Homeಕರ್ನಾಟಕಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ‘ಬಾಬ್ರಿ ಮಸೀದಿ ದ್ವಂಸ’ ಕುರಿತು ವಿದ್ಯಾರ್ಥಿಗಳು ಪ್ರಹಸನ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

2022-23ನೇ ಸಾಲಿನ ವಾರ್ಷಿಕೋತ್ಸದಲ್ಲಿ ವಿದ್ಯಾರ್ಥಿಗಳು ಸ್ಕಿಟ್ ಪ್ರದರ್ಶನ ಮಾಡಿರುವ ಸಂಬಂಧ ‘ಇನ್ಟಾಗ್ರಾಮ್‌’ನಲ್ಲಿ ಕ್ಲಿಪ್‌ ಹಂಚಿಕೊಳ್ಳಲಾಗಿದೆ. ಈ ವಿಡಿಯೊಕ್ಕೆ ಅನೇಕರು ‘ಜೈ ಶ್ರೀರಾಮ್’ ಎಂದು ಕಮೆಂಟ್ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಡ್ಡಿ ಧರಿಸಿದ ವೇಶದಲ್ಲಿರುವ ವಿದ್ಯಾರ್ಥಿ ಪಾತ್ರಧಾರಿಗಳು, ಕೇಸರಿ ವಸ್ತ್ರ ಧರಿಸಿದ ಪಾತ್ರಧಾರಿಗಳು, ರಾಮಮಂದಿರ ಎಂದು ಹೆಸರಿಸಲಾದ ಕಲಾಕೃತಿ ಮತ್ತು ಮಸೀದಿಯನ್ನು ಹೋಲುವ ಕಲಾಕೃತಿಯನ್ನು ಈ ವಿಡಿಯೊ ಕ್ಲಿಪ್‌ನಲ್ಲಿ ಕಾಣಬಹುದು.

ಭಗವಾಧ್ವಜ ಹಿಡಿದ, ಆರ್‌ಎಸ್‌ಎಸ್ ಚಡ್ಡಿ ತೊಟ್ಟಿರುವ ವಿದ್ಯಾರ್ಥಿ ಪಾತ್ರಧಾರಿಗಳು ರಾಮಮಂದಿರ ರಕ್ಷಣೆಗಾಗಿ  ಹೋರಾಡಿದವರು ಎಂಬಂತೆ ತೋರಿಸಲಾಗಿದೆ. ಮುಸ್ಲಿಂ ಅರಸರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬಂತೆಯೂ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂದಿರ ರಕ್ಷಣೆಗಾಗಿ ಪ್ರಾಣ ತೆತ್ತಿದ್ದಾರೆ ಎಂಬಂತೆಯೂ ವೇದಿಕೆ ಮೇಲೆ ಪ್ರದರ್ಶನ ಮಾಡಲಾಗಿದೆ. ಹೋಮ ಹವನ ಮಾಡುತ್ತಿರುವ ಪ್ರಧಾನಿ ಮೋದಿಯವರ ಪಾತ್ರವನ್ನೂ ತೋರಿಸಲಾಗಿದೆ. ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷವನ್ನು ತುಂಬುವ ಇಂತಹ ಪ್ರವೃತ್ತಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಕುರಿತು ವರದಿಯಾಗಿಲ್ಲ.

ಇತ್ತೀಚೆಗೆ ಕಾಲೇಜು ವಾರ್ಷಿಕೋತ್ಸವ ನಡೆದಿರುವುದು ಸ್ಪಷ್ಟ. ಈ ಕುರಿತು ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ಸ್ಥಳೀಯ ಜಾಲತಾಣ ವರದಿ ಮಾಡಿದೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿದ ಈ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೇ ವಿದ್ಯಮಾನ ಈ ಹಿಂದೆಯೂ ನಡೆದಿತ್ತು. ಆ ಕುರಿತು ಪ್ರಕರಣ ಕೂಡ ದಾಖಲಾಗಿತ್ತು.

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆದಿತ್ತು. ಉನ್ಮತ್ತ ರೀತಿಯಲ್ಲಿ ವಿದ್ಯಾರ್ಥಿಗಳು ಬಾಬ್ರಿ ಮಸೀದಿಯ ಪ್ರತಿಕೃತಿಯನ್ನು ಕೆಡಗಿ ಜೈ ಶ್ರೀರಾಮ್‌, ಜೈ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದರು. 1992 ರ ಬಾಬರಿ ಮಸೀದಿ ಉರುಳಿಸುವಿಕೆಯನ್ನು ಮರುರೂಪಿಸಿದ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಅಬೂಬಕ್ಕರ್‌ ಸಿದ್ದಿಕ್‌ ಎಂಬುವವರು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 298 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿಯೂ ಈ ಘಟನೆ ಮರುಕಳಿಸಿದೆ.

ಇದನ್ನೂ ಓದಿರಿ: ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ನಾಲ್ವರ ಮೇಲೆ ದೂರು ದಾಖಲು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಶವಂತ ಡೊಂಗೆ ಮಾತನಾಡಿ, “ಪುಸ್ತುತ ಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವ ಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು” ಎಂದಿರುವುದಾಗಿ ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ವರದಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯ ಗಳಿಸಬಹುದು. ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನ ಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು. ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...