Homeಕರ್ನಾಟಕಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ‘ಬಾಬ್ರಿ ಮಸೀದಿ ದ್ವಂಸ’ ಕುರಿತು ವಿದ್ಯಾರ್ಥಿಗಳು ಪ್ರಹಸನ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

2022-23ನೇ ಸಾಲಿನ ವಾರ್ಷಿಕೋತ್ಸದಲ್ಲಿ ವಿದ್ಯಾರ್ಥಿಗಳು ಸ್ಕಿಟ್ ಪ್ರದರ್ಶನ ಮಾಡಿರುವ ಸಂಬಂಧ ‘ಇನ್ಟಾಗ್ರಾಮ್‌’ನಲ್ಲಿ ಕ್ಲಿಪ್‌ ಹಂಚಿಕೊಳ್ಳಲಾಗಿದೆ. ಈ ವಿಡಿಯೊಕ್ಕೆ ಅನೇಕರು ‘ಜೈ ಶ್ರೀರಾಮ್’ ಎಂದು ಕಮೆಂಟ್ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಡ್ಡಿ ಧರಿಸಿದ ವೇಶದಲ್ಲಿರುವ ವಿದ್ಯಾರ್ಥಿ ಪಾತ್ರಧಾರಿಗಳು, ಕೇಸರಿ ವಸ್ತ್ರ ಧರಿಸಿದ ಪಾತ್ರಧಾರಿಗಳು, ರಾಮಮಂದಿರ ಎಂದು ಹೆಸರಿಸಲಾದ ಕಲಾಕೃತಿ ಮತ್ತು ಮಸೀದಿಯನ್ನು ಹೋಲುವ ಕಲಾಕೃತಿಯನ್ನು ಈ ವಿಡಿಯೊ ಕ್ಲಿಪ್‌ನಲ್ಲಿ ಕಾಣಬಹುದು.

ಭಗವಾಧ್ವಜ ಹಿಡಿದ, ಆರ್‌ಎಸ್‌ಎಸ್ ಚಡ್ಡಿ ತೊಟ್ಟಿರುವ ವಿದ್ಯಾರ್ಥಿ ಪಾತ್ರಧಾರಿಗಳು ರಾಮಮಂದಿರ ರಕ್ಷಣೆಗಾಗಿ  ಹೋರಾಡಿದವರು ಎಂಬಂತೆ ತೋರಿಸಲಾಗಿದೆ. ಮುಸ್ಲಿಂ ಅರಸರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬಂತೆಯೂ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂದಿರ ರಕ್ಷಣೆಗಾಗಿ ಪ್ರಾಣ ತೆತ್ತಿದ್ದಾರೆ ಎಂಬಂತೆಯೂ ವೇದಿಕೆ ಮೇಲೆ ಪ್ರದರ್ಶನ ಮಾಡಲಾಗಿದೆ. ಹೋಮ ಹವನ ಮಾಡುತ್ತಿರುವ ಪ್ರಧಾನಿ ಮೋದಿಯವರ ಪಾತ್ರವನ್ನೂ ತೋರಿಸಲಾಗಿದೆ. ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷವನ್ನು ತುಂಬುವ ಇಂತಹ ಪ್ರವೃತ್ತಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಕುರಿತು ವರದಿಯಾಗಿಲ್ಲ.

ಇತ್ತೀಚೆಗೆ ಕಾಲೇಜು ವಾರ್ಷಿಕೋತ್ಸವ ನಡೆದಿರುವುದು ಸ್ಪಷ್ಟ. ಈ ಕುರಿತು ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ಸ್ಥಳೀಯ ಜಾಲತಾಣ ವರದಿ ಮಾಡಿದೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿದ ಈ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೇ ವಿದ್ಯಮಾನ ಈ ಹಿಂದೆಯೂ ನಡೆದಿತ್ತು. ಆ ಕುರಿತು ಪ್ರಕರಣ ಕೂಡ ದಾಖಲಾಗಿತ್ತು.

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆದಿತ್ತು. ಉನ್ಮತ್ತ ರೀತಿಯಲ್ಲಿ ವಿದ್ಯಾರ್ಥಿಗಳು ಬಾಬ್ರಿ ಮಸೀದಿಯ ಪ್ರತಿಕೃತಿಯನ್ನು ಕೆಡಗಿ ಜೈ ಶ್ರೀರಾಮ್‌, ಜೈ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದರು. 1992 ರ ಬಾಬರಿ ಮಸೀದಿ ಉರುಳಿಸುವಿಕೆಯನ್ನು ಮರುರೂಪಿಸಿದ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಅಬೂಬಕ್ಕರ್‌ ಸಿದ್ದಿಕ್‌ ಎಂಬುವವರು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 298 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿಯೂ ಈ ಘಟನೆ ಮರುಕಳಿಸಿದೆ.

ಇದನ್ನೂ ಓದಿರಿ: ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ನಾಲ್ವರ ಮೇಲೆ ದೂರು ದಾಖಲು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಶವಂತ ಡೊಂಗೆ ಮಾತನಾಡಿ, “ಪುಸ್ತುತ ಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವ ಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು” ಎಂದಿರುವುದಾಗಿ ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ವರದಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯ ಗಳಿಸಬಹುದು. ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನ ಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು. ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...