Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...