Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...