Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...