Homeಕರ್ನಾಟಕಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

- Advertisement -
- Advertisement -

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿರುವ ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್‌, ‘ಊಸರವಳ್ಳಿ’ ಎಂದು ಕರೆದಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿ.ಸಿ.ಪಾಟೀಲ್‌, “ಶ್ರೀಗಳಾಗಿರುವವರು ಕೊಡುವ ಮುಂಚೆಯೇ ವಿರೋಧಿಸಿದ್ದರೆ ಸಮಾಜಕ್ಕೆ ಮಾದರಿಯಾಗುತ್ತಿದ್ದರು. ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ರೀತಿ ಮಾತನಾಡಿದ್ದಾರೆ. ಅದಕ್ಕೆ ಅರ್ಥವಿಲ್ಲ. ಕಾಂಗ್ರೆಸ್ ಭಕ್ತರನ್ನು ಮೆಚ್ಚಲಿಸಲಿಕ್ಕೆ ಮಾತನಾಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಿಂಗಾಲೇಶ್ವರ ಸ್ವಾಮೀಜಿಯವರು ಊಸರವಳ್ಳಿ ಥರ, ಬಣ್ಣ ಬದಲಿಸುತ್ತಾರೆ” ಎಂದಿರುವ ಪಾಟೀಲ್‌, “ವಿಚಾರಣೆಯಾಗದೆ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ. ಈಶ್ವರಪ್ಪನವರನ್ನು ಬಂಧಿಸಬೇಕು ಅವರು ಎನ್ನುತ್ತಾರೆ. ಎತ್ತು ಈಯಿತ್ತೆಂದರೆ ಕೊಟ್ಟಿಗೆಗೆ ಕಟ್ಟು ಎಂಬಂತಾಗಿದೆ ಕಾಂಗ್ರೆಸ್‌ ಕಥೆ” ಎಂದಿದ್ದಾರೆ.

“ಈ ಹಿಂದೆ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಜಾರ್ಜ್ ಅವರನ್ನು ಅರೆಸ್ಟ್ ಮಾಡಿದ್ದರಾ? ಇದಕ್ಕೆ ಅರ್ಥವಿಲ್ಲ. ತನಿಖೆ ನಡೆಯುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದರು.

“ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಸ್ವಾಮೀಜಿ ಬೇಸರದಿಂದ ಹೇಳಿದ್ದಾರೆ.

‘‘ಈಗಂತೂ ನಾಡಿನಲ್ಲಿ ಬುದ್ಧಿಗೇಡಿ ಸರ್ಕಾರಗಳು ಬರುತ್ತಿವೆ” ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಸರ್ಕಾರದ ಮೇಲೆ ಕಮಿಷನ್‌ ಆರೋಪಗಳು ಒಂದಾದಾಗಿ  ಒಂದೊಂದಾಗಿ ಹೊರ ಬೀಳತೊಡಗಿವೆ. ಮಾಜಿ ಸಚಿವ ಈಶ್ವರಪ್ಪನವರು ಮಾತ್ರವಲ್ಲ, ಇತರ ಜನಪ್ರತಿನಿಧಿಗಳ ಮೇಲೂ ಇಂತಹದ್ದೇ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಷ್ಟೇ ಅಲ್ಲಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

  2. ನಲ್ವತ್ತು ಪರ್ಸೇಂಟ್ ಮನುಷ್ಯತ್ವ ಇರುವವರ ನಡೆ ನುಡಿಗಳು. ಇದೇನ ಅಚ್ಚೇದಿನ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...