಕ್ರಮಕ್ಕೆ ತೆರಳಿದ ಅವರು, ಶಾಂತಿ, ಸಹಬಾಳ್ವೆ, ಸಹೋದರತೆ, ಪ್ರೀತಿಯ ಸಂದೇಶಗಳನ್ನು ಸಾರಿದ ಬೌದ್ಧತ್ವವನ್ನು ತಮ್ಮ ವಸ್ತ್ರಾಲಂಕಾರದಲ್ಲಿ ಢಾಳಾಗಿ ತೋರಿಸಿಕೊಂಡರು.

ಲೇಖಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, “ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿ ಉಳಿಸೋಣ” ಎಂದು ಪುನರುಚ್ಚರಿಸಿದರು. ಹಂಸಲೇಖರ ಜೊತೆ ನಾಡಿನ ಜನರು ನಿಂತು, ಒಬ್ಬ ಕಲಾವಿದನ ನೋವಿಗೆ ಸ್ಪಂದಿಸಿದ್ದೇ ಇದಕ್ಕೆಲ್ಲ ಕಾರಣ.

ಹಂಸಲೇಖರು ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿಯ ಬಗ್ಗೆ ಮಾತನಾಡುತ್ತಾರೆ. ಬುದ್ಧ, ಬಸವ, ಭೀಮ ಅನುಯಾಯಿಗಳ ಜೊತೆಯಲ್ಲಿ, ಬುದ್ಧ ಮತ್ತು ಅಂಬೇಡ್ಕರ್‌ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರ ರಚನಾತ್ಮಕ ಸಾಂಸ್ಕೃತಿಕ ಪ್ರತಿರೋಧವು ಆಪ್ತವಾಗುತ್ತದೆ. ಹಿಂಸೆಯನ್ನು ಎಂದಿಗೂ ಪ್ರಚೋದಿಸದ ಅವರು ‘ನೆಲದ ಪದ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾವು ನೇಯುವ ಕೆಲಸ ಮಾಡೋಣ. ಹರಿಯುವುದು ಬೇಡ. ಮನಸ್ಸುಗಳನ್ನು, ಹೃದಯಗಳನ್ನು ಬೆಸೆಯೋಣ” ಎಂದು ನುಡಿದಿದ್ದಾರೆ. ರಾಷ್ಟ್ರಪಿತ ಗಾಂಧೀಜಿಯವರನ್ನು ‘ಹರಾಮಿ’ ಎನ್ನುವ, ಅಂತಹ ಹೇಳಿಕೆಗಳಿಗೆ ಶಿಳ್ಳೆ, ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುವ ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ ಎಂಬುದು ಮುಖ್ಯ. ಸಂವಿಧಾನ ವಿರೋಧಿ ಕೃತ್ಯಗಳನ್ನು ಪ್ರಭುತ್ವವೇ ಸಮರ್ಥಿಸುವ ಕಾಲಘಟ್ಟದಲ್ಲಿ ಈ ಮಾತುಗಳನ್ನು ಹಂಸಲೇಖ ಅವರು ಆಡುತ್ತಿದ್ದಾರೆಂಬುದು ಮುಖ್ಯ.

ಹಿಂಸೆಯನ್ನು ಅಹಿಂಸೆಯಿಂದಷ್ಟೇ ಮಣಿಸಬಹುದು ಎಂಬ ಬಹುದೊಡ್ಡ ಸಂದೇಶವನ್ನು ಸಾರಿದ ಗಾಂಧಿ ಮಾರ್ಗವನ್ನು ತುಳಿದು ರೈತರು ಗೆದ್ದಂತೆ, ‘ನೇಯುವ’ ಕೆಲಸದಿಂದ ಜನಮಾನಸವನ್ನು ಹಂಸಲೇಖರು ಗೆಲ್ಲುತ್ತಿದ್ದಾರೆ. ಸಾಂಸ್ಕೃತಿಕ ಪ್ರತಿರೋಧವನ್ನು ಸೃಜನಾತ್ಮಕವಾಗಿ ದಾಖಸುತ್ತಿದ್ದಾರೆ. ಹಂಸಲೇಖ ಅವರು ಒಂದು ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಕನ್ನಡ ಚಿತ್ರರಂಗದ ಸಂವೇದನಾಶೀಲ ಮನಸ್ಸುಗಳೂ ಚಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...