Homeಕರ್ನಾಟಕಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ‘ಬಾಬ್ರಿ ಮಸೀದಿ ದ್ವಂಸ’ ಕುರಿತು ವಿದ್ಯಾರ್ಥಿಗಳು ಪ್ರಹಸನ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

2022-23ನೇ ಸಾಲಿನ ವಾರ್ಷಿಕೋತ್ಸದಲ್ಲಿ ವಿದ್ಯಾರ್ಥಿಗಳು ಸ್ಕಿಟ್ ಪ್ರದರ್ಶನ ಮಾಡಿರುವ ಸಂಬಂಧ ‘ಇನ್ಟಾಗ್ರಾಮ್‌’ನಲ್ಲಿ ಕ್ಲಿಪ್‌ ಹಂಚಿಕೊಳ್ಳಲಾಗಿದೆ. ಈ ವಿಡಿಯೊಕ್ಕೆ ಅನೇಕರು ‘ಜೈ ಶ್ರೀರಾಮ್’ ಎಂದು ಕಮೆಂಟ್ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಡ್ಡಿ ಧರಿಸಿದ ವೇಶದಲ್ಲಿರುವ ವಿದ್ಯಾರ್ಥಿ ಪಾತ್ರಧಾರಿಗಳು, ಕೇಸರಿ ವಸ್ತ್ರ ಧರಿಸಿದ ಪಾತ್ರಧಾರಿಗಳು, ರಾಮಮಂದಿರ ಎಂದು ಹೆಸರಿಸಲಾದ ಕಲಾಕೃತಿ ಮತ್ತು ಮಸೀದಿಯನ್ನು ಹೋಲುವ ಕಲಾಕೃತಿಯನ್ನು ಈ ವಿಡಿಯೊ ಕ್ಲಿಪ್‌ನಲ್ಲಿ ಕಾಣಬಹುದು.

ಭಗವಾಧ್ವಜ ಹಿಡಿದ, ಆರ್‌ಎಸ್‌ಎಸ್ ಚಡ್ಡಿ ತೊಟ್ಟಿರುವ ವಿದ್ಯಾರ್ಥಿ ಪಾತ್ರಧಾರಿಗಳು ರಾಮಮಂದಿರ ರಕ್ಷಣೆಗಾಗಿ  ಹೋರಾಡಿದವರು ಎಂಬಂತೆ ತೋರಿಸಲಾಗಿದೆ. ಮುಸ್ಲಿಂ ಅರಸರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬಂತೆಯೂ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂದಿರ ರಕ್ಷಣೆಗಾಗಿ ಪ್ರಾಣ ತೆತ್ತಿದ್ದಾರೆ ಎಂಬಂತೆಯೂ ವೇದಿಕೆ ಮೇಲೆ ಪ್ರದರ್ಶನ ಮಾಡಲಾಗಿದೆ. ಹೋಮ ಹವನ ಮಾಡುತ್ತಿರುವ ಪ್ರಧಾನಿ ಮೋದಿಯವರ ಪಾತ್ರವನ್ನೂ ತೋರಿಸಲಾಗಿದೆ. ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷವನ್ನು ತುಂಬುವ ಇಂತಹ ಪ್ರವೃತ್ತಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಕುರಿತು ವರದಿಯಾಗಿಲ್ಲ.

ಇತ್ತೀಚೆಗೆ ಕಾಲೇಜು ವಾರ್ಷಿಕೋತ್ಸವ ನಡೆದಿರುವುದು ಸ್ಪಷ್ಟ. ಈ ಕುರಿತು ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ಸ್ಥಳೀಯ ಜಾಲತಾಣ ವರದಿ ಮಾಡಿದೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿದ ಈ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೇ ವಿದ್ಯಮಾನ ಈ ಹಿಂದೆಯೂ ನಡೆದಿತ್ತು. ಆ ಕುರಿತು ಪ್ರಕರಣ ಕೂಡ ದಾಖಲಾಗಿತ್ತು.

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆದಿತ್ತು. ಉನ್ಮತ್ತ ರೀತಿಯಲ್ಲಿ ವಿದ್ಯಾರ್ಥಿಗಳು ಬಾಬ್ರಿ ಮಸೀದಿಯ ಪ್ರತಿಕೃತಿಯನ್ನು ಕೆಡಗಿ ಜೈ ಶ್ರೀರಾಮ್‌, ಜೈ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದರು. 1992 ರ ಬಾಬರಿ ಮಸೀದಿ ಉರುಳಿಸುವಿಕೆಯನ್ನು ಮರುರೂಪಿಸಿದ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಅಬೂಬಕ್ಕರ್‌ ಸಿದ್ದಿಕ್‌ ಎಂಬುವವರು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 298 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿಯೂ ಈ ಘಟನೆ ಮರುಕಳಿಸಿದೆ.

ಇದನ್ನೂ ಓದಿರಿ: ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ನಾಲ್ವರ ಮೇಲೆ ದೂರು ದಾಖಲು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಶವಂತ ಡೊಂಗೆ ಮಾತನಾಡಿ, “ಪುಸ್ತುತ ಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವ ಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು” ಎಂದಿರುವುದಾಗಿ ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ವರದಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯ ಗಳಿಸಬಹುದು. ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನ ಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು. ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...