Homeಕರ್ನಾಟಕಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

- Advertisement -
- Advertisement -

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿರುವ ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್‌, ‘ಊಸರವಳ್ಳಿ’ ಎಂದು ಕರೆದಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿ.ಸಿ.ಪಾಟೀಲ್‌, “ಶ್ರೀಗಳಾಗಿರುವವರು ಕೊಡುವ ಮುಂಚೆಯೇ ವಿರೋಧಿಸಿದ್ದರೆ ಸಮಾಜಕ್ಕೆ ಮಾದರಿಯಾಗುತ್ತಿದ್ದರು. ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ರೀತಿ ಮಾತನಾಡಿದ್ದಾರೆ. ಅದಕ್ಕೆ ಅರ್ಥವಿಲ್ಲ. ಕಾಂಗ್ರೆಸ್ ಭಕ್ತರನ್ನು ಮೆಚ್ಚಲಿಸಲಿಕ್ಕೆ ಮಾತನಾಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಿಂಗಾಲೇಶ್ವರ ಸ್ವಾಮೀಜಿಯವರು ಊಸರವಳ್ಳಿ ಥರ, ಬಣ್ಣ ಬದಲಿಸುತ್ತಾರೆ” ಎಂದಿರುವ ಪಾಟೀಲ್‌, “ವಿಚಾರಣೆಯಾಗದೆ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ. ಈಶ್ವರಪ್ಪನವರನ್ನು ಬಂಧಿಸಬೇಕು ಅವರು ಎನ್ನುತ್ತಾರೆ. ಎತ್ತು ಈಯಿತ್ತೆಂದರೆ ಕೊಟ್ಟಿಗೆಗೆ ಕಟ್ಟು ಎಂಬಂತಾಗಿದೆ ಕಾಂಗ್ರೆಸ್‌ ಕಥೆ” ಎಂದಿದ್ದಾರೆ.

“ಈ ಹಿಂದೆ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಜಾರ್ಜ್ ಅವರನ್ನು ಅರೆಸ್ಟ್ ಮಾಡಿದ್ದರಾ? ಇದಕ್ಕೆ ಅರ್ಥವಿಲ್ಲ. ತನಿಖೆ ನಡೆಯುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದರು.

“ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಸ್ವಾಮೀಜಿ ಬೇಸರದಿಂದ ಹೇಳಿದ್ದಾರೆ.

‘‘ಈಗಂತೂ ನಾಡಿನಲ್ಲಿ ಬುದ್ಧಿಗೇಡಿ ಸರ್ಕಾರಗಳು ಬರುತ್ತಿವೆ” ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಸರ್ಕಾರದ ಮೇಲೆ ಕಮಿಷನ್‌ ಆರೋಪಗಳು ಒಂದಾದಾಗಿ  ಒಂದೊಂದಾಗಿ ಹೊರ ಬೀಳತೊಡಗಿವೆ. ಮಾಜಿ ಸಚಿವ ಈಶ್ವರಪ್ಪನವರು ಮಾತ್ರವಲ್ಲ, ಇತರ ಜನಪ್ರತಿನಿಧಿಗಳ ಮೇಲೂ ಇಂತಹದ್ದೇ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಷ್ಟೇ ಅಲ್ಲಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

  2. ನಲ್ವತ್ತು ಪರ್ಸೇಂಟ್ ಮನುಷ್ಯತ್ವ ಇರುವವರ ನಡೆ ನುಡಿಗಳು. ಇದೇನ ಅಚ್ಚೇದಿನ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...