Homeಮುಖಪುಟಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

ಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

- Advertisement -
- Advertisement -

ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸಾಂಕ್ರಾಮಿಕ ವೈರಸ್‌ಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊರೊನಾ ಮೂರನೇ ಅಲೆ ತಡೆಯಲು ಯಜ್ಞ ನಡೆಸುವಂತೆ ಸಲಹೆ ನೀಡಿದ್ದಾರೆ.

ಕೊರೊನಾ ಹಬ್ಬುತ್ತಿರುವ ಈ ಸಮಯದಲ್ಲಿ ಪರಿಸರವನ್ನು ಶುದ್ಧೀಕರಿಸಲು ಮತ್ತು ಮೂರನೇ ತರಂಗವನ್ನು ದೂರವಿಡಲು ಪ್ರತಿಯೊಬ್ಬರೂ ನಾಲ್ಕು ದಿನಗಳ ಕಾಲ ‘ಯಜ್ಞ ಚಿಕಿತ್ಸೆ’ ನಡೆಸುವಂತೆ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿಕೆ ನೀಡಿದ್ದಾರೆ.

ಇಂದೋರ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪರಿಸರ ಶುದ್ಧೀಕರಣಕ್ಕಾಗಿ, ನಾಲ್ಕು ದಿನಗಳ ಕಾಲ ಯಜ್ಞವನ್ನು ಮಾಡಿ. ಇದು “ಯಜ್ಞ ಚಿಕಿತ್ಸಾ”. ಹಿಂದಿನ ಕಾಲದಲ್ಲಿ, ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದು ಪರಿಸರವನ್ನು ಶುದ್ಧೀಕರಿಸುತ್ತದೆ ಇದರಿಂದ ಕೊರೊನಾ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಭಾರತವು ಪ್ರಸ್ತುತ ವಿನಾಶಕಾರಿ ಎರಡನೇ ಕೋವಿಡ್ ಅಲೆಯನ್ನು ಎದುರಿಸುತ್ತಿದೆ, ಅದು ರಾಷ್ಟ್ರದಾದ್ಯಂತ ವ್ಯಾಪಿಸಿದೆ. ದೇಶದ ಆರೋಗ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನೇ ಅಲುಗಾಡಿಸಿದ್ದು, ಕೊರೊನಾ ವಾರಿಯರ್ಸ್ ಆಗಿರುವ ವೈದ್ಯಕೀಯ ಕಾರ್ಯಕರ್ತರ ಮೇಲೆ ಹೊರೆಯಾಗಿದೆ. ನಾಲ್ಕು ದಿನಗಳ ಕಾಲ ಯಜ್ಞ ಚಿಕಿತ್ಸೆ ನಡೆಸಿದರೆ ಕೊರೊನಾ ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಉಷಾ ಠಾಕೂರ್‌ ಹೇಳಿದ್ದಾರೆ.

“ತಜ್ಞರ ಪ್ರಕಾರ, ಈ ಮೂರನೇ ಅಲೆ ಮಕ್ಕಳಿಗೆ ಮಾರಕವಾಗಿದೆ. ಇದಕ್ಕಾಗಿ ಮಧ್ಯಪ್ರದೇಶ ಸರ್ಕಾರವು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಾಂಕ್ರಾಮಿಕ ರೋಗವನ್ನು ನಾವು ಯಶಸ್ವಿಯಾಗಿ ನಿವಾರಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಹಿಂದೆ, ಉಷಾ ಠಾಕೂರ್ ಇತ್ತೀಚೆಗೆ ಕೊರೊನಾ ನಿರ್ಮೂಲನೆ ಮಾಡಲು ಇಂದೋರ್ ವಿಮಾನ ನಿಲ್ದಾಣದಲ್ಲಿ ಪ್ರತಿಮೆಯ ಮುಂದೆ ಪೂಜೆ, ಹೋಮ ಆಚರಣೆಗಳನ್ನು ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಕೊರೊನಾ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದಾಗ ಮಾಸ್ಕ್ ಕೂಡ ಧರಿಸಲಿಲ್ಲ ಎಂದು ಟೀಕಿಸಲಾಗಿತ್ತು.

ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣುವ ಉಷಾ ಠಾಕೂರ್, ತಾವು ನಿಯಮಿತವಾಗಿ ಹನುಮಾನ್ ಚಾಲಿಸಾವನ್ನು ಪಠಿಸುವುದರಿಂದ ಮತ್ತು ಕಷಾಯ ಕುಡಿಯುವುದರಿಂದ ತನ್ನ ವೈದಿಕ ಜೀವನಶೈಲಿಯಿಂದಾಗಿ ತಮ್ಮ ಮೇಲೆ ಕೊರೊನಾ ಆಕ್ರಮಣ ಮಾಡುವುದಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. 1, 2 ನೇ ಅಲೆಗೆ ಯಾಕೆ ಮಾಡಲಿಲ್ಲ…ಈ ಯಾಹಾಗ (ಯಾಗ)
    ಯಗ್ಗಣ (ಯಜ್ಞ) ಗಳೂ ..

  2. ಕೊರೋನಾ ಓಡಿಸ‌ಲಿಕ್ಕೆ ಪ್ರ‌ಧಾನಿಗ‌ಳು ದೀಪ‌ಹ‌ಚ್ಚಿ ತ‌ಟ್ಟೇ ಬಾರಿಸ‌ಲು ಹೇಳಿದ‌ರು. ಈ ಮೆಡ‌ಮ್ ಯ‌ಗ್ನ‌ ಮಾಡಿ ಅ0ತಾ ಹೇಳ್ತಾರೆ. ಮು0ದಿನ‌ವ‌ರು ಬ್ರಾಹ್ಮ‌ಣ‌ರಿಗೆ ಹ‌ಸುಗ‌ಳ‌ನ್ನು ದಾನ‌ಮಾಡಿ ಅ0ತಾ ಹೇಳ‌ಬ‌ಹುದು. ಒಟ್ಟಾರೆ ಜ‌ನ‌ ಸ‌ತ್ರೂ ಪ‌ರ‌ವಾಗಿಲ್ಲ‌ ವೈಧಿಕ‌ ಪ‌ರ‌0ಪ‌ರೆ ಉಳಿಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...