Homeಚಳವಳಿಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ..

- Advertisement -
- Advertisement -

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು ಜನರು ಗೌರವಿಸುವ ಕಾರಣ್ಕಕ್ಕಾಗಿಯೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ, ಫ್ಯಾಸಿಸ್ಟ್ ಶಕ್ತಿಗಳು ಅಂತಹ ಕಲಾವಿದರಿಗೆ ನಿರ್ಬಂಧಗಳನ್ನು ಹೇರುವ ಮಾರ್ಗಗಳನ್ನು ಹುಡುಕುತ್ತಿರುತ್ತವೆ. ಹಾಸ್ಯ ಕಲಾವಿದರಾದ ಮನಾವರ್ ಫಾರೂಖಿ, ಕುನಾಲ್ ಕಾಮ್ರಾ ಅವರ ಕಾರ್ಯಕ್ರಮಗಳನ್ನು ರದ್ದು ಮಾಡುವುದರ ಹಿಂದೆ ಕಲಾವಿದನ ಮೇಲೆ ಪ್ರಭುತ್ವಕ್ಕಿರುವ ಭಯವನ್ನು ಕಾಣಬಹುದು. ಇಂತಹ ಸಂದರ್ಭಗಳಲ್ಲಿ ಬಹುಸಂಖ್ಯೆಯ ಜನರು ಕಲಾವಿದನ ಬೆನ್ನಿಗೆ ನಿಂತರೆ, ಆತನ ಪ್ರತಿರೋಧದ ನೆಲೆಗಳು ಮತ್ತಷ್ಟು ದಿಟ್ಟವಾಗಿ ಮೂಡಿಬರುತ್ತವೆ. ನಾಡಿನ ಪ್ರಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಸತ್ಯವಾಗಿದೆ.

ಹಂಸಲೇಖ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಮಾಂಸಾಹಾರದ ಕುರಿತು, ಪೇಜಾವರ ಮಠದ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರ ಕುರಿತು ಆಡಿದ ಮಾತುಗಳು ವಿವಾದಕ್ಕೆ ಕಾರಣವಾದವು. “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವು ಮೇಲ್ಜಾತಿಗಳ ದೊಡ್ಡಸ್ತಿಕೆ ಪ್ರದರ್ಶನ ಆಗಬಾರದು” ಎಂಬುದು ಹಂಸಲೇಖ ಅವರ ಮಾತಿನ ಆಶಯವಾಗಿತ್ತು. “ದಲಿತರ ಮನೆಗೆ ಬಲಿತರು ಬರುವುದಲ್ಲ. ಬಲಿತರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಬೇಕು. ಅದು ನಿಜವಾದ ಸಮಾನತೆ” ಎಂದಿದ್ದ ಹಂಸಲೇಖರು ಪೇಜಾವರ ಶ್ರೀಗಳು ದಲಿತ ಕೇರಿಗಳಿಗೆ ಭೇಟಿ ನೀಡುತ್ತಿದ್ದನ್ನು ಉಲ್ಲೇಖಿಸಿದ್ದರು. ಈ ಕುರಿತು ಮಾತನಾಡುತ್ತಾ ಪ್ರಾಸಂಗಿಕವಾಗಿ, “ದಲಿತರು ಕೊಡುವ ಆಹಾರವನ್ನು ತಿನ್ನುತ್ತಾರಾ, ಕುರಿ ಕೋಳಿ ರಕ್ತವನ್ನು ಫ್ರೈ ಮಾಡಿಕೊಟ್ಟರೆ ತಿನ್ನುತ್ತಾರಾ?” ಎಂದು ಹೇಳಿಕೆ ನೀಡಿದರು. ಇದು ವಿವಾದಕ್ಕೆ ಕಾರಣವಾಯಿತು. ಸ್ವಾಮೀಜಿಯವರಿಗೆ ಅವಮಾನಿಸಲಾಗಿದೆ ಎಂದು ಬಿಂಬಿಸಲಾಯಿತು. ವಿವಾದ ಭುಗಿಲೆದ್ದ ಬಳಿಕ ಹಂಸಲೇಖ ಅವರು ಕ್ಷಮೆಯನ್ನೂ ಯಾಚಿಸಿದರು. ಈ ನಡುವೆ ಮಾಂಸಾಹಾರದ ಕುರಿತು ಮಹಿಳೆಯೊಬ್ಬರು ತೋರಿದ ಅಸಹನೆ, ‘ಮಾಂಸಾಹಾರ-ಸಸ್ಯಾಹಾರ’ದ ಚರ್ಚೆಗೆ ನಾಂದಿಯಾಯಿತು. ಹಂಸಲೇಖ ಅವರು ಕ್ಷಮೆಯಾಚಿಸಿದ ಬಳಿಕವೂ ಅವರನ್ನು ಪೀಡಿಸುವ ಕೆಲಸ ಮುಂದುವರಿಯಿತು. “ಬೃಂದಾವನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದು, ಬ್ರಾಹ್ಮಣ್ಯದ, ಒಂದು ವರ್ಗದ ಸವರ್ಣೀಯರ ಅಹಂಕಾರದ ಪ್ರತಿರೂಪದಂತೆ ನಾಡಿನ ಜನತೆಗೆ ಭಾಸವಾಯಿತು. ದೊಡ್ಡ ಮಟ್ಟದಲ್ಲಿ ಜನರು ಹಂಸಲೇಖರ ಪರ ನಿಂತರು. ಈ ನಡುವೆ ಪ್ರಕರಣವೂ ದಾಖಲಾಗಿ, ಹಂಸಲೇಖರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಹೇಳಿಕೆಯನ್ನು ನೀಡಿಬಂದರು. ನವೆಂಬರ್ 26ರ ಸಂವಿಧಾನ ದಿನದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಸೇರಿದ ಜನರು ಹಂಸಲೇಖರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದರು. ಬಸವನಗುಡಿ ಪೊಲೀಸರ ವರ್ತನೆಯನ್ನು ಖಂಡಿಸಿದರು.

ಪ್ರಕರಣ ಇಷ್ಟು ಚರ್ಚೆಯಾದ ನಂತರದಲ್ಲಿ ಹಂಸಲೇಖ ಅವರು ನೀಡಿರುತ್ತಿರುವ ಪ್ರತಿಮಾತ್ಮಕ ಪ್ರತಿಕ್ರಿಯೆಗಳು ಕೋಮು ವಿಷಮತೆ ಬಿತ್ತುವ ರಾಜಕಾರಣವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದು ಸುಳ್ಳಲ್ಲ. “ಸುಧಾರಣೆಯ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ ಅವರು ‘ಹಿಟ್ ರನ್ ಕೇಸ್’ ಆಗಲಿಲ್ಲ. ಸಂವಿಧಾನ ಆಶಯಗಳನ್ನು ಸ್ಮರಿಸಿದರು. “ಪೂಜ್ಯ ಕನ್ನಡಿಗರೇ, ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಪತ್ರ ಬರೆದರು. ಪ್ರೀತಿ ಆವೇಶಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು. ತನ್ನ ಬೆನ್ನ ಹಿಂದೆ ನಿಂತ ಬಹುದೊಡ್ಡ ಜನಸಮೂಹವನ್ನು ನೆನೆದರು. ಮುಂದುವರಿದ ಹಂಸಲೇಖರು, ಸಂವಿಧಾನ ಗೀತೆಯನ್ನು ಹಂಚಿಕೊಂಡರು.

“ನಾನು, ನೀನು, ನಮಗಾಗಿರೋದೇ ಕಾನೂನು,
ನಾವೂನು, ನೀವೂನು ಕಾನೂನಡಿಯಲಿ ಬಾಳೋಣು”
ಬಾಳೋಣು, ಬೆಳೆಯೋಣು, ಬಾಂಧವ್ಯವನೇ ಕಣ್ಣೋಣು
ಜೀವನ ವಿಧಾನಯಾನ, ಸಮತಾ ಪ್ರಧಾನ ಗಾನ
ಬಹುತ್‌ ಭಾರತದ ಬೃಹತ್ ಸಂವಿಧಾನ
ಓ ಬಡವರ ಗೀತೆ, ಓ ಬಹುಜನ ಮಾತೆ
ಓ ಬಡವರ ಗೀತೆ, ಓ ಬಹುಜನ ಮಾತೆ
ಅಕ್ಷರ ರೂಪದ ಶಾಂತಿಯ ದನಿಯ
ಪ್ರಜಾಪ್ರಭುತ್ವದ ಇನ್‌ಸ್ಟಿಟ್ಯೂಷನ್‌
“ವಂದೇ ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌”
“ವಂದೇ ಇಂಡಿಯನ್‌ ಕಾನ್‌ಸ್ಟಿಟ್ಯೂಷನ್‌”
– ಎಂದು ಹಂಸಲೇಖರು ಬರೆದರು. ವಿವಾದದ ಬಳಿಕ ಸರಿಗಮಪ ಕಾರ್ಯಕ್ರಮಕ್ಕೆ ತೆರಳಿದ ಅವರು, ಶಾಂತಿ, ಸಹಬಾಳ್ವೆ, ಸಹೋದರತೆ, ಪ್ರೀತಿಯ ಸಂದೇಶಗಳನ್ನು ಸಾರಿದ ಬೌದ್ಧತ್ವವನ್ನು ತಮ್ಮ ವಸ್ತ್ರಾಲಂಕಾರದಲ್ಲಿ ಢಾಳಾಗಿ ತೋರಿಸಿಕೊಂಡರು.

ಲೇಖಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಆತ್ಮ ಕಥನ ‘ಯರೆಬೇವು’ ಪುಸ್ತಕ ಬಿಡುಗಡೆ ಹಾಗೂ ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಾ, “ಧರ್ಮೋಕ್ರಸಿಯನ್ನು ಬದಿಗೆ ಸರಿಸಿ ಡೆಮಾಕ್ರಸಿ ಉಳಿಸೋಣ” ಎಂದು ಪುನರುಚ್ಚರಿಸಿದರು. ಹಂಸಲೇಖರ ಜೊತೆ ನಾಡಿನ ಜನರು ನಿಂತು, ಒಬ್ಬ ಕಲಾವಿದನ ನೋವಿಗೆ ಸ್ಪಂದಿಸಿದ್ದೇ ಇದಕ್ಕೆಲ್ಲ ಕಾರಣ.

ಹಂಸಲೇಖರು ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿಯ ಬಗ್ಗೆ ಮಾತನಾಡುತ್ತಾರೆ. ಬುದ್ಧ, ಬಸವ, ಭೀಮ ಅನುಯಾಯಿಗಳ ಜೊತೆಯಲ್ಲಿ, ಬುದ್ಧ ಮತ್ತು ಅಂಬೇಡ್ಕರ್‌ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರ ರಚನಾತ್ಮಕ ಸಾಂಸ್ಕೃತಿಕ ಪ್ರತಿರೋಧವು ಆಪ್ತವಾಗುತ್ತದೆ. ಹಿಂಸೆಯನ್ನು ಎಂದಿಗೂ ಪ್ರಚೋದಿಸದ ಅವರು ‘ನೆಲದ ಪದ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾವು ನೇಯುವ ಕೆಲಸ ಮಾಡೋಣ. ಹರಿಯುವುದು ಬೇಡ. ಮನಸ್ಸುಗಳನ್ನು, ಹೃದಯಗಳನ್ನು ಬೆಸೆಯೋಣ” ಎಂದು ನುಡಿದಿದ್ದಾರೆ. ರಾಷ್ಟ್ರಪಿತ ಗಾಂಧೀಜಿಯವರನ್ನು ‘ಹರಾಮಿ’ ಎನ್ನುವ, ಅಂತಹ ಹೇಳಿಕೆಗಳಿಗೆ ಶಿಳ್ಳೆ, ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುವ ಹಿಂಸಾ ಪ್ರವೃತ್ತಿ, ಒಡೆದು ಆಳುವ ನೀತಿ ರಾರಾಜಿಸುತ್ತಿರುವ ಕಾಲಘಟ್ಟದಲ್ಲಿ ಹಂಸಲೇಖ ಅವರು, “ನೇಯುವ, ಬೆಸೆಯುವ” ಪರಿಭಾಷೆಯನ್ನು ಬಳಸುತ್ತಿದ್ದಾರೆ ಎಂಬುದು ಮುಖ್ಯ. ಸಂವಿಧಾನ ವಿರೋಧಿ ಕೃತ್ಯಗಳನ್ನು ಪ್ರಭುತ್ವವೇ ಸಮರ್ಥಿಸುವ ಕಾಲಘಟ್ಟದಲ್ಲಿ ಈ ಮಾತುಗಳನ್ನು ಹಂಸಲೇಖ ಅವರು ಆಡುತ್ತಿದ್ದಾರೆಂಬುದು ಮುಖ್ಯ.

ಹಿಂಸೆಯನ್ನು ಅಹಿಂಸೆಯಿಂದಷ್ಟೇ ಮಣಿಸಬಹುದು ಎಂಬ ಬಹುದೊಡ್ಡ ಸಂದೇಶವನ್ನು ಸಾರಿದ ಗಾಂಧಿ ಮಾರ್ಗವನ್ನು ತುಳಿದು ರೈತರು ಗೆದ್ದಂತೆ, ‘ನೇಯುವ’ ಕೆಲಸದಿಂದ ಜನಮಾನಸವನ್ನು ಹಂಸಲೇಖರು ಗೆಲ್ಲುತ್ತಿದ್ದಾರೆ. ಸಾಂಸ್ಕೃತಿಕ ಪ್ರತಿರೋಧವನ್ನು ಸೃಜನಾತ್ಮಕವಾಗಿ ದಾಖಸುತ್ತಿದ್ದಾರೆ. ಹಂಸಲೇಖ ಅವರು ಒಂದು ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಕನ್ನಡ ಚಿತ್ರರಂಗದ ಸಂವೇದನಾಶೀಲ ಮನಸ್ಸುಗಳೂ ಚಲಿಸುತ್ತಿರುವುದು ಆಶಾದಾಯಕ ಬೆಳವಣಿಗೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....