Homeಕರ್ನಾಟಕಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ‘ಬಾಬ್ರಿ ಮಸೀದಿ ದ್ವಂಸ’ ಕುರಿತು ವಿದ್ಯಾರ್ಥಿಗಳು ಪ್ರಹಸನ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

2022-23ನೇ ಸಾಲಿನ ವಾರ್ಷಿಕೋತ್ಸದಲ್ಲಿ ವಿದ್ಯಾರ್ಥಿಗಳು ಸ್ಕಿಟ್ ಪ್ರದರ್ಶನ ಮಾಡಿರುವ ಸಂಬಂಧ ‘ಇನ್ಟಾಗ್ರಾಮ್‌’ನಲ್ಲಿ ಕ್ಲಿಪ್‌ ಹಂಚಿಕೊಳ್ಳಲಾಗಿದೆ. ಈ ವಿಡಿಯೊಕ್ಕೆ ಅನೇಕರು ‘ಜೈ ಶ್ರೀರಾಮ್’ ಎಂದು ಕಮೆಂಟ್ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಡ್ಡಿ ಧರಿಸಿದ ವೇಶದಲ್ಲಿರುವ ವಿದ್ಯಾರ್ಥಿ ಪಾತ್ರಧಾರಿಗಳು, ಕೇಸರಿ ವಸ್ತ್ರ ಧರಿಸಿದ ಪಾತ್ರಧಾರಿಗಳು, ರಾಮಮಂದಿರ ಎಂದು ಹೆಸರಿಸಲಾದ ಕಲಾಕೃತಿ ಮತ್ತು ಮಸೀದಿಯನ್ನು ಹೋಲುವ ಕಲಾಕೃತಿಯನ್ನು ಈ ವಿಡಿಯೊ ಕ್ಲಿಪ್‌ನಲ್ಲಿ ಕಾಣಬಹುದು.

ಭಗವಾಧ್ವಜ ಹಿಡಿದ, ಆರ್‌ಎಸ್‌ಎಸ್ ಚಡ್ಡಿ ತೊಟ್ಟಿರುವ ವಿದ್ಯಾರ್ಥಿ ಪಾತ್ರಧಾರಿಗಳು ರಾಮಮಂದಿರ ರಕ್ಷಣೆಗಾಗಿ  ಹೋರಾಡಿದವರು ಎಂಬಂತೆ ತೋರಿಸಲಾಗಿದೆ. ಮುಸ್ಲಿಂ ಅರಸರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬಂತೆಯೂ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂದಿರ ರಕ್ಷಣೆಗಾಗಿ ಪ್ರಾಣ ತೆತ್ತಿದ್ದಾರೆ ಎಂಬಂತೆಯೂ ವೇದಿಕೆ ಮೇಲೆ ಪ್ರದರ್ಶನ ಮಾಡಲಾಗಿದೆ. ಹೋಮ ಹವನ ಮಾಡುತ್ತಿರುವ ಪ್ರಧಾನಿ ಮೋದಿಯವರ ಪಾತ್ರವನ್ನೂ ತೋರಿಸಲಾಗಿದೆ. ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷವನ್ನು ತುಂಬುವ ಇಂತಹ ಪ್ರವೃತ್ತಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಕುರಿತು ವರದಿಯಾಗಿಲ್ಲ.

ಇತ್ತೀಚೆಗೆ ಕಾಲೇಜು ವಾರ್ಷಿಕೋತ್ಸವ ನಡೆದಿರುವುದು ಸ್ಪಷ್ಟ. ಈ ಕುರಿತು ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ಸ್ಥಳೀಯ ಜಾಲತಾಣ ವರದಿ ಮಾಡಿದೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿದ ಈ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೇ ವಿದ್ಯಮಾನ ಈ ಹಿಂದೆಯೂ ನಡೆದಿತ್ತು. ಆ ಕುರಿತು ಪ್ರಕರಣ ಕೂಡ ದಾಖಲಾಗಿತ್ತು.

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆದಿತ್ತು. ಉನ್ಮತ್ತ ರೀತಿಯಲ್ಲಿ ವಿದ್ಯಾರ್ಥಿಗಳು ಬಾಬ್ರಿ ಮಸೀದಿಯ ಪ್ರತಿಕೃತಿಯನ್ನು ಕೆಡಗಿ ಜೈ ಶ್ರೀರಾಮ್‌, ಜೈ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದರು. 1992 ರ ಬಾಬರಿ ಮಸೀದಿ ಉರುಳಿಸುವಿಕೆಯನ್ನು ಮರುರೂಪಿಸಿದ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಅಬೂಬಕ್ಕರ್‌ ಸಿದ್ದಿಕ್‌ ಎಂಬುವವರು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 298 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿಯೂ ಈ ಘಟನೆ ಮರುಕಳಿಸಿದೆ.

ಇದನ್ನೂ ಓದಿರಿ: ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ನಾಲ್ವರ ಮೇಲೆ ದೂರು ದಾಖಲು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಶವಂತ ಡೊಂಗೆ ಮಾತನಾಡಿ, “ಪುಸ್ತುತ ಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವ ಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು” ಎಂದಿರುವುದಾಗಿ ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ವರದಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯ ಗಳಿಸಬಹುದು. ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನ ಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು. ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...