Homeಕರ್ನಾಟಕಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

ಪರ್ಸೆಂಟೇಜ್‌ ಫೈಲ್ಸ್‌: ದಿಂಗಾಲೇಶ್ವರ ಸ್ವಾಮೀಜಿಯವರನ್ನು ‘ಊಸರವಳ್ಳಿ’ ಎಂದ ಬಿ.ಸಿ.ಪಾಟೀಲ್

- Advertisement -
- Advertisement -

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿರುವ ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್‌, ‘ಊಸರವಳ್ಳಿ’ ಎಂದು ಕರೆದಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿ.ಸಿ.ಪಾಟೀಲ್‌, “ಶ್ರೀಗಳಾಗಿರುವವರು ಕೊಡುವ ಮುಂಚೆಯೇ ವಿರೋಧಿಸಿದ್ದರೆ ಸಮಾಜಕ್ಕೆ ಮಾದರಿಯಾಗುತ್ತಿದ್ದರು. ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ರೀತಿ ಮಾತನಾಡಿದ್ದಾರೆ. ಅದಕ್ಕೆ ಅರ್ಥವಿಲ್ಲ. ಕಾಂಗ್ರೆಸ್ ಭಕ್ತರನ್ನು ಮೆಚ್ಚಲಿಸಲಿಕ್ಕೆ ಮಾತನಾಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಿಂಗಾಲೇಶ್ವರ ಸ್ವಾಮೀಜಿಯವರು ಊಸರವಳ್ಳಿ ಥರ, ಬಣ್ಣ ಬದಲಿಸುತ್ತಾರೆ” ಎಂದಿರುವ ಪಾಟೀಲ್‌, “ವಿಚಾರಣೆಯಾಗದೆ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ. ಈಶ್ವರಪ್ಪನವರನ್ನು ಬಂಧಿಸಬೇಕು ಅವರು ಎನ್ನುತ್ತಾರೆ. ಎತ್ತು ಈಯಿತ್ತೆಂದರೆ ಕೊಟ್ಟಿಗೆಗೆ ಕಟ್ಟು ಎಂಬಂತಾಗಿದೆ ಕಾಂಗ್ರೆಸ್‌ ಕಥೆ” ಎಂದಿದ್ದಾರೆ.

“ಈ ಹಿಂದೆ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಜಾರ್ಜ್ ಅವರನ್ನು ಅರೆಸ್ಟ್ ಮಾಡಿದ್ದರಾ? ಇದಕ್ಕೆ ಅರ್ಥವಿಲ್ಲ. ತನಿಖೆ ನಡೆಯುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪರ್ಸೆಂಟೇಜ್‌ ಫೈಲ್ಸ್‌: ಗೋವಿನ ಮೇವಿನಲ್ಲೂ ಕಮಿಷನ್‌; ಮಠಕ್ಕೆ ನೀಡಿದ ಅನುದಾನದಲ್ಲೂ ಕಮಿಷನ್‌!

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದರು.

“ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಸ್ವಾಮೀಜಿ ಬೇಸರದಿಂದ ಹೇಳಿದ್ದಾರೆ.

‘‘ಈಗಂತೂ ನಾಡಿನಲ್ಲಿ ಬುದ್ಧಿಗೇಡಿ ಸರ್ಕಾರಗಳು ಬರುತ್ತಿವೆ” ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಸರ್ಕಾರದ ಮೇಲೆ ಕಮಿಷನ್‌ ಆರೋಪಗಳು ಒಂದಾದಾಗಿ  ಒಂದೊಂದಾಗಿ ಹೊರ ಬೀಳತೊಡಗಿವೆ. ಮಾಜಿ ಸಚಿವ ಈಶ್ವರಪ್ಪನವರು ಮಾತ್ರವಲ್ಲ, ಇತರ ಜನಪ್ರತಿನಿಧಿಗಳ ಮೇಲೂ ಇಂತಹದ್ದೇ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಷ್ಟೇ ಅಲ್ಲಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

  2. ನಲ್ವತ್ತು ಪರ್ಸೇಂಟ್ ಮನುಷ್ಯತ್ವ ಇರುವವರ ನಡೆ ನುಡಿಗಳು. ಇದೇನ ಅಚ್ಚೇದಿನ

LEAVE A REPLY

Please enter your comment!
Please enter your name here

- Advertisment -

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...