Homeಮುಖಪುಟನ್ಯಾಯಾಂಗದಲ್ಲಿ ಶೇ. 50 ಮಹಿಳಾ ಮೀಸಲಾತಿಗೆ ಸಿಜೆಐ ಕರೆ

ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಮೀಸಲಾತಿಗೆ ಸಿಜೆಐ ಕರೆ

ಕಾರ್ಲ್‌ಮಾಕ್ಸ್‌ ಮಾತನ್ನು ಕೊಂಚ ಬದಲಾಯಿಸಿ ಹೇಳಿರುವ ಎನ್.ವಿ.ರಮಣ ಅವರು, ‘ಜಗತ್ತಿನ ಮಹಿಳೆಯರೆಲ್ಲರೂ ಒಂದಾಗಿ, ಕಳೆದುಕೊಳ್ಳುವಂತಹದ್ದೇನೂ ಇಲ್ಲ, ನಿಮ್ಮ ಸಂಕೋಲೆಗಳನ್ನು ಹೊರತುಪಡಿಸಿ’ ಎಂದಿದ್ದಾರೆ.

- Advertisement -
- Advertisement -

ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ.ರಮಣ ಅವರು ಕರೆ ನೀಡಿದ್ದು, ದೇಶದ್ಯಾಂತ ಇರುವ ಕಾನೂನು ಕಾಲೇಜುಗಳಲ್ಲಿಯೂ ಮಹಿಳೆಯರಿಗೆ ಅರ್ಧದಷ್ಟು ಮೀಸಲಾತಿ ನೀಡಬೇಕೆಂಬ ಒತ್ತಾಯವನ್ನು ಬೆಂಬಲಿಸಿದ್ದಾರೆ.

ಹೊಸದಾಗಿ ಸುಪ್ರೀಂಕೋರ್ಟ್‌‌ಗೆ ನೇಮಕವಾದ ಒಂಬತ್ತು ಮಂದಿ ನ್ಯಾಯಮೂರ್ತಿಗಳು ಹಾಗೂ ಸಿಜೆಐ ಅವರಿಗೆ ಸುಪ್ರೀಂಕೋರ್ಟ್‌‌ನ ಮಹಿಳಾ ಅಡ್ವೊಕೇಟ್‌ಗಳು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದು ನಿಮ್ಮ ಹಕ್ಕು, ಅದಕ್ಕಾಗಿ ನೀವು ಒತ್ತಾಯಿಸಬಹುದು” ಎಂದಿದ್ದಾರೆ.

“ಮಹಿಳೆಯರಿಗೆ ನ್ಯಾಯಾಂಗದಲ್ಲಿ ಶೇ. 50ರಷ್ಟು ಮೀಸಲಾತಿ ನೀಡುವ ಅಗತ್ಯತೆ ಇದೆ. ಇದು ಸಾವಿರ ವರ್ಷಗಳ ದಬ್ಬಾಳಿಕೆಯ ವಿಷಯ. ಪ್ರಾಥಮಿಕ ಹಂತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಶೇ. 30ಕ್ಕಿಂತ ಕಡಿಮೆ ಮಹಿಳಾ ನ್ಯಾಯಾಧೀಶರಿದ್ದಾರೆ. ಇದು ಹೈಕೋರ್ಟ್‌ನಲ್ಲಿ ಶೇ. 11.5ರಷ್ಟಿದ್ದು, ಸುಪ್ರೀಂಕೋರ್ಟ್‌‌ನಲ್ಲಿ ಶೇ. 11-12ರಷ್ಟಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“17 ಲಕ್ಷ ವಕೀಲರಲ್ಲಿ ಶೇ. 15ರಷ್ಟು ಮಾತ್ರ ಮಹಿಳೆಯರಿದ್ದಾರೆ. ರಾಜ್ಯ ಮಟ್ಟದ ಬಾರ್‌ ಕೌನ್ಸಿಲ್‌ಗಳಲ್ಲಿ ಶೇಕಡಾ ಎರಡರಷ್ಟು ಮಾತ್ರ ಆಯ್ಕೆಯಾದ ಮಹಿಳಾ ಪ್ರತಿನಿಧಿಗಳಿದ್ದಾರೆ. ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸಮಿತಿಯಲ್ಲಿ ಒಬ್ಬರೇ ಒಬ್ಬರು ಮಹಿಳಾ ಪ್ರತಿನಿಧಿಗಳು ಯಾಕಿಲ್ಲ ಎಂದು ಕೇಳಬಯಸುತ್ತೇನೆ. ಈ ತಪ್ಪನ್ನು ತಿದ್ದುವ ಅಗತ್ಯವಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಜಗತ್ತಿನ ಕಾರ್ಮಿಕರೆಲ್ಲರೂ ಒಂದಾಗಿ, ಕಳೆದುಕೊಳ್ಳುವಂತಹದ್ದೇನೂ ಇಲ್ಲ, ನಿಮ್ಮ ಸಂಕೋಲೆಗಳನ್ನು ಹೊರತುಪಡಿಸಿ’ ಎಂದು ಕಾರ್ಲ್ ಮಾರ್ಕ್ಸ್‌ ಹೇಳಿದ್ದ. ಅದನ್ನು ಸ್ವಲ್ಪ ಬದಲಾಯಿಸಿ ಹೇಳುತ್ತೇನೆ. ‘ಜಗತ್ತಿನ ಮಹಿಳೆಯರೆಲ್ಲರೂ ಒಂದಾಗಿ, ಕಳೆದುಕೊಳ್ಳುವಂತಹದ್ದೇನೂ ಇಲ್ಲ, ನಿಮ್ಮ ಸಂಕೋಲೆಗಳನ್ನು ಹೊರತುಪಡಿಸಿ” ಎಂದಿದ್ದಾರೆ.


ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...