Homeಕರ್ನಾಟಕಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ‘ಬಾಬ್ರಿ ಮಸೀದಿ ದ್ವಂಸ’ ಕುರಿತು ವಿದ್ಯಾರ್ಥಿಗಳು ಪ್ರಹಸನ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

2022-23ನೇ ಸಾಲಿನ ವಾರ್ಷಿಕೋತ್ಸದಲ್ಲಿ ವಿದ್ಯಾರ್ಥಿಗಳು ಸ್ಕಿಟ್ ಪ್ರದರ್ಶನ ಮಾಡಿರುವ ಸಂಬಂಧ ‘ಇನ್ಟಾಗ್ರಾಮ್‌’ನಲ್ಲಿ ಕ್ಲಿಪ್‌ ಹಂಚಿಕೊಳ್ಳಲಾಗಿದೆ. ಈ ವಿಡಿಯೊಕ್ಕೆ ಅನೇಕರು ‘ಜೈ ಶ್ರೀರಾಮ್’ ಎಂದು ಕಮೆಂಟ್ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಡ್ಡಿ ಧರಿಸಿದ ವೇಶದಲ್ಲಿರುವ ವಿದ್ಯಾರ್ಥಿ ಪಾತ್ರಧಾರಿಗಳು, ಕೇಸರಿ ವಸ್ತ್ರ ಧರಿಸಿದ ಪಾತ್ರಧಾರಿಗಳು, ರಾಮಮಂದಿರ ಎಂದು ಹೆಸರಿಸಲಾದ ಕಲಾಕೃತಿ ಮತ್ತು ಮಸೀದಿಯನ್ನು ಹೋಲುವ ಕಲಾಕೃತಿಯನ್ನು ಈ ವಿಡಿಯೊ ಕ್ಲಿಪ್‌ನಲ್ಲಿ ಕಾಣಬಹುದು.

ಭಗವಾಧ್ವಜ ಹಿಡಿದ, ಆರ್‌ಎಸ್‌ಎಸ್ ಚಡ್ಡಿ ತೊಟ್ಟಿರುವ ವಿದ್ಯಾರ್ಥಿ ಪಾತ್ರಧಾರಿಗಳು ರಾಮಮಂದಿರ ರಕ್ಷಣೆಗಾಗಿ  ಹೋರಾಡಿದವರು ಎಂಬಂತೆ ತೋರಿಸಲಾಗಿದೆ. ಮುಸ್ಲಿಂ ಅರಸರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬಂತೆಯೂ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂದಿರ ರಕ್ಷಣೆಗಾಗಿ ಪ್ರಾಣ ತೆತ್ತಿದ್ದಾರೆ ಎಂಬಂತೆಯೂ ವೇದಿಕೆ ಮೇಲೆ ಪ್ರದರ್ಶನ ಮಾಡಲಾಗಿದೆ. ಹೋಮ ಹವನ ಮಾಡುತ್ತಿರುವ ಪ್ರಧಾನಿ ಮೋದಿಯವರ ಪಾತ್ರವನ್ನೂ ತೋರಿಸಲಾಗಿದೆ. ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷವನ್ನು ತುಂಬುವ ಇಂತಹ ಪ್ರವೃತ್ತಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಕುರಿತು ವರದಿಯಾಗಿಲ್ಲ.

ಇತ್ತೀಚೆಗೆ ಕಾಲೇಜು ವಾರ್ಷಿಕೋತ್ಸವ ನಡೆದಿರುವುದು ಸ್ಪಷ್ಟ. ಈ ಕುರಿತು ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ಸ್ಥಳೀಯ ಜಾಲತಾಣ ವರದಿ ಮಾಡಿದೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿದ ಈ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೇ ವಿದ್ಯಮಾನ ಈ ಹಿಂದೆಯೂ ನಡೆದಿತ್ತು. ಆ ಕುರಿತು ಪ್ರಕರಣ ಕೂಡ ದಾಖಲಾಗಿತ್ತು.

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆದಿತ್ತು. ಉನ್ಮತ್ತ ರೀತಿಯಲ್ಲಿ ವಿದ್ಯಾರ್ಥಿಗಳು ಬಾಬ್ರಿ ಮಸೀದಿಯ ಪ್ರತಿಕೃತಿಯನ್ನು ಕೆಡಗಿ ಜೈ ಶ್ರೀರಾಮ್‌, ಜೈ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದರು. 1992 ರ ಬಾಬರಿ ಮಸೀದಿ ಉರುಳಿಸುವಿಕೆಯನ್ನು ಮರುರೂಪಿಸಿದ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಅಬೂಬಕ್ಕರ್‌ ಸಿದ್ದಿಕ್‌ ಎಂಬುವವರು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 298 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿಯೂ ಈ ಘಟನೆ ಮರುಕಳಿಸಿದೆ.

ಇದನ್ನೂ ಓದಿರಿ: ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ನಾಲ್ವರ ಮೇಲೆ ದೂರು ದಾಖಲು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಶವಂತ ಡೊಂಗೆ ಮಾತನಾಡಿ, “ಪುಸ್ತುತ ಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವ ಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು” ಎಂದಿರುವುದಾಗಿ ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ವರದಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯ ಗಳಿಸಬಹುದು. ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನ ಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು. ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...