Homeಕರ್ನಾಟಕಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕಾಲೇಜಿನ ವಾರ್ಷಿಕೋತ್ಸವದಲ್ಲಿ ‘ಬಾಬ್ರಿ ಮಸೀದಿ ದ್ವಂಸ’ ಕುರಿತು ವಿದ್ಯಾರ್ಥಿಗಳು ಪ್ರಹಸನ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ.

2022-23ನೇ ಸಾಲಿನ ವಾರ್ಷಿಕೋತ್ಸದಲ್ಲಿ ವಿದ್ಯಾರ್ಥಿಗಳು ಸ್ಕಿಟ್ ಪ್ರದರ್ಶನ ಮಾಡಿರುವ ಸಂಬಂಧ ‘ಇನ್ಟಾಗ್ರಾಮ್‌’ನಲ್ಲಿ ಕ್ಲಿಪ್‌ ಹಂಚಿಕೊಳ್ಳಲಾಗಿದೆ. ಈ ವಿಡಿಯೊಕ್ಕೆ ಅನೇಕರು ‘ಜೈ ಶ್ರೀರಾಮ್’ ಎಂದು ಕಮೆಂಟ್ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಡ್ಡಿ ಧರಿಸಿದ ವೇಶದಲ್ಲಿರುವ ವಿದ್ಯಾರ್ಥಿ ಪಾತ್ರಧಾರಿಗಳು, ಕೇಸರಿ ವಸ್ತ್ರ ಧರಿಸಿದ ಪಾತ್ರಧಾರಿಗಳು, ರಾಮಮಂದಿರ ಎಂದು ಹೆಸರಿಸಲಾದ ಕಲಾಕೃತಿ ಮತ್ತು ಮಸೀದಿಯನ್ನು ಹೋಲುವ ಕಲಾಕೃತಿಯನ್ನು ಈ ವಿಡಿಯೊ ಕ್ಲಿಪ್‌ನಲ್ಲಿ ಕಾಣಬಹುದು.

ಭಗವಾಧ್ವಜ ಹಿಡಿದ, ಆರ್‌ಎಸ್‌ಎಸ್ ಚಡ್ಡಿ ತೊಟ್ಟಿರುವ ವಿದ್ಯಾರ್ಥಿ ಪಾತ್ರಧಾರಿಗಳು ರಾಮಮಂದಿರ ರಕ್ಷಣೆಗಾಗಿ  ಹೋರಾಡಿದವರು ಎಂಬಂತೆ ತೋರಿಸಲಾಗಿದೆ. ಮುಸ್ಲಿಂ ಅರಸರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬಂತೆಯೂ, ಆರ್‌ಎಸ್‌ಎಸ್‌ ಕಾರ್ಯಕರ್ತರು ಮಂದಿರ ರಕ್ಷಣೆಗಾಗಿ ಪ್ರಾಣ ತೆತ್ತಿದ್ದಾರೆ ಎಂಬಂತೆಯೂ ವೇದಿಕೆ ಮೇಲೆ ಪ್ರದರ್ಶನ ಮಾಡಲಾಗಿದೆ. ಹೋಮ ಹವನ ಮಾಡುತ್ತಿರುವ ಪ್ರಧಾನಿ ಮೋದಿಯವರ ಪಾತ್ರವನ್ನೂ ತೋರಿಸಲಾಗಿದೆ. ಮಕ್ಕಳ ಮನಸ್ಸಿನಲ್ಲಿ ಕೋಮುದ್ವೇಷವನ್ನು ತುಂಬುವ ಇಂತಹ ಪ್ರವೃತ್ತಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಕುರಿತು ವರದಿಯಾಗಿಲ್ಲ.

ಇತ್ತೀಚೆಗೆ ಕಾಲೇಜು ವಾರ್ಷಿಕೋತ್ಸವ ನಡೆದಿರುವುದು ಸ್ಪಷ್ಟ. ಈ ಕುರಿತು ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ಸ್ಥಳೀಯ ಜಾಲತಾಣ ವರದಿ ಮಾಡಿದೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಸೇರಿದ ಈ ವಿದ್ಯಾಸಂಸ್ಥೆಯಲ್ಲಿ ಇಂತಹದ್ದೇ ವಿದ್ಯಮಾನ ಈ ಹಿಂದೆಯೂ ನಡೆದಿತ್ತು. ಆ ಕುರಿತು ಪ್ರಕರಣ ಕೂಡ ದಾಖಲಾಗಿತ್ತು.

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆಸಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಕ್ರೀಡಾ ವಾರ್ಷಿಕೋತ್ಸವದ ಅಂಗವಾಗಿ ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ ನಡೆದಿತ್ತು. ಉನ್ಮತ್ತ ರೀತಿಯಲ್ಲಿ ವಿದ್ಯಾರ್ಥಿಗಳು ಬಾಬ್ರಿ ಮಸೀದಿಯ ಪ್ರತಿಕೃತಿಯನ್ನು ಕೆಡಗಿ ಜೈ ಶ್ರೀರಾಮ್‌, ಜೈ ಭಾರತ್‌ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದರು. 1992 ರ ಬಾಬರಿ ಮಸೀದಿ ಉರುಳಿಸುವಿಕೆಯನ್ನು ಮರುರೂಪಿಸಿದ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಅಬೂಬಕ್ಕರ್‌ ಸಿದ್ದಿಕ್‌ ಎಂಬುವವರು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 298 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿಯೂ ಈ ಘಟನೆ ಮರುಕಳಿಸಿದೆ.

ಇದನ್ನೂ ಓದಿರಿ: ಬಾಬರೀ ಮಸೀದಿ ಧ್ವಂಸದ ಅಣಕು ಪ್ರದರ್ಶನ: ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ನಾಲ್ವರ ಮೇಲೆ ದೂರು ದಾಖಲು

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಶವಂತ ಡೊಂಗೆ ಮಾತನಾಡಿ, “ಪುಸ್ತುತ ಕಾಲಘಟ್ಟದಲ್ಲಿ ಹೊಸ ವಿನ್ಯಾಸ, ತಂತ್ರಜ್ಞಾನ ಹಾಗೂ ಕಲೆಗೆ ಭರಪೂರವಾದ ಅವಕಾಶಗಳು ಯುವ ಜನಾಂಗದ ಮುಂದಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ರಾಷ್ಟ್ರೀಯ ಶಿಕ್ಷಣ ಪದ್ಧತಿಯಿಂದ ಇಂದು ವಿದ್ಯಾರ್ಥಿಗಳಿಗೆ ಅವಕಾಶಗಳು ವಿಸ್ತಾರವಾಗಿದೆ. ಮುಖ್ಯವಾಗಿ ಸಂಶೋಧನೆಯಲ್ಲಿ ತೊಡಗಿಕೊಂಡಲ್ಲಿ ಯಶಸ್ಸು ಗಳಿಸಬಹುದು” ಎಂದಿರುವುದಾಗಿ ‘ಪುತ್ತೂರು ಸುದ್ದಿ ನ್ಯೂಸ್.ಕಾಂ’ ವರದಿ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಸಹನೆ, ಸತತ ಪ್ರಯತ್ನವಿದ್ದರೆ ಯಶಸ್ಸು ಗಳಿಸಬಹುದು. ಅದರೊಂದಿಗೆ ಆತ್ಮವಿಶ್ವಾಸ ಹೊಂದಿದ್ದರೆ ನಮ್ಮ ಕಾರ್ಯದಲ್ಲಿ ಜಯ ಗಳಿಸಬಹುದು. ರಾಷ್ಟ್ರೀಯ ಶಿಕ್ಷಣ ನೀತಿ ಪದ್ಧತಿಯು ಈ ಮಣ್ಣಿನ ಚಿಂತನೆಯ ಶಿಕ್ಷಣವನ್ನು ವಿದ್ಯಾರ್ಥಿಗಳ ಮುಂದಿಡುತ್ತದೆ. ಹಾಗಾಗಿ ನಮ್ಮ ಚಿಂತನೆಗಳು ಬದಲಾಗಬೇಕು. ಅದು ಭಾರತಕ್ಕೆ ಹೊಂದಿಕೆಯಾಗುವಂತಿರಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...