Homeಮುಖಪುಟಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

ಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

- Advertisement -
- Advertisement -

ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸಾಂಕ್ರಾಮಿಕ ವೈರಸ್‌ಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊರೊನಾ ಮೂರನೇ ಅಲೆ ತಡೆಯಲು ಯಜ್ಞ ನಡೆಸುವಂತೆ ಸಲಹೆ ನೀಡಿದ್ದಾರೆ.

ಕೊರೊನಾ ಹಬ್ಬುತ್ತಿರುವ ಈ ಸಮಯದಲ್ಲಿ ಪರಿಸರವನ್ನು ಶುದ್ಧೀಕರಿಸಲು ಮತ್ತು ಮೂರನೇ ತರಂಗವನ್ನು ದೂರವಿಡಲು ಪ್ರತಿಯೊಬ್ಬರೂ ನಾಲ್ಕು ದಿನಗಳ ಕಾಲ ‘ಯಜ್ಞ ಚಿಕಿತ್ಸೆ’ ನಡೆಸುವಂತೆ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿಕೆ ನೀಡಿದ್ದಾರೆ.

ಇಂದೋರ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪರಿಸರ ಶುದ್ಧೀಕರಣಕ್ಕಾಗಿ, ನಾಲ್ಕು ದಿನಗಳ ಕಾಲ ಯಜ್ಞವನ್ನು ಮಾಡಿ. ಇದು “ಯಜ್ಞ ಚಿಕಿತ್ಸಾ”. ಹಿಂದಿನ ಕಾಲದಲ್ಲಿ, ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದು ಪರಿಸರವನ್ನು ಶುದ್ಧೀಕರಿಸುತ್ತದೆ ಇದರಿಂದ ಕೊರೊನಾ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಭಾರತವು ಪ್ರಸ್ತುತ ವಿನಾಶಕಾರಿ ಎರಡನೇ ಕೋವಿಡ್ ಅಲೆಯನ್ನು ಎದುರಿಸುತ್ತಿದೆ, ಅದು ರಾಷ್ಟ್ರದಾದ್ಯಂತ ವ್ಯಾಪಿಸಿದೆ. ದೇಶದ ಆರೋಗ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನೇ ಅಲುಗಾಡಿಸಿದ್ದು, ಕೊರೊನಾ ವಾರಿಯರ್ಸ್ ಆಗಿರುವ ವೈದ್ಯಕೀಯ ಕಾರ್ಯಕರ್ತರ ಮೇಲೆ ಹೊರೆಯಾಗಿದೆ. ನಾಲ್ಕು ದಿನಗಳ ಕಾಲ ಯಜ್ಞ ಚಿಕಿತ್ಸೆ ನಡೆಸಿದರೆ ಕೊರೊನಾ ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಉಷಾ ಠಾಕೂರ್‌ ಹೇಳಿದ್ದಾರೆ.

“ತಜ್ಞರ ಪ್ರಕಾರ, ಈ ಮೂರನೇ ಅಲೆ ಮಕ್ಕಳಿಗೆ ಮಾರಕವಾಗಿದೆ. ಇದಕ್ಕಾಗಿ ಮಧ್ಯಪ್ರದೇಶ ಸರ್ಕಾರವು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಾಂಕ್ರಾಮಿಕ ರೋಗವನ್ನು ನಾವು ಯಶಸ್ವಿಯಾಗಿ ನಿವಾರಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಹಿಂದೆ, ಉಷಾ ಠಾಕೂರ್ ಇತ್ತೀಚೆಗೆ ಕೊರೊನಾ ನಿರ್ಮೂಲನೆ ಮಾಡಲು ಇಂದೋರ್ ವಿಮಾನ ನಿಲ್ದಾಣದಲ್ಲಿ ಪ್ರತಿಮೆಯ ಮುಂದೆ ಪೂಜೆ, ಹೋಮ ಆಚರಣೆಗಳನ್ನು ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಕೊರೊನಾ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದಾಗ ಮಾಸ್ಕ್ ಕೂಡ ಧರಿಸಲಿಲ್ಲ ಎಂದು ಟೀಕಿಸಲಾಗಿತ್ತು.

ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣುವ ಉಷಾ ಠಾಕೂರ್, ತಾವು ನಿಯಮಿತವಾಗಿ ಹನುಮಾನ್ ಚಾಲಿಸಾವನ್ನು ಪಠಿಸುವುದರಿಂದ ಮತ್ತು ಕಷಾಯ ಕುಡಿಯುವುದರಿಂದ ತನ್ನ ವೈದಿಕ ಜೀವನಶೈಲಿಯಿಂದಾಗಿ ತಮ್ಮ ಮೇಲೆ ಕೊರೊನಾ ಆಕ್ರಮಣ ಮಾಡುವುದಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. 1, 2 ನೇ ಅಲೆಗೆ ಯಾಕೆ ಮಾಡಲಿಲ್ಲ…ಈ ಯಾಹಾಗ (ಯಾಗ)
    ಯಗ್ಗಣ (ಯಜ್ಞ) ಗಳೂ ..

  2. ಕೊರೋನಾ ಓಡಿಸ‌ಲಿಕ್ಕೆ ಪ್ರ‌ಧಾನಿಗ‌ಳು ದೀಪ‌ಹ‌ಚ್ಚಿ ತ‌ಟ್ಟೇ ಬಾರಿಸ‌ಲು ಹೇಳಿದ‌ರು. ಈ ಮೆಡ‌ಮ್ ಯ‌ಗ್ನ‌ ಮಾಡಿ ಅ0ತಾ ಹೇಳ್ತಾರೆ. ಮು0ದಿನ‌ವ‌ರು ಬ್ರಾಹ್ಮ‌ಣ‌ರಿಗೆ ಹ‌ಸುಗ‌ಳ‌ನ್ನು ದಾನ‌ಮಾಡಿ ಅ0ತಾ ಹೇಳ‌ಬ‌ಹುದು. ಒಟ್ಟಾರೆ ಜ‌ನ‌ ಸ‌ತ್ರೂ ಪ‌ರ‌ವಾಗಿಲ್ಲ‌ ವೈಧಿಕ‌ ಪ‌ರ‌0ಪ‌ರೆ ಉಳಿಬೇಕು.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...