Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...