Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...