Homeಮುಖಪುಟಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

ಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

- Advertisement -
- Advertisement -

ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸಾಂಕ್ರಾಮಿಕ ವೈರಸ್‌ಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊರೊನಾ ಮೂರನೇ ಅಲೆ ತಡೆಯಲು ಯಜ್ಞ ನಡೆಸುವಂತೆ ಸಲಹೆ ನೀಡಿದ್ದಾರೆ.

ಕೊರೊನಾ ಹಬ್ಬುತ್ತಿರುವ ಈ ಸಮಯದಲ್ಲಿ ಪರಿಸರವನ್ನು ಶುದ್ಧೀಕರಿಸಲು ಮತ್ತು ಮೂರನೇ ತರಂಗವನ್ನು ದೂರವಿಡಲು ಪ್ರತಿಯೊಬ್ಬರೂ ನಾಲ್ಕು ದಿನಗಳ ಕಾಲ ‘ಯಜ್ಞ ಚಿಕಿತ್ಸೆ’ ನಡೆಸುವಂತೆ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿಕೆ ನೀಡಿದ್ದಾರೆ.

ಇಂದೋರ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪರಿಸರ ಶುದ್ಧೀಕರಣಕ್ಕಾಗಿ, ನಾಲ್ಕು ದಿನಗಳ ಕಾಲ ಯಜ್ಞವನ್ನು ಮಾಡಿ. ಇದು “ಯಜ್ಞ ಚಿಕಿತ್ಸಾ”. ಹಿಂದಿನ ಕಾಲದಲ್ಲಿ, ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದು ಪರಿಸರವನ್ನು ಶುದ್ಧೀಕರಿಸುತ್ತದೆ ಇದರಿಂದ ಕೊರೊನಾ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಭಾರತವು ಪ್ರಸ್ತುತ ವಿನಾಶಕಾರಿ ಎರಡನೇ ಕೋವಿಡ್ ಅಲೆಯನ್ನು ಎದುರಿಸುತ್ತಿದೆ, ಅದು ರಾಷ್ಟ್ರದಾದ್ಯಂತ ವ್ಯಾಪಿಸಿದೆ. ದೇಶದ ಆರೋಗ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನೇ ಅಲುಗಾಡಿಸಿದ್ದು, ಕೊರೊನಾ ವಾರಿಯರ್ಸ್ ಆಗಿರುವ ವೈದ್ಯಕೀಯ ಕಾರ್ಯಕರ್ತರ ಮೇಲೆ ಹೊರೆಯಾಗಿದೆ. ನಾಲ್ಕು ದಿನಗಳ ಕಾಲ ಯಜ್ಞ ಚಿಕಿತ್ಸೆ ನಡೆಸಿದರೆ ಕೊರೊನಾ ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಉಷಾ ಠಾಕೂರ್‌ ಹೇಳಿದ್ದಾರೆ.

“ತಜ್ಞರ ಪ್ರಕಾರ, ಈ ಮೂರನೇ ಅಲೆ ಮಕ್ಕಳಿಗೆ ಮಾರಕವಾಗಿದೆ. ಇದಕ್ಕಾಗಿ ಮಧ್ಯಪ್ರದೇಶ ಸರ್ಕಾರವು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಾಂಕ್ರಾಮಿಕ ರೋಗವನ್ನು ನಾವು ಯಶಸ್ವಿಯಾಗಿ ನಿವಾರಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಹಿಂದೆ, ಉಷಾ ಠಾಕೂರ್ ಇತ್ತೀಚೆಗೆ ಕೊರೊನಾ ನಿರ್ಮೂಲನೆ ಮಾಡಲು ಇಂದೋರ್ ವಿಮಾನ ನಿಲ್ದಾಣದಲ್ಲಿ ಪ್ರತಿಮೆಯ ಮುಂದೆ ಪೂಜೆ, ಹೋಮ ಆಚರಣೆಗಳನ್ನು ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಕೊರೊನಾ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದಾಗ ಮಾಸ್ಕ್ ಕೂಡ ಧರಿಸಲಿಲ್ಲ ಎಂದು ಟೀಕಿಸಲಾಗಿತ್ತು.

ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣುವ ಉಷಾ ಠಾಕೂರ್, ತಾವು ನಿಯಮಿತವಾಗಿ ಹನುಮಾನ್ ಚಾಲಿಸಾವನ್ನು ಪಠಿಸುವುದರಿಂದ ಮತ್ತು ಕಷಾಯ ಕುಡಿಯುವುದರಿಂದ ತನ್ನ ವೈದಿಕ ಜೀವನಶೈಲಿಯಿಂದಾಗಿ ತಮ್ಮ ಮೇಲೆ ಕೊರೊನಾ ಆಕ್ರಮಣ ಮಾಡುವುದಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. 1, 2 ನೇ ಅಲೆಗೆ ಯಾಕೆ ಮಾಡಲಿಲ್ಲ…ಈ ಯಾಹಾಗ (ಯಾಗ)
    ಯಗ್ಗಣ (ಯಜ್ಞ) ಗಳೂ ..

  2. ಕೊರೋನಾ ಓಡಿಸ‌ಲಿಕ್ಕೆ ಪ್ರ‌ಧಾನಿಗ‌ಳು ದೀಪ‌ಹ‌ಚ್ಚಿ ತ‌ಟ್ಟೇ ಬಾರಿಸ‌ಲು ಹೇಳಿದ‌ರು. ಈ ಮೆಡ‌ಮ್ ಯ‌ಗ್ನ‌ ಮಾಡಿ ಅ0ತಾ ಹೇಳ್ತಾರೆ. ಮು0ದಿನ‌ವ‌ರು ಬ್ರಾಹ್ಮ‌ಣ‌ರಿಗೆ ಹ‌ಸುಗ‌ಳ‌ನ್ನು ದಾನ‌ಮಾಡಿ ಅ0ತಾ ಹೇಳ‌ಬ‌ಹುದು. ಒಟ್ಟಾರೆ ಜ‌ನ‌ ಸ‌ತ್ರೂ ಪ‌ರ‌ವಾಗಿಲ್ಲ‌ ವೈಧಿಕ‌ ಪ‌ರ‌0ಪ‌ರೆ ಉಳಿಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...